ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ?

ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ. ಈ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಂಡ್ರೆ ಸಾಕು. ಹಾಗಂತ ಹಣ ಮಾಡೋಕಂತಾನೇ ವಾಕ್ ಮಾಡ್ಬೇಡಿ, ಏಕೆಂದರೆ ಇದು ನಿಮ್ಮ ಪಾಕೆಟ್ ಮನಿಯಾಗುತ್ತದೆಯೇ ಹೊರತು ಸ್ಯಾಲರಿಯಲ್ಲ. ಈ ಆ್ಯಪ್ಗಳ ನಡುವೆ ಹಲವು ಒಂದೇ ತರ ಇದ್ದರೂ ರಿವಾರ್ಡ್ ಪಾಯಿಂಟ್ಸ್ ಕೊಡುವುದರಲ್ಲಿ, ಪೇಮೆಂಟ್ ವಿಧಾನಗಳಲ್ಲಿ ವ್ಯತ್ಯಾಸವಿದೆ. ಇಷ್ಟಕ್ಕೂ ನೀವು ಇದನ್ನು ಡೌನ್ಲೋಡ್ ಮಾಡಿಕೊಂಡರೆ ಏನಾಗುತ್ತಂದ್ರೆ, ನಿಮಗೂ ವಾಕಿಂಗ್ಗೆ ಮೂಡ್ ಬರುತ್ತದೆ, ರಿವಾರ್ಡ್ನಿಂದಾಗಿ ನಿಮ್ಮ ಗೆಳೆಯರನ್ನೂ ಫಿಟ್ನೆಸ್ ಕಡೆ ಸೆಳೆಯುತ್ತೀರಿ ಅಲ್ಲದೆ, ಸುಮ್ಮನೇ ದಿನಾ ಮಾಡುವ ಕೆಲಸಕ್ಕೇ ಯಾರೋ ದುಡ್ಡು ಕೊಡ್ತಾರಂದ್ರೆ ಖುಷೀನೇ ತಾನೇ? ಅವೆಲ್ಲ ಏನು, ಯಾವ ಅಪ್ಲಿಕೇಶನ್ಗಳಿವು ಎಂದು ನೋಡಿ ಬರೋಣ.

1. ಸ್ವೆಟ್ಕಾಯ್ನ್ :ಇದು ವಾಕ್ ಮಾಡಲು ದುಡ್ಡು ನೀಡುವ ಆ್ಯಪ್ಗಳಲ್ಲಿ ಬಹಳ ಜನಪ್ರಿಯವಾದುದು. ಇದು ಫೋನ್ನಲ್ಲಿ ರನ್ ಮೋಡ್ನಲ್ಲಿದ್ದರೆ ಸಾಕು, ನೀವು ದಿನದಲ್ಲಿ ಎಷ್ಟು ಹೆಜ್ಜೆ ನಡೆದಿರು ಎಂಬುದನ್ನಿದು ಲೆಕ್ಕ ಹಾಕುತ್ತಿರುತ್ತದೆ. ಓಡಿದರೆ ಬಹಳ ಬೇಗ ಹೆಚ್ಚು ಸ್ವೆಟ್ಕಾಯಿನ್ಸ್ ಪಡೆಯಬಹುದು. ಈ ಕರೆನ್ಸಿಯನ್ನುರಿವಾರ್ಡ್ ಅಥವಾ ಕ್ಯಾಶ್ ಆಗಿ ಪಡೆದುಕೊಳ್ಳಬಹುದು. ಗಿಫ್ಟ್ ಕಾರ್ಡ್ ಆಯ್ಕೆ ಕಡಿಮೆ ಇದೆ. ಆದರೆ, 20,000 ಸ್ವೆಟ್ಕಾಯಿನ್ಸ್ ಒಟ್ಟು ಮಾಡಿದರೆ ಪೇಪಲ್ ಮೂಲಕ 1 ಸಾವಿರ ಡಾಲರ್ ಹಣವನ್ನು ಪಡೆಯಬಹುದು. ನೆನಪಿರಲಿ, ಇದು ನೀವು ಮನೆಯೊಳಗೆ ನಡೆದ ಹೆಜ್ಜೆಗೆಲ್ಲ ಲೆಕ್ಕ ಕೊಡೋಲ್ಲ. ಏನಿದ್ದರೂ ಹೊರಾಂಗಣದಲ್ಲೇ ನಡೆಯಬೇಕು. ಫೋನ್ನ ಜಿಪಿಎಸ್ ಬಳಸಿಕೊಳ್ಳುತ್ತದೆ. ಈ ಅಪ್ಲಿಕೇಶನ್ ಬಳಸಿ ನಿಮ್ಮ ದೈನಂದಿನ ಖರ್ಚಷ್ಟನ್ನಾದರೂ ವರ್ಷದಲ್ಲಿ ಪಡೆಯಬಹುದು.
2. ಲೈಫ್ ಕಾಯಿನ್ : ಇದು ಕೂಡಾ ಸ್ವೆಟ್ಕಾಯಿನ್ನಂತೆಯೇ ಕೆಲಸ ಮಾಡುತ್ತದೆ. ಇಲ್ಲಿ ಕೂಡಾ ಲೈಫ್ಕಾಯಿನ್ ಬದಲಾಗಿ ಕರೆನ್ಸಿ ಎಕ್ಸ್ಚೇಂಜ್ ಮಾಡಿಕೊಳ್ಳಬಹುದು. ಇದನ್ನು ಗಿಫ್ಟ್ ಕಾರ್ಡ್, ಕ್ರೀಡಾ ವಸ್ತುಗಳು, ಆ್ಯಪಲ್ ಐಫೋನ್ ಎಕ್ಸ್, ಆ್ಯಪಲ್ ಏರ್ಪಾಡ್ಸ್, ಆ್ಯಪಲ್ ವಾಚ್, ಹಾಗೂ ಅಮೇಜಾನ್, ಪೇಪಲ್ನಲ್ಲಿ ಬ್ಯಾಲೆನ್ಸ್ ಆಗಿ ಬದಲಾಯಿಸಿಕೊಳ್ಳಬಹುದು. ಇದರ ಅಂಬಾಸಿಡರ್ ಪ್ರೋಗ್ರಾಂನ ಸದಸ್ಯರಾದರೆ ಮತ್ತಷ್ಟು ಹಣವನ್ನು ಗಳಿಸಬಹುದು.

3. ಅಚೀವ್ಮೆಂಟ್ :ವಾಕಿಂಗ್, ಸ್ವಿಮ್ಮಿಂಗ್,. ಬೈಕಿಂಗ್ ಅಥವಾ ಸುಮ್ಮನೆ ಆಟವಾಡುವುದಕ್ಕೆ ಈ ಆ್ಯಪ್ ನಿಮಗೆ ಹಣ ನೀಡುತ್ತದೆ. ರಿಜಿಸ್ಟರ್ ಮಾಡಿದ್ದಕ್ಕೆ 6 ಪಾಯಿಂಟ್ಸ್, ಅಲ್ಲದೆ, ಪ್ರತಿದಿನ ನಿಮ್ಮ ಫುಡ್ ಇಂಟೇಕ್, ನಿದ್ರಾ ಸೈಕಲ್, ತೂಕಇಳಿಕೆ, ಸಾಧನೆಗಳನ್ನು ಸೋಷ್ಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದಕ್ಕೂ ಪಾಯಿಂಟ್ಸ್ ನೀಡುತ್ತದೆ. ಪ್ರತಿದಿನ ನಿಮ್ಮ ಚಟುವಟಿಕೆಗಳನ್ನು ಈ ಆ್ಯಪ್ನಲ್ಲಿ ಹಾಕುವುದಕ್ಕೆ ಗರಿಷ್ಠ 80 ಪಾಯಿಂಟ್ಸ್ ಹಾಗೂ ನಡಿಗೆಗೆ ಮತ್ತಷ್ಟು ಪಾಯಿಂಟ್ಸ್ ಸಿಗುತ್ತದೆ. 10000 ಪಾಯಿಂಟ್ಸ್ಗೆ 10 ಡಾಲರ್ ನೀಡಲಾಗುತ್ತದೆ.
