News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

105

ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ?

ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ. ಈ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡ್ರೆ ಸಾಕು. ಹಾಗಂತ ಹಣ ಮಾಡೋಕಂತಾನೇ ವಾಕ್ ಮಾಡ್ಬೇಡಿ, ಏಕೆಂದರೆ ಇದು ನಿಮ್ಮ ಪಾಕೆಟ್ ಮನಿಯಾಗುತ್ತದೆಯೇ ಹೊರತು ಸ್ಯಾಲರಿಯಲ್ಲ. ಈ ಆ್ಯಪ್‌ಗಳ ನಡುವೆ ಹಲವು ಒಂದೇ ತರ ಇದ್ದರೂ ರಿವಾರ್ಡ್ ಪಾಯಿಂಟ್ಸ್ ಕೊಡುವುದರಲ್ಲಿ, ಪೇಮೆಂಟ್ ವಿಧಾನಗಳಲ್ಲಿ ವ್ಯತ್ಯಾಸವಿದೆ. ಇಷ್ಟಕ್ಕೂ ನೀವು ಇದನ್ನು ಡೌನ್‌ಲೋಡ್ ಮಾಡಿಕೊಂಡರೆ ಏನಾಗುತ್ತಂದ್ರೆ, ನಿಮಗೂ ವಾಕಿಂಗ್‌ಗೆ ಮೂಡ್ ಬರುತ್ತದೆ, ರಿವಾರ್ಡ್‌ನಿಂದಾಗಿ ನಿಮ್ಮ ಗೆಳೆಯರನ್ನೂ ಫಿಟ್ನೆಸ್ ಕಡೆ ಸೆಳೆಯುತ್ತೀರಿ ಅಲ್ಲದೆ, ಸುಮ್ಮನೇ ದಿನಾ ಮಾಡುವ ಕೆಲಸಕ್ಕೇ ಯಾರೋ ದುಡ್ಡು ಕೊಡ್ತಾರಂದ್ರೆ ಖುಷೀನೇ ತಾನೇ? ಅವೆಲ್ಲ ಏನು, ಯಾವ ಅಪ್ಲಿಕೇಶನ್‌ಗಳಿವು ಎಂದು ನೋಡಿ ಬರೋಣ.

1. ಸ್ವೆಟ್‌ಕಾಯ್ನ್ :ಇದು ವಾಕ್ ಮಾಡಲು ದುಡ್ಡು ನೀಡುವ ಆ್ಯಪ್‌ಗಳಲ್ಲಿ ಬಹಳ ಜನಪ್ರಿಯವಾದುದು. ಇದು ಫೋನ್‌ನಲ್ಲಿ ರನ್ ಮೋಡ್‌ನಲ್ಲಿದ್ದರೆ ಸಾಕು, ನೀವು ದಿನದಲ್ಲಿ ಎಷ್ಟು ಹೆಜ್ಜೆ ನಡೆದಿರು ಎಂಬುದನ್ನಿದು ಲೆಕ್ಕ ಹಾಕುತ್ತಿರುತ್ತದೆ. ಓಡಿದರೆ ಬಹಳ ಬೇಗ ಹೆಚ್ಚು ಸ್ವೆಟ್‌ಕಾಯಿನ್ಸ್ ಪಡೆಯಬಹುದು. ಈ ಕರೆನ್ಸಿಯನ್ನುರಿವಾರ್ಡ್ ಅಥವಾ ಕ್ಯಾಶ್ ಆಗಿ ಪಡೆದುಕೊಳ್ಳಬಹುದು. ಗಿಫ್ಟ್ ಕಾರ್ಡ್ ಆಯ್ಕೆ ಕಡಿಮೆ ಇದೆ. ಆದರೆ, 20,000 ಸ್ವೆಟ್‌ಕಾಯಿನ್ಸ್ ಒಟ್ಟು ಮಾಡಿದರೆ ಪೇಪಲ್ ಮೂಲಕ 1 ಸಾವಿರ ಡಾಲರ್ ಹಣವನ್ನು ಪಡೆಯಬಹುದು. ನೆನಪಿರಲಿ, ಇದು ನೀವು ಮನೆಯೊಳಗೆ ನಡೆದ ಹೆಜ್ಜೆಗೆಲ್ಲ ಲೆಕ್ಕ ಕೊಡೋಲ್ಲ. ಏನಿದ್ದರೂ ಹೊರಾಂಗಣದಲ್ಲೇ ನಡೆಯಬೇಕು. ಫೋನ್‌ನ ಜಿಪಿಎಸ್ ಬಳಸಿಕೊಳ್ಳುತ್ತದೆ. ಈ ಅಪ್ಲಿಕೇಶನ್ ಬಳಸಿ ನಿಮ್ಮ ದೈನಂದಿನ ಖರ್ಚಷ್ಟನ್ನಾದರೂ ವರ್ಷದಲ್ಲಿ ಪಡೆಯಬಹುದು.

2. ಲೈಫ್ ಕಾಯಿನ್ : ಇದು ಕೂಡಾ ಸ್ವೆಟ್‌ಕಾಯಿನ್‌ನಂತೆಯೇ ಕೆಲಸ ಮಾಡುತ್ತದೆ. ಇಲ್ಲಿ ಕೂಡಾ ಲೈಫ್‌ಕಾಯಿನ್ ಬದಲಾಗಿ ಕರೆನ್ಸಿ ಎಕ್ಸ್‌ಚೇಂಜ್ ಮಾಡಿಕೊಳ್ಳಬಹುದು. ಇದನ್ನು ಗಿಫ್ಟ್ ಕಾರ್ಡ್, ಕ್ರೀಡಾ ವಸ್ತುಗಳು, ಆ್ಯಪಲ್ ಐಫೋನ್ ಎಕ್ಸ್, ಆ್ಯಪಲ್ ಏರ್‌ಪಾಡ್ಸ್, ಆ್ಯಪಲ್ ವಾಚ್, ಹಾಗೂ ಅಮೇಜಾನ್, ಪೇಪಲ್‌ನಲ್ಲಿ ಬ್ಯಾಲೆನ್ಸ್ ಆಗಿ ಬದಲಾಯಿಸಿಕೊಳ್ಳಬಹುದು. ಇದರ ಅಂಬಾಸಿಡರ್ ಪ್ರೋಗ್ರಾಂನ ಸದಸ್ಯರಾದರೆ ಮತ್ತಷ್ಟು ಹಣವನ್ನು ಗಳಿಸಬಹುದು. 

3. ಅಚೀವ್‌ಮೆಂಟ್ :ವಾಕಿಂಗ್, ಸ್ವಿಮ್ಮಿಂಗ್,. ಬೈಕಿಂಗ್ ಅಥವಾ ಸುಮ್ಮನೆ ಆಟವಾಡುವುದಕ್ಕೆ ಈ ಆ್ಯಪ್ ನಿಮಗೆ ಹಣ ನೀಡುತ್ತದೆ. ರಿಜಿಸ್ಟರ್ ಮಾಡಿದ್ದಕ್ಕೆ 6 ಪಾಯಿಂಟ್ಸ್, ಅಲ್ಲದೆ, ಪ್ರತಿದಿನ ನಿಮ್ಮ ಫುಡ್ ಇಂಟೇಕ್, ನಿದ್ರಾ ಸೈಕಲ್, ತೂಕಇಳಿಕೆ, ಸಾಧನೆಗಳನ್ನು ಸೋಷ್ಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದಕ್ಕೂ ಪಾಯಿಂಟ್ಸ್ ನೀಡುತ್ತದೆ. ಪ್ರತಿದಿನ ನಿಮ್ಮ ಚಟುವಟಿಕೆಗಳನ್ನು ಈ ಆ್ಯಪ್‌ನಲ್ಲಿ ಹಾಕುವುದಕ್ಕೆ ಗರಿಷ್ಠ 80 ಪಾಯಿಂಟ್ಸ್ ಹಾಗೂ ನಡಿಗೆಗೆ ಮತ್ತಷ್ಟು ಪಾಯಿಂಟ್ಸ್ ಸಿಗುತ್ತದೆ. 10000 ಪಾಯಿಂಟ್ಸ್‌ಗೆ 10 ಡಾಲರ್ ನೀಡಲಾಗುತ್ತದೆ. 

