ರಥಸಪ್ತಮಿ ಮಹತ್ವ?
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ರಥಸಪ್ತಮಿ ಎಂದರೆ ತಕ್ಷಣ ನೆನಪಾಗುವುದು ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡುವುದು. ಬೆಳಗಿನ ಜಾವದಲ್ಲಿ ತಲೆ, ಭುಜಗಳು, ಎದೆ, ಮೊಣಕಾಲು, ಪಾದಗಳ ಮೇಲೆ ಎಕ್ಕದ ಎಲೆಯನ್ನು ಇಟ್ಟುಕೊಂಡು…