News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

94

ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ.

ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ ಬಳಿಕ ನಾನು ಮುಂಬೈಗೆ ಹೋಗಬೇಕು, 5 ಲಕ್ಷ ರೂ. ಕೊಡಿ ಎಂದು ಪಟ್ಟು ಹಿಡಿದಿದ್ದರು. ಮಗನಿಗೆ ಹಣ ನೀಡಲು ಸಿದ್ಧಾರ್ಥ್ ಅವರ ತಂದೆ ಸ್ವಲ್ಪ ಜಮೀನು, ಜಾಗ ಮಾರಾಟ ಮಾಡಿದ್ದರು ಎಂದು ರುದ್ರೇಶ್ ಕಡೂರು ತಿಳಿಸಿದ್ದಾರೆ.

ಅಂದು 5 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದ ಸಿದ್ಧಾರ್ಥ್ ಅವರು ಕೆಲವೇ ವರ್ಷಗಳಲ್ಲಿ ಪ್ರಪಂಚವೇ ಅವರತ್ತ ನೋಡುವಂತೆ ಬೆಳೆದರು. ಅವರನ್ನು ನಂಬಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ದನಿ ನಮ್ಮನ್ನ ಬಿಟ್ಟು ಎಲ್ಲಿಗೆ ಹೋದರು ಎನ್ನುವಷ್ಟು ಕಂಗಾಲಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಸಿದ್ಧಾರ್ಥ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಅವರ ವಿವಿಧ ಕಂಪನಿಗಳಲ್ಲಿ ಸುಮಾರು ಒಂದು ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಿವಿ ಆನ್ ಮಾಡುತ್ತಿದ್ದಂತೆ ಸಿದ್ಧಾರ್ಥ್ ಅವರು ನಾಪತ್ತೆ ಸುದ್ದಿ ಕೇಳಿ ದುಃಖವಾಯಿತು ಎಂದು ಭಾರವಾದ ಮನಸ್ಸಿನಿಂದ ಹೇಳಿದರು.ಸಿದ್ಧಾರ್ಥ್ ಅವರು ಚಿಕ್ಕಮಗಳೂರು, ಕರ್ನಾಟಕದ ಆಸ್ತಿ. ಅನೇಕರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ. ಅವರು ವಾಪಸ್ ಬರಲಿ ಎಂದು ದೇವರಲ್ಲಿ ಪಾರ್ಥಿಸುತ್ತಿದ್ದೇವೆ ಎಂದು ತಿಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಟೋಮೊಬೈಲ್ಸ್

    ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

    ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

  • ಸುದ್ದಿ

    ‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

    ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…

  • ರಾಜಕೀಯ

    ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ರಿಯಾಜ್ ಮೇಲೆ ತನ್ನ ಸೇಡು ತೀರಿಸಿಕೊಂಡಿದ್ದು ಹೇಗೆ ಗೊತ್ತಾ…? ತಿಳಿಯಲು ಈ ಲೇಖನ ಓದಿ….

    ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

  • ದೇವರು

    ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

    ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…

  • ಸುದ್ದಿ

    ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…