ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ ನಟ ಅಂದರೆ ಅದೂ ಬಾಲಿವುಡ್ ನಟ ಸಲ್ಮಾನ್ ಖಾನ್ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಬಿಗ್ ಬಾಸ್ ಸೀಸನ್ 13 ನಡೆಸಿಕೊಡುತ್ತಿರುವ ಸಲ್ಮಾನ್ ಖಾನ್ ಅವರು ಒಂದು ವಾರಕ್ಕೆ 31 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ, ಇನ್ನು ಸಲ್ಮಾನ್ ಖಾನ್ ಅವರು ಒಂದು ಸೀಸನ್ ನಲ್ಲಿ 13 ವಾರಗಳ ಕಾಲ ನಿರೂಪಣೆ ಮಾಡುತ್ತಿದ್ದು ಒಟ್ಟಾರೆ ಒಂದು ಸೀಸನ್ ಗೆ 400 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ.

ಇನ್ನು ಕನ್ನಡದ ಬಿಗ್ ಬಾಸ್ ನಲ್ಲಿ ನಿರೂಪಣೆ ಮಾಡುತ್ತಿರುವ ಕಿಚ್ಚ ಸುದೀಪ್ ಅವರು ದುಭಾರಿ ಮೊತ್ತ ಸಂಭಾವನೆಯನ್ನ ಪಡೆಯುತ್ತಿದ್ದಾರೆ ಅನ್ನುವ ಮಾಹಿತಿ ಇದೆ, ಆದರೆ ಇದರ ಕುರಿತು ಎಲ್ಲಯೂ ಕೂಡ ಅಧಿಕೃತವಾದ ಮಾಹಿತಿ ಇಲ್ಲ ಮತ್ತು ಮಾಹಿತಿ ಸಿಗುವುದು ಇಲ್ಲ. ಇನ್ನು ಸಿಕ್ಕಿರುವ ಮಾಹಿತಿಗಳ ಪ್ರಕಾರ ಕಿಚ್ಚ ಸುದೀಪ್ ಅವರು ಐದು ಆವೃತ್ತಿಗಳಿಗೆ ಒಪ್ಪಂದವನ್ನ ಮಾಡಿಕೊಂಡು ನಿರೂಪಣೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ, ಹಾಗಾದರೆ ಒಂದು ಆವೃತ್ತಿಗೆ ಕಿಚ್ಚ ಸುದೀಪ್ ಪಡೆಯುವ ಸಂಭಾವನೆ ಎಷ್ಟು ಮತ್ತು ಏಳನೇ ಆವೃತ್ತಿಯಲ್ಲಿ ಕಿಚ್ಚ ಸುದೀಪ್ ಅವರು ಪಡೆದ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಸ್ನೇಹಿತರೆ ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡೆವೆ ಐದು ವರ್ಷಗಳ ಕಾಲ ಒಪ್ಪಂದ ನಡೆದಿದೆ, ಇನ್ನು ಐದು ಆವೃತ್ತಿಗಳಿಗಾಗಿ ಕಿಚ್ಚ ಸುದೀಪ್ ಅವರು ದೊಡ್ಡ ಮೊತ್ತದ ಸಂಭಾವನೆಯನ್ನ ಪಡೆದುಕೊಂಡಿದ್ದಾರಂತೆ, ಇನ್ನು ಮೂಲಗಳ ಪ್ರಕಾರ ಐದು ಆವೃತ್ತಿಗಾಗಿ ಕಿಚ್ಚ ಸುದೀಪ್ ಅವರು 20 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ವಾರದ ಎರಡು ದಿನ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ, ಶನಿವಾರ ವಾರದ ಕಥೆ ಕಿಚ್ಚನ ಜೊತೆ ಮತ್ತು ಭಾನುವಾರ ಸಂಡೇ ಸ್ಪೆಷಲ್ ನಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ. ಇನ್ನು ಐದು ಆವೃತ್ತಿಗೆ 20 ಕೋಟಿ ಅಂದರೆ ಒಂದು ಆವೃತ್ತಿಗೆ 4 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆಯುತ್ತಾರೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಕಳೆದ ಆರು ಆವೃತ್ತಿಗಳಲ್ಲಿ ನಿರೂಪಣೆಯನ್ನ ಮಾಡಿರುವ ಕಿಚ್ಚ ಸುದೀಪ್ ಅವರು ಈಗ ಏಳನೇ ಆವೃತ್ತಿಯನ್ನ ಮುಗಿಸಿದ್ದಾರೆ.

ಇನ್ನು 2015 ರಿಂದ 2020 ರ ವರೆಗೆ ಅಗ್ರಿಮೆಂಟ್ ಮಾಡಲಾಗಿದ್ದು 2020 ರ ತನಕ ಕಿಚ್ಚ ಸುದೀಪ್ ಅವರು ಕಾಲ್ ಶೀಟ್ ಕೊಟ್ಟಿದ್ದಾರಂತೆ. ಇನ್ನು 2020 ರ ಬಳಿಕ ಕಿಚ್ಚ ಸುದೀಪ್ ಅವರ ಸಂಭಾವನೆ ಇನ್ನಷ್ಟು ಹೆಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, ಕಿಚ್ಚ ಸುದೀಪ್ ಅವರನ್ನ ಬಿಟ್ಟರೆ ಬಿಗ್ ಬಾಸ್ ಕನ್ನಡ ನಿರೂಪಣೆ ಮಾಡಲು ಕನ್ನಡದ ಯಾವ ನಟ ಕೂಡ ಸೂಟ್ ಆಗುತ್ತಿಲ್ಲ, ಇನ್ನು ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡುವೆ ಒಲವು ಜಾಸ್ತಿ ಇದೆ. ಇನ್ನು ಎಲ್ಲಾ ಭಾಷೆಯ ಬಿಗ್ ಬಾಸ್ ನಿರೂಪಕರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಅವರು ಅಗ್ರ ಸ್ಥಾನದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ, ಸ್ನೇಹಿತರೆ ನಿಮ್ಮ ಪ್ರಕಾರ ಮುಂದಿನ ಸೀಸನ್ ನಲ್ಲಿ ಬಿಗ್ ಬಾಸ್ ಮನೆಗೆ ಯಾರು ಯಾರು ಬರಬೇಕು ಅನ್ನುವುದರ ಬಗ್ಗೆ ನಿಮ್ಮ ಅಭಿಪಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬ ಬಿಗ್ ಬಾಸ್ ಅಭಿಮಾನಿಗೆ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…