ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.

ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.

ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಣಜಿ, ದೇಶದ ಜನರ ಆರೋಗ್ಯ ರಕ್ಷಣೆಗೆ ಒತ್ತು ನೀಡಿರುವ ಜಿಎಸ್ಟಿ ಮಂಡಳಿ ಕೆಫೀನ್ ಆಧಾರಿತ ಪೇಯಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಇದೇ ವೇಳೆ ಪ್ರವಾಸೋದ್ಯಮಕ್ಕೆ ಒತ್ತು ಕೊಡಲು ಹೋಟೆಲ್ ಕೋಣೆಗಳ ಬಾಡಿಗೆ ಮೇಲಿನ ತೆರಿಗೆಯನ್ನು ಇಳಿಸಿದೆ. ಜಿಎಸ್ಟಿ ಮಂಡಳಿ ಸಭೆಯ ಬಳಿಕ ಶುಕ್ರವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದು ರಾತ್ರಿ ತಂಗಲು 1 ಸಾವಿರ ರೂ.ವರೆಗಿನ ಹೋಟೆಲ್ ಕೋಣೆಗಳ ಬಾಡಿಗೆ ಮೇಲೆ ವಿಧಿಸಲಾಗುತ್ತಿದ್ದ ತೆರಿಗೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿದೆ. ಒಂದು…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.