News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

575

ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬ್ಯಾಂಕ್’ಗಳಿಂದ ಸಾಲ ಪಡೆದುಕೊಂಡ ಗ್ರಾಹಕರಿಗೆ ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…

  • ರಾಜಕೀಯ

    ರಾಹುಲ್ ಗಾಂಧಿಯವರಿಗೆ ಯಾವಾಗ ಮದುವೆ ಎಂದು ಕೇಳಿದ್ದು ಯಾರು ಗೊತ್ತಾ…? ತಿಳಿಯಲು ಈ ಲೇಖನ ಓದಿ…

    ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.

  • ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

    ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು…

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…

  • ಸುದ್ದಿ

    ಟೋಲ್ ಹಾಗೂ ಟ್ಯಾಕ್ಸ್ ಹಣ ಉಳಿಸಲು ಈ ವ್ಯಕ್ತಿ ಮಾಡಿದ ಖತರ್ನಾಕ್ ಐಡಿಯಾ ಕೇಳಿದ್ರೆ ಶಾಕ್ ಆಗ್ತೀರಾ…!

    ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.  ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು,  ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…