ಸುದ್ದಿ

ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

1077

ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ ಇತ್ತು. ಫೈಟ್ ಅನ್ನು ಇಷ್ಟ ಪಡುವ ಪ್ರಭಾಕರ್ ಅದ್ಭುತವಾಗಿ ಫೈಟ್ ಮಾಡೋದು ಇನ್ನೊಂದು ವಿಶೇಷ. ತನಗೂ ಸೇರಿದಂತೆ ಹಲವಾರು ಸ್ಟಾರ್ ಗಳಿಗೂ ಫೈಟ್ ಅನ್ನು ಕಂಪೋಸ್ ಮಾಡುತ್ತಿದ್ದರು. ತನ್ನ 14ನೇ ವಯಸ್ಸಿನಲ್ಲಿಯೇ ಬಾಕ್ಸರ್ ಅನ್ನು ಎರಡು ಬಾರಿ ನೆಲಕ್ಕೆ ಕೆಡುವಿಹಿದ ಬಲಿಷ್ಠ ದೇಹಿ ಅವರಾಗಿದ್ದರು.

ಸುಮಾರು ನಾಲ್ಕು ದಶಕಗಳ ಹಿಂದೆ ಪ್ರಭಾಕರ್ ಕನ್ನಡ ಸಿನಿಮಾ ರಂಗದಲ್ಲಿ ಸ್ಟಂಟ್ ಮ್ಯಾನ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಹೀಗೆ ಸ್ಟಂಟ್ ಮಾಸ್ಟರ್ ಆಗಿ ಖ್ಯಾತರಾಗಿದ್ದರು. ತನ್ನ ಫೈಟ್ಸ್ ನೋಡಲಿಕ್ಕಾಗಿಯೇ ಪ್ರೇಕ್ಷಕರು ತನ್ನ ಸಿನಿಮಾ ನೋಡಲು ಬರುತ್ತಾರೆ ಎಂಬ ಹೆಮ್ಮೆ ಪ್ರಭಾಕರ್ ಅವರಿಗೆ ಇತ್ತಂತೆ. ಅವೆಲ್ಲಕ್ಕಿಂತ ಹೆಚ್ಚಾಗಿ ಪ್ರಭಾಕರ್ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ನಟಿಸುತ್ತಿದ್ದರು. ಎಲ್ಲಾ ಫೈಟ್ ದೃಶ್ಯಗಳನ್ನು ತಾನೇ ಖುದ್ದಾಗಿ ಮಾಡುತ್ತಿದ್ದರು. ಇದರಿಂದಾಗಿಯೇ ತಾನು ಇಂದು ಸೋತು ಹೋದ ವ್ಯಕ್ತಿಯಾಗಿದ್ದೇನೆ. ನನ್ನೆಲ್ಲಾ ಮುರಿದ ಮೂಳೆಗಳು ಸರ್ಜರಿಯಲ್ಲಿ ನಿಂತಿವೆ ಎಂದು ಸಂದರ್ಶನವೊಂದರಲ್ಲಿ ಪ್ರಭಾಕರ್ ಹೇಳಿದ್ದರು.

ಟೈಗರ್ ಪ್ರಭಾಕರ್ ಖಳನಟ, ನಿರ್ದೇಶಕ, ನಿರ್ಮಾಪಕ, ಹೀರೋ ಎಲ್ಲಕ್ಕಿಂತ ಹೆಚ್ಚಾಗಿ ಅವರೊಬ್ಬ ಹೃದಯವಂತ ವ್ಯಕ್ತಿ. ಕನ್ನಡ, ತೆಲುಗು, ತಮಿಳು ಸೇರಿ 450 ಸಿನಿಮಾಗಳಲ್ಲಿ ನಟಿಸಿದ್ದ ಅವರು ಬಹುತೇಕರಿಂದ ಮೋಸಕ್ಕೊಳಗಾಗಿದ್ದ ವ್ಯಕ್ತಿ ಟೈಗರ್. ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಅನೇಕ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ, ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿದ್ದರು. ಬೈಕ್ ಅಪಘಾತದ ಬಳಿಕ ಪ್ರಭಾಕರ್ ಆರೋಗ್ಯ ಹದಗೆಡ ತೊಡಗಿತ್ತು..ನಿಧಾನಕ್ಕೆ ಸ್ಟಾರ್ ವ್ಯಾಲ್ಯೂ ಕೂಡಾ ಕಡಿಮೆಯಾಗತೊಡಗಿತ್ತು.

ಅಧಿಕೃತವಾಗಿ ಮೂರು ಮದುವೆಯಾಗಿದ್ದ ಟೈಗರ್ ಗೆ ಇಬ್ಬರು ಪುತ್ರಿಯರು ಭಾರತಿ ಮತ್ತು ಗೀತಾ ಹಾಗೂ ಪುತ್ರ ವಿನೋದ್(ಮೊದಲ ಹೆಂಡತಿ ಮಕ್ಕಳು), 2ನೇ ವಿವಾಹವಾಗಿದ್ದು ನಟಿ ಜಯಮಾಲಾ ಜೊತೆ. ಇವರಿಗೆ ಸೌಂದರ್ಯ ಎಂಬ ಮಗಳು ಹುಟ್ಟಿದ್ದಳು. ಮೂರನೆಯ ಮದುವೆ ಅಂಜು ಜೊತೆ..ಈಕೆಗೆ ಅರ್ಜುನ್ ಎಂಬ ಮಗ ಜನಿಸಿದ್ದ. 2 ಮದುವೆಗಳು ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತ್ತು. ತಾನೇನಿದ್ದರೂ ನೇರವಾಗಿ ಮಾತನಾಡುವ ಮನುಷ್ಯ ಎಂದೇ ಹೇಳಿಕೊಳ್ಳುತ್ತಿದ್ದ ಪ್ರಭಾಕರ್ ಅದೇ ರೀತಿ ಬದುಕಿದ್ದರು. ತನ್ನ ವೈಯಕ್ತಿಕ ಸೇರಿದಂತೆ ಎಲ್ಲಾ ವಿಚಾರವನ್ನು ಮುಚ್ಚಿಡದೇ ಹೇಳುತ್ತಿದ್ದ ನಟ ಅವರಾಗಿದ್ದರು. ವಿಪರ್ಯಾಸ ಎಂಬಂತೆ ಟೈಗರ್ ಕೊನೆಗಾಲದಲ್ಲಿ ಅವರ ಜೊತೆ ಮಗ ವಿನೋದ್ ಬಿಟ್ಟರೆ ಬೇರೆ ಯಾರೂ ಇರಲಿಲ್ಲವಾಗಿತ್ತು. ತನಗೆ ಎಲ್ಲಾ ಮೋಸ ಮಾಡಿಬಿಟ್ಟರು ಎಂಬುದಾಗಿ ಕೊನೆಯ ದಿನಗಳಲ್ಲಿ ಮಗನ ಜೊತೆ ಟೈಗರ್ ಹೇಳಿಕೊಂಡಿದ್ದರಂತೆ. ಕೊನೆಗೆ 1948ರಲ್ಲಿ ಜನಿಸಿದ್ದ ಟೈಗರ್ ಬಹುಅಂಗಾಂಗ ವೈಫಲ್ಯದಿಂದ ತನ್ನ 52ನೇ ವಯಸ್ಸಿನಲ್ಲಿ (2001ರ ಮಾರ್ಚ್ 25ರಂದು ) ವಿಧಿವಶರಾಗಿದ್ದರು. ಸುಮಾರು ನಾಲ್ಕು ವರ್ಷಗಳ ಬಳಿಕ ಟೈಗರ್ ನಿರ್ದೇಶಿಸಿದ್ದ ಗುಡ್ ಬ್ಯಾಡ್ ಅಂಡ್ ಅಗ್ಲಿ ಸಿನಿಮಾ ತೆರೆಕಂಡಿತ್ತು..ಅದು ಪ್ರಭಾಕರ್ ಅವರ ಬದುಕು ಮತ್ತು ಅಂತ್ಯಕ್ಕೆ ಮುನ್ನುಡಿ ಬರೆದಂತೆ ಇತ್ತು..ಇವೆಲ್ಲದರ ನಡುವೆ ಟೈಗರ್ ಇನ್ನೂ ಚಿತ್ರರಸಿಕರ ಮನದಲ್ಲಿ ಉಳಿದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್, ತಂತ್ರಜ್ಞಾನ

    ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

    ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • ಸರ್ಕಾರಿ ಯೋಜನೆಗಳು

    ಇನ್ನು ಮುಂದೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಇಂಟರ್ನೆಟ್ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಡಿಜಿಟಲ್‌ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.