ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ.
ಹೃದಯಾಘಾತದ ಸಾಧ್ಯತೆ
ಜಾಮಾ ಅಧ್ಯಯನದ ಪ್ರಕಾರ, ಬೆಳಗಿನ ಉಪಹಾರವನ್ನು ತ್ಯಜಿಸುವ ಪುರುಷರಲ್ಲಿ ಹೃದಯಾಘಾತದ ಸಾಧ್ಯತೆ ಶೇ.27ಕ್ಕಿಂತ ಹೆಚ್ಚಿರುತ್ತದೆ. ಈ ಸಂಶೋಧನೆಯ ನೇತೃತ್ವ ವಹಿಸಿದ್ದ ಡಾ. ಲೇಹ್ ಕಾಹಿಲ್, ನೀವು ಆರೋಗ್ಯಕರವಾದ ಉಪಹಾರ ಸೇವಿಸಿದರೆ ಹೃದಯಾಘಾತದ ಅಪಾಯ ತಡೆಯಬಹುದು. ಬೆಳಗಿನ ಉಪಾಹಾರವನ್ನು ತ್ಯಜಿಸಿದರೆ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.
ತೂಕ ಹೆಚ್ಚಾಗುತ್ತದೆ
ಬೆಳಗಿನ ಸಮಯದಲ್ಲಿ ಉಪಹಾರವನ್ನು ಸೇವಿಸದಿರುವವರ ಕುರಿತು ನಡೆಸಿದ ಅಧ್ಯಯನಗಳ ಪ್ರಕಾರ, ಬೆಳಗ್ಗೆ ತಿಂಡಿ ತಿನ್ನದವರು ಕ್ರಮೇಣ ತೂಕವನ್ನು ಹೆಚ್ಚಿಸಿಕೊಂಡಿದ್ದರು. ಹಸಿವಿನ ಮಟ್ಟ ಹೆಚ್ಚಾದಷ್ಟೂ ಆಹಾರ ಸೇವನೆಯ ಪ್ರಮಾಣ ಹೆಚ್ಚಾಗುತ್ತದೆ. ತಿಂಡಿ ತ್ಯಜಿಸುವ ನಿರಂತರ ಅಭ್ಯಾಸವು ಅಂತಿಮವಾಗಿ ತೂಕ ಹೆಚ್ಚಾಗಲು ಕಾರಣವಾಗುತ್ತದೆ ಹೊರತು ತೂಕ ನಷ್ಟಕ್ಕೆ ಕಾರಣವಾಗುವುದಿಲ್ಲ ಎನ್ನುವುದನ್ನು ಮರೆಯಬೇಡಿ.
ದೇಹದ ಶಕ್ತಿ ಕುಗ್ಗುತ್ತದೆ
1999 ರಲ್ಲಿ ಫಿಸಿಯೋಲಾಜಿಕಲ್ ಬಿಹೇವಿಯರ್ ಎಂಬ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಉಪಹಾರವನ್ನು ತ್ಯಜಿಸುವುದರಿಂದ ದೇಹದ ಶಕ್ತಿ ಮತ್ತು ಮನಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.
ಕ್ಯಾನ್ಸರ್ ಬರಬಹುದು!!
ಬೆಳಗಿನ ಸಮಯದಲ್ಲಿ ಉಪಹಾರ ತ್ಯಜಿಸಿ, ಆ ನಂತರ ಆಹಾರವನ್ನು ಅತಿಯಾಗಿ ಸೇವಿಸಿದರೆ ಸ್ಥೂಲಕಾಯತೆ ಬರಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಕ್ಯಾನ್ಸರ್ ರಿಸರ್ಚ್ ಯುಕೆ ನಡೆಸಿದ ಸಂಶೋಧನೆಯ ಪ್ರಕಾರ, ಅಧಿಕ ತೂಕ ಅಥವಾ ಬೊಜ್ಜು ಹೊಂದಿರುವ ವ್ಯಕ್ತಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ತಿಳಿದುಬಂದಿದೆ.
