News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Cinema

1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

79

ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ.

ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು.

ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್ ಅವರಿಗೆ ಸೂಚಿಸಿದ್ದರು. ಅಂತೆಯೇ ಬೆಂಗಳೂರಿನ ಹೆಚ್​ಬಿ.ಆರ್ ಬಡಾವಣೆಯಲ್ಲಿ 1.60 ಕೋಟಿ ಮೌಲ್ಯದ ನಿವೇಶನ ಖರೀದಿಸಿದ್ದರು.

ಆದರೆ ಆ ಬಳಿಕ ನಿವೇಶನದ ದಾಖಲೆಗಳು ನಕಲಿ ಎಂಬುದು ಗೊತ್ತಾಗಿದೆ. ನಕಲಿ ದಾಖಲೆಗಳನ್ನು ನೀಡಿ ನನ್ನಿಂದ ವಂಚಕರು ಹಣ ಪಡೆದುಕೊಂಡಿದ್ದಾರೆ ಎಂದು ಎಸ್.ನಾರಾಯಣ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಂದೆಡೆ ಸಾಲದ ಸುಳಿಯಲ್ಲಿ ಸಿಲುಕಿರುವ ನಾರಾಯಣ್ ಅವರು ಸಾಲವನ್ನು ಹಿಂತಿರುಗಿಸಲು ಪರದಾಡುತ್ತಿದ್ದಾರೆ. ಈಗಾಗಲೇ 2 ಕೋಟಿಗೂ ಅಧಿಕ ಸಾಲ ಹೊಂದಿದ್ದು, ನಕಲಿ ದಾಖಲೆ ಮೂಲಕ ವಂಚಿಸಿದ ವಂಚಕರಿಂದ ನ್ಯಾಯ ಒದಗಿಸಿ ಕೊಡಿ ಎಂದು  ಡಿಸಿಪಿ ಅವರ ಹತ್ತಿರ ಎಸ್​.ನಾರಾಯಣ್ ಅವರು ಮನವಿ ಮಾಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತಿ ಕಣ್ಮುಂದೆಯೇ ಪತ್ನಿಯ ಮೇಲೆ ಗ್ಯಾಂಗ್ ರೇಪ್- ದೂರು ನಿರಾಕರಿಸಿದಂತಹ ಯುಪಿ ಪೊಲೀಸ್ ನವರು…!

    ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

  • inspirational, ಸುದ್ದಿ

    ತಿನ್ನಲು ಊಟ ಸಿಗದಿದ್ದಾಗ, ಹಸಿವು ತಡೆಯಲಾರದೆ, ಮಣ್ಣು ತಿಂದು ಮೃತಪಟ್ಟ ಮಕ್ಕಳು…

    ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…