ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ.
ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡ ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ.
ವಿಸ್ಮಯ ಚಿತ್ರದ ವೇಳೆ ನಟ ಅರ್ಜುನ್ ಸರ್ಜಾನ್ ಲೈಂಗಿಕ ಕಿರುಕುಳ ನೀಡಿದ್ರು ಅನ್ನೋ ಆರೋಪಕ್ಕೆ ತಕ್ಕಂತೆ ಶೃತಿ ಪರವಾಗಿ ಸಾಕ್ಷಿ ಹೇಳೋಕೆ ಯಾರು ಮುಂದೆ ಬರ್ತಿಲ್ಲ. ವಿಸ್ಮಯ ಚಿತ್ರದ ವೇಳೆ ಜೊತೆಗಿದ್ದ ಹತ್ತಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿಚಾರಣೆ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ. ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಈಗ ಹಳ್ಳ ಹಿಡಿಯುವುತ್ತಿರುವುದೇಕೆ? *ಅರ್ಜುನ್ ಸರ್ಜಾನ್ ಶೂಟಿಂಗ್ ವೇಳೆ ಆಶ್ಲೀಲವಾಗಿ ವರ್ತಿಸಿದ್ರು ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.
ಘಟನೆ ನಡೆದು 2 ವರ್ಷಗಳ ನಂತರ ದೂರು ನೀಡಿರೋದು.
ಶೂಟಿಂಗ್ ನಲ್ಲಿ ಚಿತ್ರಕ್ಕೆ ಬೇಕಾದಂತೆ ನಟಿಸಿದೆ ಅಷ್ಟೇ ಅಂತಾರೆ ನಟ ಅರ್ಜುನ್ ಸರ್ಜಾ.
ದೇವನಹಳ್ಳಿ ಹೈವೇಯಲ್ಲಿ ರೂಂಗೆ ಕರೆದರೂ ಅನ್ನೋಕು ಸೂಕ್ತ ಸಾಕ್ಷಿಗಳಿಲ್ಲ.
ಯುಬಿ ಸಿಟಿಯಲ್ಲಿ ರೂಮ್ ಬುಕ್ ಮಾಡಿದ್ದು ನಿಜವಾದ್ರೂ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಯಾವುದೇ ಸಿಸಿಟಿವಿ ಇಲ್ಲ.
ನಲವತ್ತು ಜನರನ್ನು ಸಾಕ್ಷಿಗಳನ್ನಾಗಿ ಮಾಡೋಕೆ ಹೊರಟ್ಟಿದ್ದ ಪೊಲೀಸರಿಗೆ ಸಿಕ್ಕಿದ್ದು ಕೇವಲ 10 ಜನ.
ಶೂಟಿಂಗ್ ನಡೆದ ಜಾಗದಲ್ಲೂ ಯಾವುದೇ ತರಹದ ಸಾಕ್ಷಿಗಳು ಪತ್ತೆಯಾಗದಿರುವುದು ಶ್ರುತಿ ಹರಿಹರನ್ ಮಾಡಿದ್ದ ಪ್ರಕರಣ ಹಳ್ಳ ಹಿಡಿಯಲು ಕಾರಣವಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…