ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ ಮಾಯವಾಗುತ್ತೆ ಮತ್ತು ಪ್ರತ್ಯಕ್ಷವಾಗುತ್ತದೆ.

ಗುಜರಾತಿನ ವಡೋದರ ಬಳಿಯಿರುವ ಕವಿಕಂಬೋಯ ಎಂಬ ಗ್ರಾಮದ ಬಳಿ ಅರಬ್ಬಿ ಸಮುದ್ರದಲ್ಲಿ ನಿರ್ಮಿಸಿರುವ ಆಲಯದಲ್ಲಿ ಸ್ತಂಭೇಶ್ವರನಾಗಿ ಆ ಪರಮಶಿವನು ನೆಲೆಸಿದ್ದಾನೆ. ಈ ದೇವಾಲಯ ಬಹಳ ಪುರಾತನವಾದದ್ದು ಎಂದು ಇತಿಹಾಸಕಾರರು ಹೇಳುತ್ತಾರೆ. ಸಹಸ್ರಾರು ಶತಮಾನಗಳ ಹಿಂದೆ ಕಾರ್ತಿಕೇಯ ಸ್ವಾಮಿಯೇ ಇದನ್ನು ನಿರ್ಮಿಸಿದ್ದನೆಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಆಗ ತಾರಕಾಸುರನನ್ನು ವಧಿಸಿದ ಸಮಯದಲ್ಲಿ ನಿರ್ಮಿಸಲಾದ ಈ ದೇವಾಲಯ ಸಮುದ್ರದಲ್ಲಿ ಮುಳುಗಿದ್ದು, 150 ವರ್ಷಗಳ ಹಿಂದೆ ಕಾಣಿಸಿಕೊಂಡಿತಂತೆ. ಆದರೂ ಸಹ ಇಂದಿಗೂ ಆ ದೇವಾಲಯ ದಿನವೂ ಸಮುದ್ರದಲ್ಲಿ ಮುಳುಗಿ ಮಾರನೇ ದಿನ ಮತ್ತೆ ಪ್ರತ್ಯಕ್ಷವಾಗುತ್ತದೆಯಂತೆ.

ನಾಲ್ಕು ಅಡಿ ಎತ್ತರವಿರುವ ಈ ಶಿವಲಿಂಗ ತಮ್ಮ ಕೋರಿಕೆಗಳನ್ನ ಈಡೇರಿಸುತ್ತಾನೆ ಎಂದು ಭಕ್ತಕೋಟಿ ನಂಬುತ್ತಾರೆ.ಈ ದೇವಾಲಯದ ದರ್ಶನ ಪಡೆಯಬೇಕೆಂದರೆ ಭಕ್ತರು ಬೆಳಿಗ್ಗೆ ಬರಬೇಕು ಮಧ್ಯಾಹ್ನದವರೆಗೆ ದರ್ಶನ ಮಾಡಿಕೊಂಡು ಪೂಜೆ ಮಾಡಿಕೊಂಡು ತದನಂತರ ಹಿಂದಿರುಗಲೇ ಬೇಕು.
ಏಕೆಂದರೆ ಆಗ ಆ ದೇವಾಲಯ ಸಮುದ್ರದಲ್ಲಿ ಮುಳುಗಿ ಹೋಗುತ್ತದೆ. ಆದರೆ ಈ ಆಲಯಕ್ಕೆ ಈ ವಿಶೇಷತೆ ಅಲ್ಲದೆ ಇನ್ನೊಂದು ವಿಶೇಷತೆ ಕೂಡ ಇದೆ.ಈ ದೇವಾಲಯ ಇರುವ ಸ್ಥಳದಲ್ಲಿ ಚೋಟೆ ಮಹೆ ಸಾಗರ್, ಸಬರಮತಿ ಎಂಬ ಎರಡು ನದಿಗಳ ಸಂಗಮವಾಗುತ್ತದೆ. ಇಲ್ಲಿಗೆ ಬರುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…