4. ಸ್ಟೆಪ್ಬೆಟ್ : ಇದೂ ಕೂಡಾ ವಾಕಿಂಗ್ಗೆ ಹಣ ನೀಡುವ ಪಾಪುಲರ್ ಆ್ಯಪ್. ನಿಮ್ಮ ವರ್ಕೌಟ್ ರೂಟಿನ್ನಿಂದ ಹಣ ಗಳಿಸಬೇಕೆಂದರೆ ಇದು ನಿಮಗೆ ಪರ್ಫೆಕ್ಟ್ ಆ್ಯಪ್. ಇದರಲ್ಲಿ ನೀವು ಗುರಿ ಸಾಧಿಸಿ ಹಣ ಪಡೆಯಲೂ ಅವಕಾಶವಿದೆ, ಗುರಿ ಸಾಧಿಸದೆ ಹೋದರೆ ಹಣ ಕಳೆದುಕೊಳ್ಳಲೂಬೇಕಾಗುತ್ತದೆ. ಪ್ರೊಫೈಲ್ ಸೆಟ್ ಮಾಡಿದ ಕೂಡಲೇ ಆ್ಯಪ್ ನಿಮ್ಮ ಫಿಟ್ನೆಸ್ ಲೆವೆಲ್ ಅಳೆಯುತ್ತದೆ. ಪ್ರತಿ ವಾರ ಹಣ ಗೆಲ್ಲಲು ಒಂದಿಷ್ಟು ಗುರಿಗಳನ್ನು ನೀಡುತ್ತದೆ. ಸುಮಾರು 40 ಡಾಲರ್ ಹಣ ನೀವಿಲ್ಲಿ ಬೆಟ್ ಕಟ್ಟಬೇಕು. ಗುರಿ ಸಾಧಿಸದೆ ಹೋದರೆ ಇಷ್ಟನ್ನು ಕಳೆದುಕೊಳ್ಳಬೇಕಾಗುತ್ತದಲ್ಲ ಎಂಬ ಭಯಕ್ಕೇ ವರ್ಕೌಟ್ ಮಾಡೇಮಾಡುತ್ತೀರಿ.
5.ಹೈಜಿ : ಹೈಜಿ ಆ್ಯಪ್ ಡೌನ್ಲೋಡ್ ಮಾಡಿಕೊಂಡ ಬಳಿಕ ಹತ್ತಿರದ ಮೆಡಿಕಲ್ ಸ್ಟೋರ್ ಅಥವಾ ದೊಡ್ಡ ಆಹಾರ ಮಳಿಗೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು. ಆ ಮೂಲಕ ನಿಮ್ಮ ತೂಕ, ಬಿಪಿ, ಪಲ್ಸ್, ಹೆಜ್ಜೆಗಳು, ಬಿಎಂಐ, ಜಿಮ್ ಚೆಕ್ ಇನ್, ಬಾಡಿ ಫ್ಯಾಟ್ ಎಲ್ಲವನ್ನೂ ಹೈಜಿಗೆ ಅಪ್ಡೇಟ್ ಮಾಡಿ ಟ್ರ್ಯಾಕ್ ಮಾಡಬಹುದು. ಇಲ್ಲಿ ಕೂಡಾ ನಡೆಯಲು, ಟಾಸ್ಕ್ ಕಂಪ್ಲೀಟ್ ಮಾಡಲುಪಾಯಿಂಟ್ಸ್ ಸಿಗುತ್ತವೆ. ಅವನ್ನು ಹಣವಾಗಿ ರಿಡೀಮ್ ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.