News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

105

ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ?

ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ. ಈ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡ್ರೆ ಸಾಕು. ಹಾಗಂತ ಹಣ ಮಾಡೋಕಂತಾನೇ ವಾಕ್ ಮಾಡ್ಬೇಡಿ, ಏಕೆಂದರೆ ಇದು ನಿಮ್ಮ ಪಾಕೆಟ್ ಮನಿಯಾಗುತ್ತದೆಯೇ ಹೊರತು ಸ್ಯಾಲರಿಯಲ್ಲ. ಈ ಆ್ಯಪ್‌ಗಳ ನಡುವೆ ಹಲವು ಒಂದೇ ತರ ಇದ್ದರೂ ರಿವಾರ್ಡ್ ಪಾಯಿಂಟ್ಸ್ ಕೊಡುವುದರಲ್ಲಿ, ಪೇಮೆಂಟ್ ವಿಧಾನಗಳಲ್ಲಿ ವ್ಯತ್ಯಾಸವಿದೆ. ಇಷ್ಟಕ್ಕೂ ನೀವು ಇದನ್ನು ಡೌನ್‌ಲೋಡ್ ಮಾಡಿಕೊಂಡರೆ ಏನಾಗುತ್ತಂದ್ರೆ, ನಿಮಗೂ ವಾಕಿಂಗ್‌ಗೆ ಮೂಡ್ ಬರುತ್ತದೆ, ರಿವಾರ್ಡ್‌ನಿಂದಾಗಿ ನಿಮ್ಮ ಗೆಳೆಯರನ್ನೂ ಫಿಟ್ನೆಸ್ ಕಡೆ ಸೆಳೆಯುತ್ತೀರಿ ಅಲ್ಲದೆ, ಸುಮ್ಮನೇ ದಿನಾ ಮಾಡುವ ಕೆಲಸಕ್ಕೇ ಯಾರೋ ದುಡ್ಡು ಕೊಡ್ತಾರಂದ್ರೆ ಖುಷೀನೇ ತಾನೇ? ಅವೆಲ್ಲ ಏನು, ಯಾವ ಅಪ್ಲಿಕೇಶನ್‌ಗಳಿವು ಎಂದು ನೋಡಿ ಬರೋಣ.

1. ಸ್ವೆಟ್‌ಕಾಯ್ನ್ :ಇದು ವಾಕ್ ಮಾಡಲು ದುಡ್ಡು ನೀಡುವ ಆ್ಯಪ್‌ಗಳಲ್ಲಿ ಬಹಳ ಜನಪ್ರಿಯವಾದುದು. ಇದು ಫೋನ್‌ನಲ್ಲಿ ರನ್ ಮೋಡ್‌ನಲ್ಲಿದ್ದರೆ ಸಾಕು, ನೀವು ದಿನದಲ್ಲಿ ಎಷ್ಟು ಹೆಜ್ಜೆ ನಡೆದಿರು ಎಂಬುದನ್ನಿದು ಲೆಕ್ಕ ಹಾಕುತ್ತಿರುತ್ತದೆ. ಓಡಿದರೆ ಬಹಳ ಬೇಗ ಹೆಚ್ಚು ಸ್ವೆಟ್‌ಕಾಯಿನ್ಸ್ ಪಡೆಯಬಹುದು. ಈ ಕರೆನ್ಸಿಯನ್ನುರಿವಾರ್ಡ್ ಅಥವಾ ಕ್ಯಾಶ್ ಆಗಿ ಪಡೆದುಕೊಳ್ಳಬಹುದು. ಗಿಫ್ಟ್ ಕಾರ್ಡ್ ಆಯ್ಕೆ ಕಡಿಮೆ ಇದೆ. ಆದರೆ, 20,000 ಸ್ವೆಟ್‌ಕಾಯಿನ್ಸ್ ಒಟ್ಟು ಮಾಡಿದರೆ ಪೇಪಲ್ ಮೂಲಕ 1 ಸಾವಿರ ಡಾಲರ್ ಹಣವನ್ನು ಪಡೆಯಬಹುದು. ನೆನಪಿರಲಿ, ಇದು ನೀವು ಮನೆಯೊಳಗೆ ನಡೆದ ಹೆಜ್ಜೆಗೆಲ್ಲ ಲೆಕ್ಕ ಕೊಡೋಲ್ಲ. ಏನಿದ್ದರೂ ಹೊರಾಂಗಣದಲ್ಲೇ ನಡೆಯಬೇಕು. ಫೋನ್‌ನ ಜಿಪಿಎಸ್ ಬಳಸಿಕೊಳ್ಳುತ್ತದೆ. ಈ ಅಪ್ಲಿಕೇಶನ್ ಬಳಸಿ ನಿಮ್ಮ ದೈನಂದಿನ ಖರ್ಚಷ್ಟನ್ನಾದರೂ ವರ್ಷದಲ್ಲಿ ಪಡೆಯಬಹುದು.

2. ಲೈಫ್ ಕಾಯಿನ್ : ಇದು ಕೂಡಾ ಸ್ವೆಟ್‌ಕಾಯಿನ್‌ನಂತೆಯೇ ಕೆಲಸ ಮಾಡುತ್ತದೆ. ಇಲ್ಲಿ ಕೂಡಾ ಲೈಫ್‌ಕಾಯಿನ್ ಬದಲಾಗಿ ಕರೆನ್ಸಿ ಎಕ್ಸ್‌ಚೇಂಜ್ ಮಾಡಿಕೊಳ್ಳಬಹುದು. ಇದನ್ನು ಗಿಫ್ಟ್ ಕಾರ್ಡ್, ಕ್ರೀಡಾ ವಸ್ತುಗಳು, ಆ್ಯಪಲ್ ಐಫೋನ್ ಎಕ್ಸ್, ಆ್ಯಪಲ್ ಏರ್‌ಪಾಡ್ಸ್, ಆ್ಯಪಲ್ ವಾಚ್, ಹಾಗೂ ಅಮೇಜಾನ್, ಪೇಪಲ್‌ನಲ್ಲಿ ಬ್ಯಾಲೆನ್ಸ್ ಆಗಿ ಬದಲಾಯಿಸಿಕೊಳ್ಳಬಹುದು. ಇದರ ಅಂಬಾಸಿಡರ್ ಪ್ರೋಗ್ರಾಂನ ಸದಸ್ಯರಾದರೆ ಮತ್ತಷ್ಟು ಹಣವನ್ನು ಗಳಿಸಬಹುದು. 

3. ಅಚೀವ್‌ಮೆಂಟ್ :ವಾಕಿಂಗ್, ಸ್ವಿಮ್ಮಿಂಗ್,. ಬೈಕಿಂಗ್ ಅಥವಾ ಸುಮ್ಮನೆ ಆಟವಾಡುವುದಕ್ಕೆ ಈ ಆ್ಯಪ್ ನಿಮಗೆ ಹಣ ನೀಡುತ್ತದೆ. ರಿಜಿಸ್ಟರ್ ಮಾಡಿದ್ದಕ್ಕೆ 6 ಪಾಯಿಂಟ್ಸ್, ಅಲ್ಲದೆ, ಪ್ರತಿದಿನ ನಿಮ್ಮ ಫುಡ್ ಇಂಟೇಕ್, ನಿದ್ರಾ ಸೈಕಲ್, ತೂಕಇಳಿಕೆ, ಸಾಧನೆಗಳನ್ನು ಸೋಷ್ಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದಕ್ಕೂ ಪಾಯಿಂಟ್ಸ್ ನೀಡುತ್ತದೆ. ಪ್ರತಿದಿನ ನಿಮ್ಮ ಚಟುವಟಿಕೆಗಳನ್ನು ಈ ಆ್ಯಪ್‌ನಲ್ಲಿ ಹಾಕುವುದಕ್ಕೆ ಗರಿಷ್ಠ 80 ಪಾಯಿಂಟ್ಸ್ ಹಾಗೂ ನಡಿಗೆಗೆ ಮತ್ತಷ್ಟು ಪಾಯಿಂಟ್ಸ್ ಸಿಗುತ್ತದೆ. 10000 ಪಾಯಿಂಟ್ಸ್‌ಗೆ 10 ಡಾಲರ್ ನೀಡಲಾಗುತ್ತದೆ. 

4. ಸ್ಟೆಪ್‌ಬೆಟ್ : ಇದೂ ಕೂಡಾ ವಾಕಿಂಗ್‌ಗೆ ಹಣ ನೀಡುವ ಪಾಪುಲರ್ ಆ್ಯಪ್. ನಿಮ್ಮ ವರ್ಕೌಟ್ ರೂಟಿನ್‌ನಿಂದ ಹಣ ಗಳಿಸಬೇಕೆಂದರೆ ಇದು ನಿಮಗೆ ಪರ್ಫೆಕ್ಟ್ ಆ್ಯಪ್. ಇದರಲ್ಲಿ ನೀವು ಗುರಿ ಸಾಧಿಸಿ ಹಣ ಪಡೆಯಲೂ ಅವಕಾಶವಿದೆ, ಗುರಿ ಸಾಧಿಸದೆ ಹೋದರೆ ಹಣ ಕಳೆದುಕೊಳ್ಳಲೂಬೇಕಾಗುತ್ತದೆ. ಪ್ರೊಫೈಲ್ ಸೆಟ್ ಮಾಡಿದ ಕೂಡಲೇ ಆ್ಯಪ್ ನಿಮ್ಮ ಫಿಟ್ನೆಸ್ ಲೆವೆಲ್ ಅಳೆಯುತ್ತದೆ. ಪ್ರತಿ ವಾರ ಹಣ ಗೆಲ್ಲಲು ಒಂದಿಷ್ಟು ಗುರಿಗಳನ್ನು ನೀಡುತ್ತದೆ. ಸುಮಾರು 40 ಡಾಲರ್ ಹಣ ನೀವಿಲ್ಲಿ ಬೆಟ್ ಕಟ್ಟಬೇಕು. ಗುರಿ ಸಾಧಿಸದೆ ಹೋದರೆ ಇಷ್ಟನ್ನು ಕಳೆದುಕೊಳ್ಳಬೇಕಾಗುತ್ತದಲ್ಲ ಎಂಬ ಭಯಕ್ಕೇ ವರ್ಕೌಟ್ ಮಾಡೇಮಾಡುತ್ತೀರಿ.

5.ಹೈಜಿ : ಹೈಜಿ ಆ್ಯಪ್ ಡೌನ್‌ಲೋಡ್ ಮಾಡಿಕೊಂಡ ಬಳಿಕ ಹತ್ತಿರದ ಮೆಡಿಕಲ್ ಸ್ಟೋರ್ ಅಥವಾ ದೊಡ್ಡ ಆಹಾರ ಮಳಿಗೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು. ಆ ಮೂಲಕ ನಿಮ್ಮ ತೂಕ, ಬಿಪಿ, ಪಲ್ಸ್, ಹೆಜ್ಜೆಗಳು, ಬಿಎಂಐ, ಜಿಮ್ ಚೆಕ್ ಇನ್, ಬಾಡಿ ಫ್ಯಾಟ್ ಎಲ್ಲವನ್ನೂ ಹೈಜಿಗೆ ಅಪ್ಡೇಟ್ ಮಾಡಿ ಟ್ರ್ಯಾಕ್ ಮಾಡಬಹುದು. ಇಲ್ಲಿ ಕೂಡಾ ನಡೆಯಲು, ಟಾಸ್ಕ್ ಕಂಪ್ಲೀಟ್ ಮಾಡಲುಪಾಯಿಂಟ್ಸ್ ಸಿಗುತ್ತವೆ. ಅವನ್ನು ಹಣವಾಗಿ ರಿಡೀಮ್ ಮಾಡಿಕೊಳ್ಳಬಹುದು. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಸುದ್ದಿ

    ವಿಚ್ಛೇದನ ನೀಡಿ ಎರಡನೇ ಮದುವೆ ಆದ್ರೂ, ಈ ಮಹಿಳೆ ತನ್ನ ಎರಡನೇ ಗಂಡನ ಜೊತೆಗೇ, ಮೊದಲ ಪತಿಯ ಸೇವೆ ಮಾಡುತ್ತಿದ್ದಾಳೆ..!ಏಕೆ?ತಿಳಿಯಲು ಈ ಲೇಖನ ಓದಿ…

    ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.

  • ಸಿನಿಮಾ

    ಆ ಆರೋಪವನ್ನು ಪ್ರೂವ್ ಮಾಡಿದ್ರೆ ಮಂಡ್ಯ ಅಲ್ಲ, ರಾಜ್ಯವನ್ನೇ ಬಿಟ್ಟು ಹೋಗ್ತೀನಿ ಎಂದು ದಳಪತಿಗಳಿಗೆ ಸವಾಲು ಹಾಕಿದ ಯಶ್.!?

    ನಾನು ಜೆಡಿಎಸ್​​ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…