News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

105

ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ?

ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ. ಈ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡ್ರೆ ಸಾಕು. ಹಾಗಂತ ಹಣ ಮಾಡೋಕಂತಾನೇ ವಾಕ್ ಮಾಡ್ಬೇಡಿ, ಏಕೆಂದರೆ ಇದು ನಿಮ್ಮ ಪಾಕೆಟ್ ಮನಿಯಾಗುತ್ತದೆಯೇ ಹೊರತು ಸ್ಯಾಲರಿಯಲ್ಲ. ಈ ಆ್ಯಪ್‌ಗಳ ನಡುವೆ ಹಲವು ಒಂದೇ ತರ ಇದ್ದರೂ ರಿವಾರ್ಡ್ ಪಾಯಿಂಟ್ಸ್ ಕೊಡುವುದರಲ್ಲಿ, ಪೇಮೆಂಟ್ ವಿಧಾನಗಳಲ್ಲಿ ವ್ಯತ್ಯಾಸವಿದೆ. ಇಷ್ಟಕ್ಕೂ ನೀವು ಇದನ್ನು ಡೌನ್‌ಲೋಡ್ ಮಾಡಿಕೊಂಡರೆ ಏನಾಗುತ್ತಂದ್ರೆ, ನಿಮಗೂ ವಾಕಿಂಗ್‌ಗೆ ಮೂಡ್ ಬರುತ್ತದೆ, ರಿವಾರ್ಡ್‌ನಿಂದಾಗಿ ನಿಮ್ಮ ಗೆಳೆಯರನ್ನೂ ಫಿಟ್ನೆಸ್ ಕಡೆ ಸೆಳೆಯುತ್ತೀರಿ ಅಲ್ಲದೆ, ಸುಮ್ಮನೇ ದಿನಾ ಮಾಡುವ ಕೆಲಸಕ್ಕೇ ಯಾರೋ ದುಡ್ಡು ಕೊಡ್ತಾರಂದ್ರೆ ಖುಷೀನೇ ತಾನೇ? ಅವೆಲ್ಲ ಏನು, ಯಾವ ಅಪ್ಲಿಕೇಶನ್‌ಗಳಿವು ಎಂದು ನೋಡಿ ಬರೋಣ.

1. ಸ್ವೆಟ್‌ಕಾಯ್ನ್ :ಇದು ವಾಕ್ ಮಾಡಲು ದುಡ್ಡು ನೀಡುವ ಆ್ಯಪ್‌ಗಳಲ್ಲಿ ಬಹಳ ಜನಪ್ರಿಯವಾದುದು. ಇದು ಫೋನ್‌ನಲ್ಲಿ ರನ್ ಮೋಡ್‌ನಲ್ಲಿದ್ದರೆ ಸಾಕು, ನೀವು ದಿನದಲ್ಲಿ ಎಷ್ಟು ಹೆಜ್ಜೆ ನಡೆದಿರು ಎಂಬುದನ್ನಿದು ಲೆಕ್ಕ ಹಾಕುತ್ತಿರುತ್ತದೆ. ಓಡಿದರೆ ಬಹಳ ಬೇಗ ಹೆಚ್ಚು ಸ್ವೆಟ್‌ಕಾಯಿನ್ಸ್ ಪಡೆಯಬಹುದು. ಈ ಕರೆನ್ಸಿಯನ್ನುರಿವಾರ್ಡ್ ಅಥವಾ ಕ್ಯಾಶ್ ಆಗಿ ಪಡೆದುಕೊಳ್ಳಬಹುದು. ಗಿಫ್ಟ್ ಕಾರ್ಡ್ ಆಯ್ಕೆ ಕಡಿಮೆ ಇದೆ. ಆದರೆ, 20,000 ಸ್ವೆಟ್‌ಕಾಯಿನ್ಸ್ ಒಟ್ಟು ಮಾಡಿದರೆ ಪೇಪಲ್ ಮೂಲಕ 1 ಸಾವಿರ ಡಾಲರ್ ಹಣವನ್ನು ಪಡೆಯಬಹುದು. ನೆನಪಿರಲಿ, ಇದು ನೀವು ಮನೆಯೊಳಗೆ ನಡೆದ ಹೆಜ್ಜೆಗೆಲ್ಲ ಲೆಕ್ಕ ಕೊಡೋಲ್ಲ. ಏನಿದ್ದರೂ ಹೊರಾಂಗಣದಲ್ಲೇ ನಡೆಯಬೇಕು. ಫೋನ್‌ನ ಜಿಪಿಎಸ್ ಬಳಸಿಕೊಳ್ಳುತ್ತದೆ. ಈ ಅಪ್ಲಿಕೇಶನ್ ಬಳಸಿ ನಿಮ್ಮ ದೈನಂದಿನ ಖರ್ಚಷ್ಟನ್ನಾದರೂ ವರ್ಷದಲ್ಲಿ ಪಡೆಯಬಹುದು.

2. ಲೈಫ್ ಕಾಯಿನ್ : ಇದು ಕೂಡಾ ಸ್ವೆಟ್‌ಕಾಯಿನ್‌ನಂತೆಯೇ ಕೆಲಸ ಮಾಡುತ್ತದೆ. ಇಲ್ಲಿ ಕೂಡಾ ಲೈಫ್‌ಕಾಯಿನ್ ಬದಲಾಗಿ ಕರೆನ್ಸಿ ಎಕ್ಸ್‌ಚೇಂಜ್ ಮಾಡಿಕೊಳ್ಳಬಹುದು. ಇದನ್ನು ಗಿಫ್ಟ್ ಕಾರ್ಡ್, ಕ್ರೀಡಾ ವಸ್ತುಗಳು, ಆ್ಯಪಲ್ ಐಫೋನ್ ಎಕ್ಸ್, ಆ್ಯಪಲ್ ಏರ್‌ಪಾಡ್ಸ್, ಆ್ಯಪಲ್ ವಾಚ್, ಹಾಗೂ ಅಮೇಜಾನ್, ಪೇಪಲ್‌ನಲ್ಲಿ ಬ್ಯಾಲೆನ್ಸ್ ಆಗಿ ಬದಲಾಯಿಸಿಕೊಳ್ಳಬಹುದು. ಇದರ ಅಂಬಾಸಿಡರ್ ಪ್ರೋಗ್ರಾಂನ ಸದಸ್ಯರಾದರೆ ಮತ್ತಷ್ಟು ಹಣವನ್ನು ಗಳಿಸಬಹುದು. 

3. ಅಚೀವ್‌ಮೆಂಟ್ :ವಾಕಿಂಗ್, ಸ್ವಿಮ್ಮಿಂಗ್,. ಬೈಕಿಂಗ್ ಅಥವಾ ಸುಮ್ಮನೆ ಆಟವಾಡುವುದಕ್ಕೆ ಈ ಆ್ಯಪ್ ನಿಮಗೆ ಹಣ ನೀಡುತ್ತದೆ. ರಿಜಿಸ್ಟರ್ ಮಾಡಿದ್ದಕ್ಕೆ 6 ಪಾಯಿಂಟ್ಸ್, ಅಲ್ಲದೆ, ಪ್ರತಿದಿನ ನಿಮ್ಮ ಫುಡ್ ಇಂಟೇಕ್, ನಿದ್ರಾ ಸೈಕಲ್, ತೂಕಇಳಿಕೆ, ಸಾಧನೆಗಳನ್ನು ಸೋಷ್ಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದಕ್ಕೂ ಪಾಯಿಂಟ್ಸ್ ನೀಡುತ್ತದೆ. ಪ್ರತಿದಿನ ನಿಮ್ಮ ಚಟುವಟಿಕೆಗಳನ್ನು ಈ ಆ್ಯಪ್‌ನಲ್ಲಿ ಹಾಕುವುದಕ್ಕೆ ಗರಿಷ್ಠ 80 ಪಾಯಿಂಟ್ಸ್ ಹಾಗೂ ನಡಿಗೆಗೆ ಮತ್ತಷ್ಟು ಪಾಯಿಂಟ್ಸ್ ಸಿಗುತ್ತದೆ. 10000 ಪಾಯಿಂಟ್ಸ್‌ಗೆ 10 ಡಾಲರ್ ನೀಡಲಾಗುತ್ತದೆ. 

4. ಸ್ಟೆಪ್‌ಬೆಟ್ : ಇದೂ ಕೂಡಾ ವಾಕಿಂಗ್‌ಗೆ ಹಣ ನೀಡುವ ಪಾಪುಲರ್ ಆ್ಯಪ್. ನಿಮ್ಮ ವರ್ಕೌಟ್ ರೂಟಿನ್‌ನಿಂದ ಹಣ ಗಳಿಸಬೇಕೆಂದರೆ ಇದು ನಿಮಗೆ ಪರ್ಫೆಕ್ಟ್ ಆ್ಯಪ್. ಇದರಲ್ಲಿ ನೀವು ಗುರಿ ಸಾಧಿಸಿ ಹಣ ಪಡೆಯಲೂ ಅವಕಾಶವಿದೆ, ಗುರಿ ಸಾಧಿಸದೆ ಹೋದರೆ ಹಣ ಕಳೆದುಕೊಳ್ಳಲೂಬೇಕಾಗುತ್ತದೆ. ಪ್ರೊಫೈಲ್ ಸೆಟ್ ಮಾಡಿದ ಕೂಡಲೇ ಆ್ಯಪ್ ನಿಮ್ಮ ಫಿಟ್ನೆಸ್ ಲೆವೆಲ್ ಅಳೆಯುತ್ತದೆ. ಪ್ರತಿ ವಾರ ಹಣ ಗೆಲ್ಲಲು ಒಂದಿಷ್ಟು ಗುರಿಗಳನ್ನು ನೀಡುತ್ತದೆ. ಸುಮಾರು 40 ಡಾಲರ್ ಹಣ ನೀವಿಲ್ಲಿ ಬೆಟ್ ಕಟ್ಟಬೇಕು. ಗುರಿ ಸಾಧಿಸದೆ ಹೋದರೆ ಇಷ್ಟನ್ನು ಕಳೆದುಕೊಳ್ಳಬೇಕಾಗುತ್ತದಲ್ಲ ಎಂಬ ಭಯಕ್ಕೇ ವರ್ಕೌಟ್ ಮಾಡೇಮಾಡುತ್ತೀರಿ.

5.ಹೈಜಿ : ಹೈಜಿ ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ಬಳಿಕ ಹತ್ತಿರದ ಮೆಡಿಕಲ್ ಸ್ಟೋರ್ ಅಥವಾ ದೊಡ್ಡ ಆಹಾರ ಮಳಿಗೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು. ಆ ಮೂಲಕ ನಿಮ್ಮ ತೂಕ, ಬಿಪಿ, ಪಲ್ಸ್, ಹೆಜ್ಜೆಗಳು, ಬಿಎಂಐ, ಜಿಮ್ ಚೆಕ್ ಇನ್, ಬಾಡಿ ಫ್ಯಾಟ್ ಎಲ್ಲವನ್ನೂ ಹೈಜಿಗೆ ಅಪ್ಡೇಟ್ ಮಾಡಿ ಟ್ರ್ಯಾಕ್ ಮಾಡಬಹುದು. ಇಲ್ಲಿ ಕೂಡಾ ನಡೆಯಲು, ಟಾಸ್ಕ್ ಕಂಪ್ಲೀಟ್ ಮಾಡಲುಪಾಯಿಂಟ್ಸ್ ಸಿಗುತ್ತವೆ. ಅವನ್ನು ಹಣವಾಗಿ ರಿಡೀಮ್ ಮಾಡಿಕೊಳ್ಳಬಹುದು. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…

  • ಸುದ್ದಿ

    ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

    ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.  ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು…

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…

  • ಉಪಯುಕ್ತ ಮಾಹಿತಿ

    ಗರ್ಭಿಣಿಯರಿಗೆ ವರದಾನವಾಗಿರುವ ಮಾತೃಪೂರ್ಣ ಯೋಜನೆಯ ಬಗ್ಗೆ ನಿಮಗೆಷ್ಟು ಗೊತ್ತು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲಾ ತಾಯಿಂದಿರಿಗೆ ಉಪಯೋಗವಾಗಲಿ..

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.  ಶಿಶು ಮರಣ  ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾ‍ಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…

  • ಸುದ್ದಿ

    ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್, ಉಪಾಸನಾ ಕೊನಿಡೆಲಾ ಇನ್ನು ಅನೇಕ ಸ್ಟಾರ್​ಗಳು,..ಇದಕ್ಕೆ ಕಾರಣ.?ಇಲ್ಲಿದೆ ನೋಡಿ….

    ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ  ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು  ಎಲ್ಲರ  ಟ್ವೀಟ್​ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…