ದೇಗುಲ ದರ್ಶನ

ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

47

ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು.

12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ ಸಮೂಹ ಸಾಕ್ಷಿಯಾಯಿತು.

 ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ರುದ್ರಾಭಿಷೇಕ , ಕುಂಕುಮಾರ್ಚನೆ ಸೇರಿದಂತೆ ಪೂಜಾ ಕಾರ್ಯಗಳು ನಡೆದವು.ಭಕ್ತರು ತೀರ್ಥಪ್ರೋಕ್ಷಣೆ ಮಾಡಿಸಿಕೊಳ್ಳಲು , ಹಾಗೂ ಬಾಟಲಿ, ಬಿಂದಿಗೆಗಳಲ್ಲಿ ತೀರ್ಥ ತುಂಬಿಸಿಕೊಳ್ಳು ಮುಗಿಬಿದ್ದರು.ರಾಜ್ಯವಲ್ಲದೆ ಕೇರಳ. ತಮಿಳುನಾಡು , ಮತ್ತಿತರ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು. 

ಪ್ರಾಕೃತಿಕ ವಿಕೋಪ ಮತ್ತು ಮಳೆಯ ಅಬ್ಬರದ ಹಿನ್ನಲೆಯಲ್ಲಿ ಈ ಭಾರಿ ಭಕ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. ಜಿಲ್ಲಾಧಿಕಾರಿ ಅನ್ನೀಸ್ ಕೆ ಜಾಯ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿಪಿ ಅವರ ನೇತೃತ್ವದಲ್ಲಿ ತೀರ್ಥೋದ್ಬವಕ್ಕೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿತ್ತು.  ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಹಿಂದೂ ಧರ್ಮದಲ್ಲಿ ಪೂಜಿಸುವ ಕಾಮಧೇನು ಗೋವಿನ ಉತ್ಪತ್ತಿಯಾಗಿರುವುದೇ ಒಂದು ರೋಚಕ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ಸುದ್ದಿ

    ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…