ಸುದ್ದಿ

ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

83

ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿ ಆಕೆ ಹೆರಿಗೆ ನೋವಿನಿಂದ ನರಳಾಡಿದ್ದರೂ ಸಹ ವೈದ್ಯರಾಗಲಿ, ಸಿಬ್ಬಂದಿಗಳಾಗಲಿ ಹತ್ತಿರ ಸುಳಿದಿಲ್ಲ. ಸುಮಾರು ನಾಲ್ಕು ಗಂಟೆಗಳ ಕಾಲ ಮಹಿಳೆ ಹೀಗೆ ನೋವಿನಿಂದ ಒದ್ದಾಡಿದ್ದಾರೆ. ವೈದ್ಯರು ಮಾತ್ರ ಯಾವ ಕ್ರಮ ಕೈಗೊಳ್ಳದೆ ಚಿಕಿತ್ಸೆ ಒದಗಿಸದೆ ಅಹಂಕಾರ ಮೆರೆದಿದ್ದಾರೆ.

ಕಡೆಗೆ ಸಂಜೆ ಐದರ ವೇಳೆಗೆ ಆಕೆಯನ್ನು ಕೋಲಾರ ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿದೆ. ಆದರೆ ಸಮಯಕ್ಕೆ ಚಿಕಿತ್ಸೆ ದೊರಕದ ಕಾರಣ ಗಂಡು ಮಗು ಹೊಟ್ಟೆಯಲ್ಲೇ ಮೃತಪಟ್ಟಿದೆ.ತಮ್ಮ ಮಗಳಿಗೆ ಆದ ಸ್ಥಿತಿ ಇನ್ನಾರಿಗೂ ಆಗಬಾರದು, ಸರ್ಕಾರ ಈ ತಕ್ಷಣ ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ಸೂಕ್ತ ವೈದ್ಯಕೀಯ ಸಿಬ್ಬಂದಿಗಳ ನೇಮಕ ಮಾಡಬೇಕು ಎಂದಿರುವ ಸಮೀನಾ ಪೋಷಕರು ಆಸ್ಪತ್ರೆ ಸಿಬ್ಬಂದಿಗಳ ವರ್ತನೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

7 ತಿಂಗಳ ಗರ್ಭಿಣಿಯಾಗಿದ್ದ ಸಮೀನಾ ಹೆರಿಗೆ ನೋಈವಿನಿಂದ ನರಳಾಡುತ್ತಿರುವ ವೀಡಿಯೋ ನಿನ್ನೆ ಸಂಜೆಯಿಂದ ಜಾಅತಾಣದಲ್ಲಿ ಫುಲ್ ವೈರಲ್ ಆಗಿದೆ.ಈ ನಡುವೆ ಕೋಲಾರ ನೂತನ ಸಂಸದ ಎನ್. ಮುನಿಸ್ವಾಮಿ ಸಮೀನಾ ಕುಟುಂಬವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಇಷ್ಟೊಂದು ಪ್ರಯೋಜನನಾ! ಈ ಅರೋಗ್ಯ ಮಾಹಿತಿ ನೋಡಿ.

    ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್‌ ಸೆಲ್‌ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್‌ ಸೆಲ್ಸ್‌ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್‌‌ ಸರ್ಕ್ಯುಲೇಶನ್‌ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್‌ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್‌‌ ಬರುತ್ತದೆ. ಇದರಿಂದ ನಿಮ್ಮ ಲುಕ್‌ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

    ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…

  • ಉಪಯುಕ್ತ ಮಾಹಿತಿ

    ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

    ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

  • ಸುದ್ದಿ

    ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟು ಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆ ಯಶಸ್ವಿಯಾಗಿದೆ…!

    ಬೆಂಗಳೂರು, ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್‌ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್‌ ಲ್ಯಾಂಡರ್‌ (ಪ್ರಗ್ಯಾನ್‌ ರೋವರ್‌ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ.  ಸದ್ಯ ವಿಕ್ರಮ್‌ ಲ್ಯಾಂಡರ್‌35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…

  • ಸುದ್ದಿ

    ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!

    ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…