4. ಸ್ಟೆಪ್‌ಬೆಟ್ : ಇದೂ ಕೂಡಾ ವಾಕಿಂಗ್‌ಗೆ ಹಣ ನೀಡುವ ಪಾಪುಲರ್ ಆ್ಯಪ್. ನಿಮ್ಮ ವರ್ಕೌಟ್ ರೂಟಿನ್‌ನಿಂದ ಹಣ ಗಳಿಸಬೇಕೆಂದರೆ ಇದು ನಿಮಗೆ ಪರ್ಫೆಕ್ಟ್ ಆ್ಯಪ್. ಇದರಲ್ಲಿ ನೀವು ಗುರಿ ಸಾಧಿಸಿ ಹಣ ಪಡೆಯಲೂ ಅವಕಾಶವಿದೆ, ಗುರಿ ಸಾಧಿಸದೆ ಹೋದರೆ ಹಣ ಕಳೆದುಕೊಳ್ಳಲೂಬೇಕಾಗುತ್ತದೆ. ಪ್ರೊಫೈಲ್ ಸೆಟ್ ಮಾಡಿದ ಕೂಡಲೇ ಆ್ಯಪ್ ನಿಮ್ಮ ಫಿಟ್ನೆಸ್ ಲೆವೆಲ್ ಅಳೆಯುತ್ತದೆ. ಪ್ರತಿ ವಾರ ಹಣ ಗೆಲ್ಲಲು ಒಂದಿಷ್ಟು ಗುರಿಗಳನ್ನು ನೀಡುತ್ತದೆ. ಸುಮಾರು 40 ಡಾಲರ್ ಹಣ ನೀವಿಲ್ಲಿ ಬೆಟ್ ಕಟ್ಟಬೇಕು. ಗುರಿ ಸಾಧಿಸದೆ ಹೋದರೆ ಇಷ್ಟನ್ನು ಕಳೆದುಕೊಳ್ಳಬೇಕಾಗುತ್ತದಲ್ಲ ಎಂಬ ಭಯಕ್ಕೇ ವರ್ಕೌಟ್ ಮಾಡೇಮಾಡುತ್ತೀರಿ.

5.ಹೈಜಿ : ಹೈಜಿ ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ಬಳಿಕ ಹತ್ತಿರದ ಮೆಡಿಕಲ್ ಸ್ಟೋರ್ ಅಥವಾ ದೊಡ್ಡ ಆಹಾರ ಮಳಿಗೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು. ಆ ಮೂಲಕ ನಿಮ್ಮ ತೂಕ, ಬಿಪಿ, ಪಲ್ಸ್, ಹೆಜ್ಜೆಗಳು, ಬಿಎಂಐ, ಜಿಮ್ ಚೆಕ್ ಇನ್, ಬಾಡಿ ಫ್ಯಾಟ್ ಎಲ್ಲವನ್ನೂ ಹೈಜಿಗೆ ಅಪ್ಡೇಟ್ ಮಾಡಿ ಟ್ರ್ಯಾಕ್ ಮಾಡಬಹುದು. ಇಲ್ಲಿ ಕೂಡಾ ನಡೆಯಲು, ಟಾಸ್ಕ್ ಕಂಪ್ಲೀಟ್ ಮಾಡಲುಪಾಯಿಂಟ್ಸ್ ಸಿಗುತ್ತವೆ. ಅವನ್ನು ಹಣವಾಗಿ ರಿಡೀಮ್ ಮಾಡಿಕೊಳ್ಳಬಹುದು. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…

  • inspirational, ದೇಶ-ವಿದೇಶ, ಸುದ್ದಿ

    ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

    ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…

  • ವಿಸ್ಮಯ ಜಗತ್ತು

    ಈ ಊರಿನ ಗಂಡಸರಿಗೆ ಮಾತ್ರ, ಹೆಣ್ಣು ದೆವ್ವಗಳು ಕೊಡುತ್ತಿರುವ ಕಾಟವಾದ್ರೂ ಏನು ಗೊತ್ತಾ..?ಶಾಕ್ ಆಗ್ತೀರಾ!ಈ ಲೇಖನ ಓದಿ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.