ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ?

ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ. ಈ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಂಡ್ರೆ ಸಾಕು. ಹಾಗಂತ ಹಣ ಮಾಡೋಕಂತಾನೇ ವಾಕ್ ಮಾಡ್ಬೇಡಿ, ಏಕೆಂದರೆ ಇದು ನಿಮ್ಮ ಪಾಕೆಟ್ ಮನಿಯಾಗುತ್ತದೆಯೇ ಹೊರತು ಸ್ಯಾಲರಿಯಲ್ಲ. ಈ ಆ್ಯಪ್ಗಳ ನಡುವೆ ಹಲವು ಒಂದೇ ತರ ಇದ್ದರೂ ರಿವಾರ್ಡ್ ಪಾಯಿಂಟ್ಸ್ ಕೊಡುವುದರಲ್ಲಿ, ಪೇಮೆಂಟ್ ವಿಧಾನಗಳಲ್ಲಿ ವ್ಯತ್ಯಾಸವಿದೆ. ಇಷ್ಟಕ್ಕೂ ನೀವು ಇದನ್ನು ಡೌನ್ಲೋಡ್ ಮಾಡಿಕೊಂಡರೆ ಏನಾಗುತ್ತಂದ್ರೆ, ನಿಮಗೂ ವಾಕಿಂಗ್ಗೆ ಮೂಡ್ ಬರುತ್ತದೆ, ರಿವಾರ್ಡ್ನಿಂದಾಗಿ ನಿಮ್ಮ ಗೆಳೆಯರನ್ನೂ ಫಿಟ್ನೆಸ್ ಕಡೆ ಸೆಳೆಯುತ್ತೀರಿ ಅಲ್ಲದೆ, ಸುಮ್ಮನೇ ದಿನಾ ಮಾಡುವ ಕೆಲಸಕ್ಕೇ ಯಾರೋ ದುಡ್ಡು ಕೊಡ್ತಾರಂದ್ರೆ ಖುಷೀನೇ ತಾನೇ? ಅವೆಲ್ಲ ಏನು, ಯಾವ ಅಪ್ಲಿಕೇಶನ್ಗಳಿವು ಎಂದು ನೋಡಿ ಬರೋಣ.

1. ಸ್ವೆಟ್ಕಾಯ್ನ್ :ಇದು ವಾಕ್ ಮಾಡಲು ದುಡ್ಡು ನೀಡುವ ಆ್ಯಪ್ಗಳಲ್ಲಿ ಬಹಳ ಜನಪ್ರಿಯವಾದುದು. ಇದು ಫೋನ್ನಲ್ಲಿ ರನ್ ಮೋಡ್ನಲ್ಲಿದ್ದರೆ ಸಾಕು, ನೀವು ದಿನದಲ್ಲಿ ಎಷ್ಟು ಹೆಜ್ಜೆ ನಡೆದಿರು ಎಂಬುದನ್ನಿದು ಲೆಕ್ಕ ಹಾಕುತ್ತಿರುತ್ತದೆ. ಓಡಿದರೆ ಬಹಳ ಬೇಗ ಹೆಚ್ಚು ಸ್ವೆಟ್ಕಾಯಿನ್ಸ್ ಪಡೆಯಬಹುದು. ಈ ಕರೆನ್ಸಿಯನ್ನುರಿವಾರ್ಡ್ ಅಥವಾ ಕ್ಯಾಶ್ ಆಗಿ ಪಡೆದುಕೊಳ್ಳಬಹುದು. ಗಿಫ್ಟ್ ಕಾರ್ಡ್ ಆಯ್ಕೆ ಕಡಿಮೆ ಇದೆ. ಆದರೆ, 20,000 ಸ್ವೆಟ್ಕಾಯಿನ್ಸ್ ಒಟ್ಟು ಮಾಡಿದರೆ ಪೇಪಲ್ ಮೂಲಕ 1 ಸಾವಿರ ಡಾಲರ್ ಹಣವನ್ನು ಪಡೆಯಬಹುದು. ನೆನಪಿರಲಿ, ಇದು ನೀವು ಮನೆಯೊಳಗೆ ನಡೆದ ಹೆಜ್ಜೆಗೆಲ್ಲ ಲೆಕ್ಕ ಕೊಡೋಲ್ಲ. ಏನಿದ್ದರೂ ಹೊರಾಂಗಣದಲ್ಲೇ ನಡೆಯಬೇಕು. ಫೋನ್ನ ಜಿಪಿಎಸ್ ಬಳಸಿಕೊಳ್ಳುತ್ತದೆ. ಈ ಅಪ್ಲಿಕೇಶನ್ ಬಳಸಿ ನಿಮ್ಮ ದೈನಂದಿನ ಖರ್ಚಷ್ಟನ್ನಾದರೂ ವರ್ಷದಲ್ಲಿ ಪಡೆಯಬಹುದು.
2. ಲೈಫ್ ಕಾಯಿನ್ : ಇದು ಕೂಡಾ ಸ್ವೆಟ್ಕಾಯಿನ್ನಂತೆಯೇ ಕೆಲಸ ಮಾಡುತ್ತದೆ. ಇಲ್ಲಿ ಕೂಡಾ ಲೈಫ್ಕಾಯಿನ್ ಬದಲಾಗಿ ಕರೆನ್ಸಿ ಎಕ್ಸ್ಚೇಂಜ್ ಮಾಡಿಕೊಳ್ಳಬಹುದು. ಇದನ್ನು ಗಿಫ್ಟ್ ಕಾರ್ಡ್, ಕ್ರೀಡಾ ವಸ್ತುಗಳು, ಆ್ಯಪಲ್ ಐಫೋನ್ ಎಕ್ಸ್, ಆ್ಯಪಲ್ ಏರ್ಪಾಡ್ಸ್, ಆ್ಯಪಲ್ ವಾಚ್, ಹಾಗೂ ಅಮೇಜಾನ್, ಪೇಪಲ್ನಲ್ಲಿ ಬ್ಯಾಲೆನ್ಸ್ ಆಗಿ ಬದಲಾಯಿಸಿಕೊಳ್ಳಬಹುದು. ಇದರ ಅಂಬಾಸಿಡರ್ ಪ್ರೋಗ್ರಾಂನ ಸದಸ್ಯರಾದರೆ ಮತ್ತಷ್ಟು ಹಣವನ್ನು ಗಳಿಸಬಹುದು.

3. ಅಚೀವ್ಮೆಂಟ್ :ವಾಕಿಂಗ್, ಸ್ವಿಮ್ಮಿಂಗ್,. ಬೈಕಿಂಗ್ ಅಥವಾ ಸುಮ್ಮನೆ ಆಟವಾಡುವುದಕ್ಕೆ ಈ ಆ್ಯಪ್ ನಿಮಗೆ ಹಣ ನೀಡುತ್ತದೆ. ರಿಜಿಸ್ಟರ್ ಮಾಡಿದ್ದಕ್ಕೆ 6 ಪಾಯಿಂಟ್ಸ್, ಅಲ್ಲದೆ, ಪ್ರತಿದಿನ ನಿಮ್ಮ ಫುಡ್ ಇಂಟೇಕ್, ನಿದ್ರಾ ಸೈಕಲ್, ತೂಕಇಳಿಕೆ, ಸಾಧನೆಗಳನ್ನು ಸೋಷ್ಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದಕ್ಕೂ ಪಾಯಿಂಟ್ಸ್ ನೀಡುತ್ತದೆ. ಪ್ರತಿದಿನ ನಿಮ್ಮ ಚಟುವಟಿಕೆಗಳನ್ನು ಈ ಆ್ಯಪ್ನಲ್ಲಿ ಹಾಕುವುದಕ್ಕೆ ಗರಿಷ್ಠ 80 ಪಾಯಿಂಟ್ಸ್ ಹಾಗೂ ನಡಿಗೆಗೆ ಮತ್ತಷ್ಟು ಪಾಯಿಂಟ್ಸ್ ಸಿಗುತ್ತದೆ. 10000 ಪಾಯಿಂಟ್ಸ್ಗೆ 10 ಡಾಲರ್ ನೀಡಲಾಗುತ್ತದೆ.
4. ಸ್ಟೆಪ್ಬೆಟ್ : ಇದೂ ಕೂಡಾ ವಾಕಿಂಗ್ಗೆ ಹಣ ನೀಡುವ ಪಾಪುಲರ್ ಆ್ಯಪ್. ನಿಮ್ಮ ವರ್ಕೌಟ್ ರೂಟಿನ್ನಿಂದ ಹಣ ಗಳಿಸಬೇಕೆಂದರೆ ಇದು ನಿಮಗೆ ಪರ್ಫೆಕ್ಟ್ ಆ್ಯಪ್. ಇದರಲ್ಲಿ ನೀವು ಗುರಿ ಸಾಧಿಸಿ ಹಣ ಪಡೆಯಲೂ ಅವಕಾಶವಿದೆ, ಗುರಿ ಸಾಧಿಸದೆ ಹೋದರೆ ಹಣ ಕಳೆದುಕೊಳ್ಳಲೂಬೇಕಾಗುತ್ತದೆ. ಪ್ರೊಫೈಲ್ ಸೆಟ್ ಮಾಡಿದ ಕೂಡಲೇ ಆ್ಯಪ್ ನಿಮ್ಮ ಫಿಟ್ನೆಸ್ ಲೆವೆಲ್ ಅಳೆಯುತ್ತದೆ. ಪ್ರತಿ ವಾರ ಹಣ ಗೆಲ್ಲಲು ಒಂದಿಷ್ಟು ಗುರಿಗಳನ್ನು ನೀಡುತ್ತದೆ. ಸುಮಾರು 40 ಡಾಲರ್ ಹಣ ನೀವಿಲ್ಲಿ ಬೆಟ್ ಕಟ್ಟಬೇಕು. ಗುರಿ ಸಾಧಿಸದೆ ಹೋದರೆ ಇಷ್ಟನ್ನು ಕಳೆದುಕೊಳ್ಳಬೇಕಾಗುತ್ತದಲ್ಲ ಎಂಬ ಭಯಕ್ಕೇ ವರ್ಕೌಟ್ ಮಾಡೇಮಾಡುತ್ತೀರಿ.
5.ಹೈಜಿ : ಹೈಜಿ ಆ್ಯಪ್ ಡೌನ್ಲೋಡ್ ಮಾಡಿಕೊಂಡ ಬಳಿಕ ಹತ್ತಿರದ ಮೆಡಿಕಲ್ ಸ್ಟೋರ್ ಅಥವಾ ದೊಡ್ಡ ಆಹಾರ ಮಳಿಗೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು. ಆ ಮೂಲಕ ನಿಮ್ಮ ತೂಕ, ಬಿಪಿ, ಪಲ್ಸ್, ಹೆಜ್ಜೆಗಳು, ಬಿಎಂಐ, ಜಿಮ್ ಚೆಕ್ ಇನ್, ಬಾಡಿ ಫ್ಯಾಟ್ ಎಲ್ಲವನ್ನೂ ಹೈಜಿಗೆ ಅಪ್ಡೇಟ್ ಮಾಡಿ ಟ್ರ್ಯಾಕ್ ಮಾಡಬಹುದು. ಇಲ್ಲಿ ಕೂಡಾ ನಡೆಯಲು, ಟಾಸ್ಕ್ ಕಂಪ್ಲೀಟ್ ಮಾಡಲುಪಾಯಿಂಟ್ಸ್ ಸಿಗುತ್ತವೆ. ಅವನ್ನು ಹಣವಾಗಿ ರಿಡೀಮ್ ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.