News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Archive

RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

105
ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.

‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್​ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನರ‍್ದೇಶಕ ಎಸ್.ಎಸ್​. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್​ ರೇಸ್​ನಲ್ಲಿ ಗೆದ್ದಿದೆ. ‘ಆರ್​ಆರ್​ಆರ್​’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್​’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವರ‍್ಡ್​ ಫಂಕ್ಷನ್​ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….

  • ಉಪಯುಕ್ತ ಮಾಹಿತಿ

    ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

    ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

    ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…

  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

    Loading

  • ಸುದ್ದಿ

    ಶಿವಸೇನಾ ಬೆಂಬಲಿಗರ ಒತ್ತಾಯ ; ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ,.!!

    ಶಿವಸೇನೆ ಮುಖ್ಯಸ್ಥ ಉದ್ಧವ್​ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು   ದಾಖಲಿಸಿದ  ಮತ್ತು ಅವರಿಗೆ  ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ  ಕೇಳಿ ಬಂದಿದೆ. ಇನ್ನು ಇದನ್ನು  ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್​ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು  ಉದ್ಧವ್​ ಠಾಕ್ರೆ ಮುನ್ನಡೆಸುತ್ತಿದ್ದು, ಅವರು  ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…