News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಸುದ್ದಿ

ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

136

ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ.

ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ.

ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ ಕಂಬಗಳು ನೆಲಕ್ಕುರುಳಿದೆ. ಅರೇಬೊಮ್ಮನಹಳ್ಳಿ ಗ್ರಾಮದಲ್ಲಿ ಎರಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಾಳಾಗಿದೆ. ಅಲ್ಲದೆ ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ವ್ಯತ್ಯಯ ಆಗಿದೆ. ವಿದ್ಯುತ್ ಸರಿಪಡಿಸಲು ಬೆಸ್ಕಾಂ ಇಲಾಖೆಯ ಲೈನ್ ಮ್ಯಾನ್‍ಗಳು ಹರಸಾಹಸ ಪಡುತ್ತಿದ್ದಾರೆ.

ಇತ್ತ ವಿಜಯಪುರ ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗಿದೆ. ತಡರಾತ್ರಿ ಗುಡುಗು ಸಹಿತ ಮಳೆ ಸುರಿದಿದ್ದು, ಮಳೆ ರಭಸಕ್ಕೆ ಜಿಲ್ಲೆ ನಾಲತವಾಡ ಪಟ್ಟಣದಲ್ಲಿ 160 ವರ್ಷದ ಹಳೆಯ ಬೃಹತ್ ಆಲದ ಮರ ಉರುಳಿದೆ. ಬೃಹತ್ ಆಲದ ಮರ ಹಳೆ ಪಂಚಾಯ್ತಿ ಕಟ್ಟಡದ ಮೇಲೆ ಉರುಳಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಸುದ್ದಿ

    ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ  ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…

  • ಉಪಯುಕ್ತ ಮಾಹಿತಿ

    ಮಳೆಗಾಲದಲ್ಲಿ ಬರುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.