ಸ್ಪೂರ್ತಿ

ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

1259

ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ.

ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ.

ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು ಅವರಿಗೆ ಇಷ್ಟವಿರಲಿಲ್ಲ. ಶಾಲೆಯಿಂದ ಹೊರಟು ನಿಂತ ಆ ಶಿಕ್ಷಕನನ್ನು ವಿದ್ಯಾರ್ಥಿಗಳೆಲ್ಲರೂ ಸುತ್ತುವರಿದು, ಸರ್, ನಮ್ಮನ್ನು ಬಿಟ್ಟು ಹೋಗಬೇಡಿಎಂದು ಕಣ್ಣೀರಿಟ್ಟರು.

ವಿದ್ಯಾರ್ಥಿಗಳ ಸ್ನೇಹಬಂಧನದಲ್ಲಿ ಸಿಲುಕಿದ ಆ ಶಿಕ್ಷಕನ ಕಣ್ಣಲ್ಲಿಯೂ ನೀರು. ತಮಿಳುನಾಡಿನ ತಿರುವಳ್ಳೂರ್ನ ವೆಲಿಯಗರಂ ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳ ಈ ಪ್ರೀತಿಯ ಬಗ್ಗೆ ತಮಿಳುನಾಡಿನ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಜಿ. ಭಗವಾನ್ ಎಂಬ 28ರ ಹರೆಯದ ಇಂಗ್ಲಿಷ್ ಅಧ್ಯಾಪಕನಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಈ ರೀತಿ ಕಣ್ಣೀರಿಟ್ಟಿದ್ದಾರೆ. ವಿದ್ಯಾರ್ಥಿಗಳ ಪ್ರೀತಿಗೆ ಭಾವುಕನಾಗಿ ಹೊರಡುತ್ತಿರುವ ಅಧ್ಯಾಪಕನನ್ನು ವಿದ್ಯಾರ್ಥಿಗಳು ಅಪ್ಪಿ ಹಿಡಿದಿರುವ ಚಿತ್ರವನ್ನು ತಮಿಳುನಾಡಿನ ಪತ್ರಿಕೆಗಳು ಮತ್ತು ಸುದ್ದಿವಾಹಿನಿ ಪ್ರಸಾರ ಮಾಡಿತ್ತು.

ಜಿ. ಭಗವಾನ್ ಅವರಿಗೆ ತಿರುತ್ತಾಣಿ ಬಳಿಯ ಆರುಂಗುಲಮ್ ಸರ್ಕಾರಿ ಹೈಸ್ಕೂಲ್ಗೆ ವರ್ಗವಾಗಿದೆ. ಆದರೆ ಸದ್ಯ ಈ ಆದೇಶವನ್ನು 10 ದಿನದಳ ಕಾಲ ತಡೆಹಿಡಿದಿದ್ದು, ವರ್ಗಾವಣೆಯಾಗಿ ಹೊಸ ಶಾಲೆಗೆ ಹೋಗಬೇಕೇ ? ಬೇಡವೇ? ಎಂಬುದನ್ನು ನಿರ್ಧರಿಸಲಾಗುವುದು.

ಈ ಬಗ್ಗೆ  ಮಾತನಾಡಿದ ಭಗವಾನ್, ಇದು ನನ್ನ ಮೊದಲ ಕೆಲಸ ಆಗಿತ್ತು. 2014ರಲ್ಲಿ ನಾನು ಈ ಹೈಸ್ಕೂಲ್ಗೆ ಶಿಕ್ಷಕನಾಗಿ ಬಂದಿದ್ದೆ. ಇಲ್ಲಿನ ವಿದ್ಯಾರ್ಥಿ-ಶಿಕ್ಷಕರ ಅನುಪಾತ ನೋಡಿದರೆ ನಾನು ಹೆಚ್ಚುವರಿ ಅಧ್ಯಾಪಕನಾಗಿದ್ದೆ. ಹಾಗಾಗಿ ಶಿಕ್ಷಕರ ಕೊರತೆ ಇರುವ ಶಾಲೆಗೆ ನನ್ನನ್ನು ವರ್ಗ ಮಾಡಲು ತೀರ್ಮಾನಿಸಿದ್ದು, ತಿರುತ್ತಾಣಿ ಶಾಲೆಗೆ ವರ್ಗಾವಣೆ ಆದೇಶ ಸಿಕ್ಕಿತ್ತು.

ಶಿಕ್ಷಕನಾದವನು ಮಕ್ಕಳನ್ನು ತನ್ನ ಸ್ವಂತ ಮಕ್ಕಳೆಂದು ಪ್ರೀತಿಸಿ, ಮಕ್ಕಳೊಂದಿಗೆ ಒಂದಾಗಿ, ಮಕ್ಕಳ ಮನದೊಳಗೆ ಇಳಿದು, ಮಕ್ಕಳನ್ನು ಅರ್ಥಮಾಡಿಕೊಂಡಾಗ ಮಾತ್ರ ನಿಜವಾದ ಶಿಕ್ಷಕನಾಗುತ್ತಾನೆ. ಮಕ್ಕಳ ಪ್ರೀತಿಯನ್ನು ಸಂಪಾದಿಸುವುದು ಸುಲಭದ ಮಾತಲ್ಲ. ಭಗವಾನ್ ಅವರು ಶಿಕ್ಷಕರಿಗೆಲ್ಲಾ ಒಂದು ರೋಲ್ ಮಾಡೆಲ್. ಮಕ್ಕಳು ಶಿಕ್ಷಕನನ್ನು ಬಿಟ್ಟು ಕೊಡ್ತಿಲ್ಲ ಅಂದ್ರೆ ಆ ಶಿಕ್ಷಕನ ವೃತ್ತಿ ಪ್ರೇಮ, ಮಕ್ಕಳ ಬಗೆಗಿನ ಪ್ರೀತಿ ಎಂತದ್ದಿರಬೇಕು. ಹ್ಯಾಟ್ಸ್ ಆಫ್ ಭಗವಾನ್ ಸರ್.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವ್ಯಕ್ತಿ ವಿಶೇಷಣ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಸುದ್ದಿ

    ಮೊದಲ ವಾರವೇ ಗಳಿಕೆಯಲ್ಲಿ ದಾಖಲೆ ಮುರಿದ ಶ್ರೀಮುರಳಿ ಅಭಿನಯದ ಭರಾಟೆ..!

    ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…

  • ಜ್ಯೋತಿಷ್ಯ

    ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…