ವಿಶುಯಲ್ ಸರ್ಚ್ ಟೆಸ್ಟ್
12 ರಿಂದ 15 ವರ್ಷದೊಳಗಿನ ಮಕ್ಕಳ ಮೇಲೆ ಒಂದು ಅಧ್ಯಯನ ನಡೆಸಲಾಯಿತು. ಮೊದಲನೆ ಪ್ರಯೋಗದಲ್ಲಿ ಇವರಿಗೆ ಉಪಹಾರ ನೀಡಲು ಅವಕಾಶ ನೀಡಲಾಯಿತು. ಎರಡನೇ ಪ್ರಯೋಗದಲ್ಲಿ ಉಪಹಾರ ಕೊಡಲಿಲ್ಲ. ಆಗ ಬಂದ ಫಲಿತಾಂಶ ಹೀಗಿತ್ತು. ಉಪಹಾರ ಸೇವಿಸಿದಾಗ ವಿಶುಯಲ್ ಸರ್ಚ್ ಟೆಸ್ಟ್ ರಿಸಲ್ಟ್ ಉತ್ತಮವಾಗಿತ್ತು. ಉಪಹಾರದ ಸೇವಿಸದಿದ್ದಾಗ ರಿಸಲ್ಟ್ ಶೂನ್ಯ. ಹದಿಹರೆಯದವರ ಮೇಲೆ ಈ ಅಧ್ಯಯನವನ್ನು ನಡೆಸಲಾಗಿದ್ದರೂ ಇದು ವಯಸ್ಕರಿಗೂ ಅನ್ವಯವಾಗುತ್ತದೆ.
ಕೂದಲು ಉದುರುತ್ತದೆ
ಬೆಳಗಿನ ಸಮಯ ಉಪಹಾರ ತ್ಯಜಿಸುವುದರಿಂದ ಆಗುವ ಅಡ್ಡಪರಿಣಾಮವೆಂದರೆ ಕೂದಲು ಉದುರುವುದು. ಇದು ಕೂದಲಿನ ಬೆಳವಣಿಗೆಯನ್ನು ತಪ್ಪಿಸಿ, ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ನಿಮಗೆ ಗೊತ್ತಿದೆಯೋ, ಇಲ್ಲವೋ ನೀವು ಬೆಳಗಿನ ಸಮಯ ಉಪಹಾರ ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ನೀವು ನಿಜಕ್ಕೂ ಸೊಂಪಾದ ಕೂದಲನ್ನು ಬಯಸಿದ್ದರೆ ಪ್ರತಿದಿನ ಪ್ರೊಟೀನ್ ಭರಿತ ಉಪಹಾರ ಸೇವಿಸಿ.
ಚಯಾಪಚಯ ಕ್ರಿಯೆ ಉಪಹಾರದಿಂದಲೇ
ಇಂಧನ ಇಲ್ಲದಿದ್ದರೆ ಕಾರು ಹೇಗೆ ಸ್ಟಾರ್ಟ್ ಆಗುವುದಿಲ್ಲವೋ ಅಂತೆಯೇ, ನಮ್ಮ ಚಯಾಪಚಯ ಕ್ರಿಯೆ ಪ್ರಾರಂಭವಾಗಲು ಉಪಹಾರ ಬೇಕು. ರಾತ್ರಿ12 ಗಂಟೆಗಳ ಕಾಲ ವಿಶ್ರಾಂತಿ ಪಡೆದ ನಂತರ ದೇಹವನ್ನು ಪೋಷಿಸುವುದು ಬೆಳಗಿನ ಉಪಾಹಾರ. ವಿವಿಧ ಅಧ್ಯಯನಗಳ ಪ್ರಕಾರ ಉಪಹಾರ ಸೇವಿಸುವ ಜನರ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಟ್ಯಾಟೂ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಈಗಿನ ಕಾಲದಲ್ಲಿ ಎಲ್ಲರಿಗೂ ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…