News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

68

ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.

ಬಾಲಕ ಮೂರು ವರ್ಷದವನಿರುವಾಗಲೇ ಆತನ ಬಾಯಿ ಊದಿಕೊಂಡಿರುವುದನ್ನು ಪೋಷಕರು ಗಮನಿಸಿದ್ದರು. ಆದರೆ ಬಲಕನ ಬಾಯಿ ಬಾವು ಬಂದಿರುವ ಕುರಿತು ತಲೆ ಕೆಡಿಸಿಕೊಂಡಿರಲಿಲ್ಲ. ಅಲ್ಲದೆ, ಬಾಯಿಯನ್ನು ಪರೀಕ್ಷಿಸಲು ಮುಂದಾದಾಗ ಬಾಲಕ ಅಳಲು ಪ್ರಾರಂಭಿಸುತ್ತಿದ್ದ. ಹೀಗಾಗಿ ಪೋಷಕರು ನಿರ್ಲಕ್ಷ್ಯ ವಹಿಸಿದ್ದರು. ಬಾವು ಹೆಚ್ಚಾಗುತ್ತಿದ್ದಂತೆ ಪೋಷಕರು ಭಯಭೀತರಾಗಿದ್ದು, ನಂತರ ಆಸ್ಪತ್ರೆಗೆ ಕರೆ ತಂದಿದ್ದಾರೆ ಎಂದು ಓರಲ್ ಆಂಡ್ ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಪ್ರಾಧ್ಯಾಪಕ ಪಿ.ಸೆಂದಿಲ್‍ನಾಥನ್ ತಿಳಿಸಿದ್ದಾರೆ.

ಎಕ್ಸ್-ರೇ ಹಾಗೂ ಸಿಟಿ ಸ್ಕ್ಯಾನ್ ಮಾಡಿದಾಗ ಕೆಳಭಾಗದ ಬಲ ದವಡೆಯಲ್ಲಿ ಹೆಚ್ಚು ಹಲ್ಲುಗಳಿರುವುದು ಕಂಡು ಬಂತು. ಹೀಗಾಗಿ ಸರ್ಜರಿ ಮಾಡಲು ನಿರ್ಧರಿಸಿದೆವು. ನಂತರ ಅರಿವಳಿಕೆ(ಅನಸ್ತೇಶಿಯಾ) ನೀಡಿ ಬಲಭಾಗದ ದವಡೆಯನ್ನು ತೆರೆದೆವು, ಅಲ್ಲಿ ಒಂದು ಚೀಲದ ರೀತಿ ಕಾಣಿಸಿತು. ಅದು ಸುಮಾರು 200 ಗ್ರಾಂ. ತೂಕವಿತ್ತು. ಆ ಚೀಲದ ತುಂಬ ಹಲ್ಲುಗಳಿದ್ದವು. ತುಂಬಾ ಎಚ್ಚರಿಕೆ ವಹಿಸಿ ಹಲ್ಲುಗಳನ್ನು ಹೊರ ತೆಗೆದೆವು. ಚೀಲ ತೆರೆದು ನೋಡಿದಾಗ ನೋಡಿದಾಗ ಸಣ್ಣ, ಮಧ್ಯಮ ಹಾಗೂ ದೊಡ್ಡ ಗಾತ್ರದ 526 ಹಲ್ಲುಗಳು ಪತ್ತೆಯಾಗಿವೆ ಎಂದು ಪಿ.ಸೆಂದಿಲ್‍ನಾಥನ್ ವಿವರಿಸಿದರು.

ಕೆಲವು ತುಂಬಾ ಸಣ್ಣ ಕಣಗಳಿದ್ದರೂ ಅವುಗಳಲ್ಲಿ ಹಲ್ಲುಗಳ ಗುಣಗಳಿರುತ್ತವೆ. ಆ ಚೀಲದಿಂದ ಹಲ್ಲುಗಳನ್ನು ತೆಗೆಯಲು ಸುಮಾರು 5 ತಾಸು ತೆಗೆದುಕೊಳ್ಳಲಾಗಿದೆ. ಹೊರ ತೆಗೆಯಲಾದ ಹಲ್ಲುಗಳು ಮುತ್ತಿನ ಆಕಾರದಲ್ಲಿವೆ ಎಂದು ವೈದ್ಯರು ತಿಳಿಸಿದ್ದಾರೆ.ಓರಲ್ ಆಂಡ್ ಮ್ಯಾಕ್ಸಿಲೊಫೇಶಿಯಲ್ ಪ್ಯಾಥೋಲಜಿ ವಿಭಾಗದ ಮುಖ್ಯಸ್ಥೆ ಪ್ರತಿಭಾ ರಮಣಿ ಈ ಕುರಿತು ಮಾಹಿತಿ ನೀಡಿ, ಸರ್ಜರಿ ಮಾಡಿದ ಮೂರು ದಿನಗಳ ನಂತರ ಬಾಲಕ ಸಹಜ ಸ್ಥಿಗೆ ಮರಳಿದ್ದಾನೆ ಎಂದು ತಿಳಿಸಿದ್ದಾರೆ. ಬಾಯಿಯಲ್ಲಿ 526 ಹಲ್ಲುಗಳು ಪತ್ತೆಯಾಗಿದ್ದು ವಿಶ್ವದಲ್ಲೇ ದಾಖಲಾದ ಮೊದಲ ಪ್ರಕರಣ ಇದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

    ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…

  • ಜ್ಯೋತಿಷ್ಯ

    ಯುಗಾದಿ ಅಮಾವಾಸ್ಯಯ ಈ ದಿನದಂದು ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಸಿನಿಮಾ

    ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

    ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….

  • ಸುದ್ದಿ

    ಬಿಎಂಟಿಸಿ ಸಾರಿಗೆ ಇಲಾಖೆ ಇಂದ ಮಹಿಳಾ ಪ್ರಯಾಣಿಕರಿಗೊಂದು’ಸಂತಸದ ಸುದ್ದಿ’…!

    ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…