ಸುದ್ದಿ

ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

35

ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ.

ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ ಹಿನ್ನೆಲೆ ಸಂದೀಪ್ ಅವರ ದೇಹದ ಎಂಟು ಅಂಗಗಳನ್ನು ಅಗತ್ಯವಿರುವ ಬೇರೆ ಬೇರೆ ರೋಗಿಗಳಿಗೆ ಅಳವಡಿಸಲು ನಿರ್ಧರಿಸಲಾಗಿದೆ. ಎರಡು ಕಾರ್ನಿಯಾ, ಎರಡು ಕಿಡ್ನಿ (ಮೂತ್ರಪಿಂಡ), ಯಕೃತ್ತು, ಮೇದೋಜೀರಕ ಗ್ರಂಥಿ, ಹೃದಯ ಕಪಾಟಗಳು ಹಾಗೂ ಶ್ವಾಸಕೋಶಗಳನ್ನು ದಾನ ಮಾಡಲಾಗಿದೆ. ಈ ಎಲ್ಲಾ ಅಂಗಾಗಗಳನ್ನು ಗ್ರೀನ್ ಕಾರಿಡಾರ್ ಮೂಲಕ ಬೆಂಗಳೂರಿಗೆ ತಂದು ಅಲ್ಲಿಂದ ಚೆನ್ನೈ ಆಸ್ಪ್ತ್ರೆಗೆ ಸಾಗಿಸಲಾಗಿದೆ.

ಮೃತರ ಎರಡು ಮೂತ್ರಪಿಂಡಗಳನ್ನು ಕಸ್ತೂರ್ಬಾ ಆಸ್ಪತ್ರೆಯ ರೋಗಿಗಳಿಗೆ ಅಳವಡಿಸಿದ್ದರೆ ಯಕೃತ್ತು ಹಾಗೂ ಮೇದೋಜೀರಕ ಗ್ರಂಥಿಗಳನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ರೋಗಿಗಳಿಗೆ ನಿಡಲಾಗಿದೆ. ಇನ್ನು ಹೃದಯ ಕಪಾಟ ಹಾಗೂ ಶ್ವಾಸಕೋಶಗಳನ್ನು ಚೆನ್ನೈ ಬಿಜಿಎಸ್ ಆಸ್ಪತ್ರೆ ರೋಗಿಗಳಿಗೆ ಅಳವಡಿಸಾಗುತ್ತದೆ ಎಂದು ಮೂಲಗಳು ಹೇಳಿದೆ.ಹೀಗೆ ಸಂದೀಪ್ ತಾವು ಸಾವಿನಲ್ಲಿಯೂ ಸಾರ್ಥಕತೆ ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂತ್ರಾಲಯದ ಶ್ರೀ ರಾಯರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…

  • ಸುದ್ದಿ

    400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ವಿಸ್ಮಯಕಾರಿ ಹೂವು..! ಎಲ್ಲಿ ಸಿಗುತ್ತದೆ ಗೊತ್ತಾ?

    ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್‌ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್‌ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….