ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ.

ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ ಬಳಿಕ ನಾನು ಮುಂಬೈಗೆ ಹೋಗಬೇಕು, 5 ಲಕ್ಷ ರೂ. ಕೊಡಿ ಎಂದು ಪಟ್ಟು ಹಿಡಿದಿದ್ದರು. ಮಗನಿಗೆ ಹಣ ನೀಡಲು ಸಿದ್ಧಾರ್ಥ್ ಅವರ ತಂದೆ ಸ್ವಲ್ಪ ಜಮೀನು, ಜಾಗ ಮಾರಾಟ ಮಾಡಿದ್ದರು ಎಂದು ರುದ್ರೇಶ್ ಕಡೂರು ತಿಳಿಸಿದ್ದಾರೆ.

ಅಂದು 5 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದ ಸಿದ್ಧಾರ್ಥ್ ಅವರು ಕೆಲವೇ ವರ್ಷಗಳಲ್ಲಿ ಪ್ರಪಂಚವೇ ಅವರತ್ತ ನೋಡುವಂತೆ ಬೆಳೆದರು. ಅವರನ್ನು ನಂಬಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ದನಿ ನಮ್ಮನ್ನ ಬಿಟ್ಟು ಎಲ್ಲಿಗೆ ಹೋದರು ಎನ್ನುವಷ್ಟು ಕಂಗಾಲಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಸಿದ್ಧಾರ್ಥ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಅವರ ವಿವಿಧ ಕಂಪನಿಗಳಲ್ಲಿ ಸುಮಾರು ಒಂದು ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಿವಿ ಆನ್ ಮಾಡುತ್ತಿದ್ದಂತೆ ಸಿದ್ಧಾರ್ಥ್ ಅವರು ನಾಪತ್ತೆ ಸುದ್ದಿ ಕೇಳಿ ದುಃಖವಾಯಿತು ಎಂದು ಭಾರವಾದ ಮನಸ್ಸಿನಿಂದ ಹೇಳಿದರು.ಸಿದ್ಧಾರ್ಥ್ ಅವರು ಚಿಕ್ಕಮಗಳೂರು, ಕರ್ನಾಟಕದ ಆಸ್ತಿ. ಅನೇಕರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ. ಅವರು ವಾಪಸ್ ಬರಲಿ ಎಂದು ದೇವರಲ್ಲಿ ಪಾರ್ಥಿಸುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…