ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು ಕೇಂದ್ರ ಸಚಿವ ಸ್ಥಾನವೂ ಬೇಡಿಕೆ ಇಟ್ಟಿದ್ದಾರೆ. ಈ ವಿಡಿಯೋ ಸಿಡಿ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದ್ದೇನೆ. ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿರುವ ವಿಡಿಯೋ ನನ್ನ ಬಳಿಯಿದೆ. ಶೀಘ್ರದಲ್ಲಿಯೇ ಅದನ್ನು ಬಿಡುಗಡೆ ಮಾಡಲಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸುಮಲತಾರನ್ನು ಬೆಂಬಲಿಸಿ ಎಂದು ಹೇಳಿದ್ದರು. ಈ ಹೇಳಿಕೆ ಬಳಿಕವೂ ಸುಮಲತಾ ಅವರು ಬಿಜೆಪಿ ಸೇರುವ ಕುರಿತು ಊಹಾಪೋಹಗಳು ಹರಿದಾಡಿದ್ದವು.
ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ಬಂಡಾಯ ಕಾಂಗ್ರೆಸ್ ನಾಯಕರು ಸುಮಲತಾ ಪರ ಕೆಲಸ ಮಾಡುತ್ತಲೇ ಇದ್ದಾರೆ. ಇದರಿಂದ ಬೇಸತ್ತ ದಿನೇಶ್ ಗುಂಡೂರಾವ್ ಅವರೇ ಖುದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಐವರನ್ನು ಕಾಂಗ್ರೆಸ್ನಿಂದ ಉಚ್ಚಾಟಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಸುಮಲತಾ ಅಂಬರೀಶ್ ಗೆದ್ದ ಮೇಲೆ ಬಿಜೆಪಿ ಸೇರುತ್ತಾರೆ ಎಂಬ ವದಂತಿಗೆ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಹಿಂದೆಯೇ ಮಂಡ್ಯದ ಶಂಕರನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನಾನು ಈ ಮೊದಲೇ ಸ್ಪಷ್ಟಪಡಿಸಿದ್ದೀನಿ. ಯಾವುದೇ ಪಕ್ಷಕ್ಕೆ ಹೋಗಲ್ಲ. ವಿರೋಧಿಗಳು ದಿನಾ ಒಂದೊಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಒಂದು ದಿನ ಬಿಜೆಪಿ ಅಭ್ಯರ್ಥಿ, ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಅಂದರು. ಬೇಕಾದರೆ ಜೆಡಿಎಸ್ ಅಭ್ಯರ್ಥಿ ಎಂದೂ ಹೇಳುತ್ತಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿದ್ದೇನೆ. ನನಗೆ ಯಾರು ಸಪೋರ್ಟ್ ಮಾಡುತ್ತಾರೋ ಅವರು ಯಾವುದೇ ಷರತ್ತು ಹಾಕದೆ ಬೆಂಬಲ ನೀಡುತ್ತಿದ್ದಾರೆ. ಗೆದ್ದರೆ ನನ್ನ ಕ್ಷೇತ್ರದ ಜನ ಯಾವ ಪಕ್ಷಕ್ಕೆ ಬೆಂಬಲ ನೀಡಿ ಎಂದು ಹೇಳುತ್ತಾರೆಯೋ ಅವರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…
ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…