ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ.

ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ ಬಳಿಕ ನಾನು ಮುಂಬೈಗೆ ಹೋಗಬೇಕು, 5 ಲಕ್ಷ ರೂ. ಕೊಡಿ ಎಂದು ಪಟ್ಟು ಹಿಡಿದಿದ್ದರು. ಮಗನಿಗೆ ಹಣ ನೀಡಲು ಸಿದ್ಧಾರ್ಥ್ ಅವರ ತಂದೆ ಸ್ವಲ್ಪ ಜಮೀನು, ಜಾಗ ಮಾರಾಟ ಮಾಡಿದ್ದರು ಎಂದು ರುದ್ರೇಶ್ ಕಡೂರು ತಿಳಿಸಿದ್ದಾರೆ.

ಅಂದು 5 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದ ಸಿದ್ಧಾರ್ಥ್ ಅವರು ಕೆಲವೇ ವರ್ಷಗಳಲ್ಲಿ ಪ್ರಪಂಚವೇ ಅವರತ್ತ ನೋಡುವಂತೆ ಬೆಳೆದರು. ಅವರನ್ನು ನಂಬಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಕೇಳಿ ಆಘಾತಕ್ಕೆ ಒಳಗಾಗಿದ್ದೇವೆ. ನಮ್ಮ ದನಿ ನಮ್ಮನ್ನ ಬಿಟ್ಟು ಎಲ್ಲಿಗೆ ಹೋದರು ಎನ್ನುವಷ್ಟು ಕಂಗಾಲಾಗಿದ್ದೇವೆ ಎಂದು ಅಳಲು ತೋಡಿಕೊಂಡರು.

ಸಿದ್ಧಾರ್ಥ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂದಾಜು 13 ಸಾವಿರ ಎಕರೆ ಕಾಫಿ ತೋಟ ಹೊಂದಿದ್ದಾರೆ. ಅವರ ವಿವಿಧ ಕಂಪನಿಗಳಲ್ಲಿ ಸುಮಾರು ಒಂದು ಲಕ್ಷ ಜನರು ಕೆಲಸ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಿವಿ ಆನ್ ಮಾಡುತ್ತಿದ್ದಂತೆ ಸಿದ್ಧಾರ್ಥ್ ಅವರು ನಾಪತ್ತೆ ಸುದ್ದಿ ಕೇಳಿ ದುಃಖವಾಯಿತು ಎಂದು ಭಾರವಾದ ಮನಸ್ಸಿನಿಂದ ಹೇಳಿದರು.ಸಿದ್ಧಾರ್ಥ್ ಅವರು ಚಿಕ್ಕಮಗಳೂರು, ಕರ್ನಾಟಕದ ಆಸ್ತಿ. ಅನೇಕರಿಗೆ ಬದುಕು ಕಟ್ಟಿಕೊಟ್ಟಿದ್ದಾರೆ. ಅವರು ವಾಪಸ್ ಬರಲಿ ಎಂದು ದೇವರಲ್ಲಿ ಪಾರ್ಥಿಸುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…