News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

57

ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು.

ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು ಪ್ರಯಾಸ ಪಟ್ಟು ನಡೆದು ಹೊಸ ಅನುಭವ ಪಡೆದರು.

ಶಂಕರಪುರ ಚರ್ಚ್‍ನ ಸಹಾಯಕ ಧರ್ಮಗುರು ರೋಶನ್ ಡಿ ಕುನ್ಹಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭಾರತ ಸೇವಾದಳದ ಜಿಲ್ಲಾ ಸಂಘಟಕ ಪಕ್ಕೀರ ಗೌಡ, ಸೇವಾದಳದ ತಾಲೂಕು ಅಧಿನಾಯಕ ಎಸ್.ಎಸ್.ಪ್ರಸಾದ್, ತಾಲೂಕು ಸಮಿತಿ ಸದಸ್ಯ ರಾಯನ್ ಫೆರ್ನಾಂಡಿಸ್ ಸಾಥ್ ನೀಡಿದರು. ಗದ್ದೆಯ ಮಾಲಿಕ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರನ್ನು ಈ ಸಂದರ್ಭದಲ್ಲಿ ಶಾಲುಹೊದಿಸಿ, ಹಾರಹಾಕಿ ಸ್ಮರಣಿಕೆಯೊಂದಿಗೆ ಗೌರವಿಸಿದರು. ವಿದ್ಯಾರ್ಥಿಗಳು ಗದ್ದೆಯಲ್ಲಿ ನೇಜಿ ನಾಟಿ ಮಾಡಿದರು. ಭತ್ತದ ಬೆಳೆಯ ಪ್ರಾತಿಕ್ಷಕೆ ಮಾಹಿತಿಯನ್ನು ವಸಂತ ಪೂಜಾರಿಯವರು ನೀಡಿದರು.

ಶಾಲಾ ಮುಖ್ಯ ಶಿಕ್ಷಕ ಅಶ್ವಿನ್ ರೊಡ್ರಿಗಸ್, ಕೃತಜ್ಞತೆ ಸಲ್ಲಿಸಿದರು. ದೈಹಿಕ ಶಿಕ್ಷಣ ಹಾಗೂ ಭಾರತ ಸೇವದಳದ ಶಿಕ್ಷಕ ಡೋಮಿಯನ್ ಆರ್ ನೊರೋನ್ಹಾ, ಸಹ ಶಿಕ್ಷಕರು ಜೊತೆಗಿದ್ದರು. ಉಪಾಹಾರದೊಂದಿಗೆ ವಿದ್ಯಾರ್ಥಿಗಳು ಶಾಲೆಯತ್ತ ಹೆಜ್ಜೆ ಹಾಕಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದೇವಸ್ಥಾನದಲ್ಲಿ ಪ್ರದಕ್ಷಿಣೆ ಯಾಕೆ ಮಾಡಬೇಕು ಗೊತ್ತಾ! ಈ ಕಾರಣಕ್ಕಾಗಿ ಮಾಡಬೇಕು!

    ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಮನರಂಜನೆ

    ‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

    ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.

  • ಸುದ್ದಿ

    ಈ ಸಮ್ಮಿಶ್ರ ಸರ್ಕಾರಕ್ಕಿಂತ ಕುಮಾರಸ್ವಾಮಿ ಸರ್ಕಾರ ಸಾವಿರ ಪಟ್ಟು ಒಳ್ಳೆಯದು – ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ ಎಂ.ಬಿ ಪಾಟೀಲ್- ಇದಕ್ಕೆ ನಿಮ್ಮ ಉತ್ತರ.!

    ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್​ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….

  • ಸುದ್ದಿ

    ಎರಡಕ್ಕಿಂತ ಹೆಚ್ಚು ಮದ್ವೆ ಆಗಿಲ್ಲ ಅಂದ್ರೆ, ಜೈಲಿಗೆ ಹೋಗಲು ರೆಡಿಯಾಗಿ!ಎಲ್ಲಿ ಗೊತ್ತಾ?ಮುಂದೆ ಓದಿ…

    ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.