ಸುದ್ದಿ

ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

48

ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌ ಲೇನ್‌ ಕೂಡ ಇರಲಿದ್ದು, ಇದರಲ್ಲಿ ಫಾಸ್ಟ್‌ಟ್ಯಾಗ್‌ ಜೊತೆಗೆ ನಗದು ರೂಪದಲ್ಲೂ ಹಣ ಪಡೆಯಲಾಗುತ್ತದೆಮುಂದಿನ ದಿನಗಳಲ್ಲಿ ಈ ಲೇನ್‌ಗಳಲ್ಲಿ ಕೇವಲ ಫಾಸ್ಟ್‌ಟ್ಯಾಗ್‌ಗಳನ್ನು ಮಾತ್ರ ಸಮ್ಮತಿಸಲಾಗುತ್ತದೆ. ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳು ಈ ಲೇನ್‌ಗಳ ಮೂಲಕ ಹಾದುಹೋಗುವುದಾದರೆ ದುಪ್ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಟೋಲ್ ಬಳಿ ವಾಹನವನ್ನು ನಿಲ್ಲಿಸಿ ಹಣ ನೀಡಿ ರಸೀದಿ ತೆಗೆದುಕೊಳ್ಳುವ ಕಿರಿಕಿರಿಯನ್ನು ಇದು ನಿವಾರಿಸುತ್ತದೆ.

ಸದ್ಯ ಎಲ್ಲ ಟೋಲ್‌ಗಳಲ್ಲೂ ಕೆಲವು ಲೇನ್‌ಗಳನ್ನು ಫಾಸ್ಟ್‌ಟ್ಯಾಗ್‌ ಸಿದ್ಧವಾಗಿಸಿದ್ದು, ಇಂತಹ ಲೇನ್‌ಗಳಲ್ಲಿ ನಗದು ಪಾವತಿ ಮಾಡುವವರೂ ಆಗಮಿಸುವುದರಿಂದಾಗಿ ಫಾಸ್ಟ್‌ಟ್ಯಾಗ್‌ನ ಮೂಲ ಉದ್ದೇಶವೇ ವಿಫ‌ಲವಾಗಿದೆ. ಹೀಗಾಗಿ ಈ ಬಗ್ಗೆ ಅಧ್ಯಯನ ನಡೆಸಲೂ ಸಚಿವಾಲಯ ಮುಂದಾಗಿದೆ. ಹಾಗೆಯೇ ಟೋಲ್‌ ಪ್ಲಾಜಾದ ಕೊನೆಯ ಒಂದು ಲೈನನ್ನು ಫಾಸ್ಟ್‌ಟ್ಯಾಗ್ ರಹಿತ ವಾಹನಗಳಿಗಾಗಿ ಮೀಸಲಿಡಲಾಗಿದೆ. ಟೋಲ್ ಪ್ಲಾಜಾಗಳಲ್ಲಿ ಸುಗಮ ಸಂಚಾರ ಹಾಗೂ ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಕಾರು, ಜೀಪು, ಲಘು ವಾಹನಗಳು, ಮಿನಿ ಬಸ್ ಏಕಮುಖ ಪ್ರಯಾಣ ದರ ಅಷ್ಟೇ ಇರಲಿದೆ. ಆದರೆ ನಿತ್ಯದ ಬಸ್‌ ಪಾಸಿನ ದರ ಮಾತ್ರ ಐದು ರೂ ಹೆಚ್ಚಳವಾಗಿದೆ. ಕಾರು, ಜೀಪುಗಳ ತಿಂಗಳ ಪಾಸಿನ ದರ 50 , ಲಘು ವಾಹನಗಳು, ಮಿನಿಬಸ್ ಪಾಸಿನ ದರ 75 ರೂ, ಬಸ್, ಟ್ರಕ್‌ಗಳ ದರವೂ ಏರಿಕೆಯಾಗಿದೆ. ದ್ವಿಚಕ್ರ ವಾಹನಗಳಿಗೆ ಯಾವುದೇ ಟೋಲ್ ಇಲ್ಲ. ಬೆಂಗಳೂರಿನ ನವಯುಗ ಟೋಲ್ ಪ್ರೈವೇಟ್ ಲಿಮಿಟೆಡ್ ಭಾನುವಾರ ಟೋಲ್ ದರ ಪ್ರಕಟಿಸಿದೆ. 19.5 ಕಿ.ಮೀಗೆ ದರ ಪರಿಷ್ಕರಣೆ ಮಾಡಿದೆ.

ನಿತ್ಯ 45,000 ವಾಹನಗಳು ಸಂಚರಿಸುತ್ತವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ಸ್‌ಸಿಟಿ, ಅತ್ತಿಬೆಲೆ ಮಾರ್ಗದ ಟೋಲ್ ದರ ಹೆಚ್ಚಳ ಮಾಡಲಾಗಿತ್ತು. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ.ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್‌ ಸಿಟಿ, ಅತ್ತಿಬೆಲೆ ಮಾರ್ಗದಲ್ಲಿ ನಿತ್ಯ ಸಂಚರಿಸುವವರು ಜುಲೈ 1 ರಿಂದ ಟೋಲ್ ದರ ಹೆಚ್ಚಳವಾಗಿದೆ. ಎಲೆಕ್ಟ್ರಾನಿಕ್ಸ್‌ ಸಿಟಿಯಿಂದ ನಗರಕ್ಕೆ ಬರುವವರು ಹೋಗುವ ಮಾರ್ಗದಲ್ಲಿ 5 ರೂ, ಹಿಂದಿರುಗುವಾಗ 5 ರೂ ಒಟ್ಟು 10 ರೂ ಹೆಚ್ಚಿಗೆ ಹಣ ಪಾವತಿಸಬೇಕಿದೆ. ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ. ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ. ಐಟಿ ಸಿಬ್ಬಂದಿಗಳು ಬೆಂಗಳೂರು ನಗರದಿಂದ ನಿತ್ಯ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಾರೆ. 18 ಕಿ.ಮೀ ರಸ್ತೆಯಲ್ಲಿ 55,000 -60 ಸಾವಿರ ವಾಹನಗಳು ಸಂಚರಿಸುತ್ತವೆ. ಹೋಲ್‌ಸೇಲ್ ಇಂಡೆಕ್ಸ್ ಪ್ರೈಸ್ ಪ್ರಕಾರ ಟೋಲ್ ಮೊತ್ತವನ್ನು ಏರಿಕೆ ಮಾಡಲಾಗುತ್ತಿದೆ. ಟೋಲ್ ದರ ಹೆಚ್ಚಾದರೆ ಆ ಮಾರ್ಗದಲ್ಲಿ ಸಂಚರಿಸುವ ಬಸ್‌ ಟಿಕೆಟ್ ದರ ಕೂಡ ಹೆಚ್ಚಾಗಲಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು

    ಸಂಜೆ ಹೊತ್ತು ಕಸ ಗುಡಿಸಿ ಹೊರ ಹಾಕಬಾರದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • karnataka

    ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಉಪಯುಕ್ತ ಮಾಹಿತಿ

    ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

    ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು