ಸುದ್ದಿ

ಪ್ರಾಣಿಗಳು ವಾಸಿಸುವ ಗುಹೆಯೊಳಗೆ ಶಿವಲಿಂಗದ ದರ್ಶನ, ಶಿವಭಕ್ತರ ಯಾತ್ರೆ! ಕರಾವಳಿಯಲ್ಲೊಂದು ವಿಶೇಷ ಗುಹಾ ದೇವಾಲಯ…!

129

ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ‌ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ ಹಿಂದೂ ಧರ್ಮದ ದೇವಾಲಯ, ಗುಡಿಗಳು ನಮಗೆ ಸಿಗುತ್ತವೆ.

ದೇವಾಲಯದ ಇತಿಹಾಸ ಮತ್ತು ವಿಶೇಷತೆ!   :ನೆಲ್ಲಿತೀರ್ಥ ಹೆಸರಲ್ಲೇ ನಮಗೆ ಈ ದೇವಾಲಯದ ವಿಶೇಷತೆ ಏನೆಂಬುದನ್ನು ತಿಳಿಯಬಹುದು. ನೆಲ್ಲಿತೀರ್ಥ ದೇವಾಲಯ ಇರುವುದು ಮಂಗಳೂರು ನಗರದಿಂದ‌ ಕೇವಲ 17 ಕಿಮೀ ದೂರದಲ್ಲಿ ಇರುವ ಈ ದೇವಾಲಯ ಸುಮಾರು 500 ವರ್ಷಗಳ ಹಿಂದಿನ ಇತಿಹಾಸ ಹೊಂದಿದೆ. ಈ ದೇವಾಲಯದ ಪ್ರಮುಖ ದೇವರೆಂದರೆ ಶಿವ. ನೆಲ್ಲಿತೀರ್ಥ ಎಂಬ ಹೆಸರಿನಿಂದ ಈ ದೇವಾಲಯ ಜಗತ್ಪ್ರಸಿದ್ಧವಾದರೆ, ಸೋಮನಾಥ ದೇವಸ್ಥಾನ ಎಂದೂ ಕರೆಯಲಾಗುತ್ತದೆ. ಇದೊಂದು ಗುಹಾ ದೇವಾಲಯ ಆಗಿರುವುದರಿಂದ ಇಲ್ಲಿನ ಪೂಜೆ ಬಹಳ ವಿಶೇಷ. ಗುಹೆಯ ಹೊಸ ಭಾಗದಲ್ಲಿ ದೇವಾಲಯವಿದ್ದು, ಶಿವನ ಪೂಜೆ‌ ನಿತ್ಯ ನಡೆಯುತ್ತದೆ. ಅದೇ ರೀತಿ ಗುಹೆಯ ಒಳಗೂ ಕೂಡ ಒಂದು ದೊಡ್ಡ ಶಿವಲಿಂಗ ಸ್ಥಾಪನೆಯಾಗಿದ್ದು, ಭಕ್ತರು ಅಲ್ಲಿಗೂ ಹೋಗಿ ಪ್ರಾರ್ಥಿಸುವ ಅವಕಾಶ ಇದೆ.

ಈ ದೇವಾಲಯದ ಮತ್ತೊಂದು ವಿಶೇಷವೆಂದರೆ, ವರ್ಷದ ಆರು ತಿಂಗಳು ಗುಹೆ ತೆರೆದಿರುತ್ತಾರೆ ಮತ್ತು ಇನ್ನುಳಿದ ಆರು ತಿಂಗಳು ಗುಹೆಯ ಒಳಗೆ ಅರ್ಚಕರು ಅಥವಾ ಭಕ್ತರು ಯಾರಿಗೂ ಅವಕಾಶ ಇರುವುದಿಲ್ಲ. ಇಲ್ಲಿನ ನಂಬಿಕೆಯ ಪ್ರಕಾರ, ಮಳೆಗಾಲದ ಈ ತಿಂಗಳುಗಳಲ್ಲಿ ಗುಹೆಯ ಒಳಗೆ ನದಿ ನೀರಿನ ಹರಿವು ಇರುತ್ತದೆ ಎಂದು ಹೇಳಲಾಗುತ್ತದೆ ಮಾತ್ರವಲ್ಲದೆ ಈ ಆರು ತಿಂಗಳು ಈ ಗುಹೆಯಲ್ಲಿ ದೇವರು ವಾಸವಾಗಿರುತ್ತಾರೆ ಎಂಬುದು ನಂಬಿಕೆ. ಪುರಾಣದ ಉಲ್ಲೇಖದಂತೆ, ಈ ದೇವಾಲಯದಲ್ಲಿ ಜಾಬಾಲಿ ಋಷಿ ಮುನಿಗಳು ತಪಸ್ಸು ಮಾಡಿದ್ದರು ಮತ್ತು ಅವರು ಕೈಗೊಂಡ ತಪಸ್ಸಿಗೆ ಮೆಚ್ಚಿ ಸ್ವತಃ ಶಿವನೇ ಅನುಗ್ರಹ ನೀಡಿದ್ದ ಎಂಬುದು ಇತಿಹಾಸ. ಸದ್ಯ ಈ ಗುಹಾ ದೇವಾಲಯ ಭಕ್ತರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಒಂದು ಪುಣ್ಯ ಕ್ಷೇತ್ರವಾಗಿದೆ.

ಈ ದೇವಾಲಯ ಇರುವುದು ಒಂದು ಸಣ್ಣ ಹಳ್ಳಿಯಲ್ಲಿ, ಆದರೆ ಸದ್ಯ ಈ ಹಳ್ಳಿಯನ್ನೇ ನೆಲ್ಲಿತೀರ್ಥ ಎಂಬ ಹೆಸರಿನಿಂದ‌ ಕರೆಯಲಾಗುತ್ತಿದೆ. ಪ್ರಕೃತಿಯ ಮಡಿಲಲ್ಲೇ ಇರುವ ಈ‌ ದೇವಾಲಯ ನಿಜಕ್ಕೂ ಭಕ್ತರ ಮನದಲ್ಲಿ ಏಕಾಗ್ರತೆ ಮೂಡಿಸುವ ತಾಣವಾಗಿದೆ. ಈ ದೇವಾಲಯದ ಹೊರ ಭಾಗದಲ್ಲಿ “ನಾಗಪ್ಪ” ಎಂಬ ಕೆರೆ ಇದ್ದು, ಗುಹೆಯನ್ನು ಪ್ರವೇಶಿಸುವ ಮೊದಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಈ ಕೆರೆಯಲ್ಲಿ ಸ್ನಾನ ಮಾಡಿ ಹೋಗಬೇಕು ಎಂಬುದು ಸ್ಥಳ ಪುರಾಣ. ಗುಹೆಯ ಒಳಗೆ ಯಾವುದೇ ಲಿಂಗ ತಾರತಮ್ಯ ಇಲ್ಲದೆ ಮುಕ್ತ ಪ್ರವೇಶವಿದ್ದು, ಶುಚತ್ವ ಮತ್ತು ಮಡಿ ಕಾಪಾಡಬೇಕಾದ ಕರ್ತವ್ಯ ಭಕ್ತರದ್ದೇ ಆಗಿರುತ್ತದೆ. 5 ವರ್ಷದೊಳಗಿನ ಮಕ್ಕಳಿಗೆ ಗುಹೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಗುಹೆಯ ಮತ್ತೊಂದು ವಿಶೇಷವೆಂದರೆ ಗುಹೆಯ ಪ್ರವೇಶ ಭಾಗದಲ್ಲಿ ಭಕ್ತರು ನೇರವಾಗಿ ನಿಂತುಕೊಂಡು ಹೋಗಬಹುದು, ನಂತರದಲ್ಲಿ ಸ್ವಲ್ಪ ಬಗ್ಗಿ ನಡೆಯಬೇಕಾಗುತ್ತದೆ.‌ ಅದಾದ ನಂತರ ಸಂಪೂರ್ಣ ನೆಲಕ್ಕೆ ಸಮನಾಗಿ ಮಲಗಿ ಮಣ್ಣಿನಲ್ಲಿ ತೆವಳಿಕೊಂಡು ಹೋಗಬೇಕಾಗುತ್ತದೆ. ‌ಗುಹೆಯ ಒಳ ಭಾಗದಲ್ಲಿ ಕಲ್ಲಿನಿಂದ ನೀರು ಹರಿಯುತ್ತಿದ್ದು, ಇದು ನೆಲ್ಲಿ ಕಾಯಿಯ ಆಕಾರದಲ್ಲಿ ಕಾಣಿಸುತ್ತದೆ. ಇದೇ ಕಾರಣಕ್ಕೆ “ನೆಲ್ಲಿತೀರ್ಥ” ಎಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ ಈ ಗುಹೆ ದಿನೇ ದಿನೇ ಬೆಳೆಯುತ್ತಲಿದ್ದು ಸದ್ಯ ಇರುವ ದೇವಾಲಯದ ಒಂದು ದಿಕ್ಕಿನಿಂದ‌ ಈ ಗುಹೆ ದೇವಾಲಯವನ್ನೇ ಆವರಿಸಿದೆ. ಕೆಲವರು ಹೇಳುವ ಪ್ರಕಾರ,          ಈ‌ ಗುಹೆಯ ಒಳಗೆ ಏಳು ಶಿವಲಿಂಗ ಇದೆ.‌ ಶಿವ ಭಕ್ತರು ಪೂಜಿಸುವ ಲಿಂಗವನ್ನು ಈ ಗುಹೆ ಬೆಳೆಯುತ್ತಾ ಹೋದಂತೆ ತನ್ನೊಳಗೆ ಸೇರಿಸಿಕೊಂಡಿದೆ ಎಂದು ಹೇಳುತ್ತಾರೆ.ನಿಜಕ್ಕೂ ಇದೊಂದು ಅಚ್ಚರಿ ಮೂಡಿಸುವ ದೇವಾಲಯವೇ ಆಗಿದೆ. ಒಂದೊಂದು ಕಥೆ ಪುರಾಣಗಳು ಒಂದೊಂದು ರೀತಿಯಾಗಿ ಹೇಳುತ್ತವೆ. ಇಲ್ಲಿನ ಅರ್ಚಕರು ಈ ಕ್ಷೇತ್ರದ ಸಂಪೂರ್ಣ ಕಥೆ ಹೇಳುತ್ತಾರೆ ಮತ್ತು ಅದರ ಆಧಾರದಲ್ಲಿ ನಾವು ಇಲ್ಲಿನ ಇತಿಹಾಸ ತಿಳಿಯಬಹುದಾಗಿದೆ. ಅದೇನೇ ಇರಲಿ ಶಿವನ‌ ಮಹಿಮೆ‌ ಯಾವ ರೀತಿ ಇದೆ ಮತ್ತು ಹಿಂದೂ ಪುರಾಣಗಳು ಯಾವ ರೀತಿ ಇದೆ ಎಂಬುದಕ್ಕೆ ಈ ಒಂದು ಗುಹಾ ದೇವಾಲಯವೇ ಸಾಕ್ಷಿ..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…

  • ಶ್ರದ್ಧಾಂಜಲಿ

    ಹಿರಿಯ ನಟಿ ಜಮುನಾ ನಿಧನ

    ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್​ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ….