ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ
ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ.
ಕ್ಯಾನ್ಸರ್ ತಡೆಗಟ್ಟುತ್ತದೆ : ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.
ಜೀರ್ಣಕ್ರಿಯೆ ಹೆಚ್ಚಿಸುತ್ತದೆ :ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ ,ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ ಅರಿಶಿನವನ್ನು ಒಂದು ಕಪ್ ಹಾಲಿಗೆ ಸೇರಿಸಿ ಕುಡಿಯಿರಿ.
ಸಮಯಕ್ಕೆ ಸರಿಯಾಗಿ ಋತುಚಕ್ರ : ಅರಿಶಿನದ ಹಾಲು ಕುಡಿಯುತ್ತಿದ್ದರೆ ಮುಟ್ಟಿನ ನೋವು ಶಮನಗೊಂಡು, ಋತುಚಕ್ರ ಸಮಯಕ್ಕೆ ಸರಿಯಾಗಿ ಆಗುತ್ತದೆ. ಜೊತೆಗೆ, ಲ್ಯುಕೋರಿಯಾ, ಎಂಡೊಮೆಟ್ರಿಯೊಸಿಸ್, ಫೈಬ್ರಾಯ್ಡ್ಸ್ ಮತ್ತು ಹಾರ್ಮೋನುಗಳಲ್ಲಿ ಅಸಮತೋಲನ ಹೊಂದಿರುವ ಮಹಿಳೆಯರಿಗೂ ಅರಿಶಿನ ಹಾಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಕೆಮ್ಮು ಮತ್ತು ಶೀತಕ್ಕೆ ಪರಿಹಾರ : ಅರಿಶಿನ ಹಾಲು ಆಂಟಿವೈರಲ್ ಮತ್ತು ಆಂಟಿಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವುದರಿಂದ ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ಗಂಟಲು ನೋಯುತ್ತಿದ್ದರೆ ಅರಿಶಿನ ಹಾಲನ್ನು ಕುಡಿಯಿರಿ.
ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ : ಅರಿಶಿನದ ಹಾಲು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಅಸ್ತಮಾ, ಬ್ರಾಂಕೈಟಿಸ್ಗೆ ಪರಿಣಾಮಕಾರಿ ಪರಿಹಾರವಾಗಿದೆ. ಸೈನಸ್ ಮತ್ತು ಶ್ವಾಸಕೋಶದ ಸಮಸ್ಯೆಯಿದ್ದರೂ ಪರಿಹಾರ ನೀಡುತ್ತದೆ.
ತೂಕ ಕಡಿಮೆಯಾಗುತ್ತದೆ : ಹೌದು, ಅರಿಶಿನ ಹಾಲು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ! ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.
ಸರಿಯಾಗಿ ನಿದ್ರೆ ಬರಲು : ನಿದ್ರೆ ಸರಿಯಾಗಿ ಬರದಿದ್ದರೆ ಅರಿಶಿನ ಹಾಲು ಕುಡಿಯಿರಿ. ಮಲಗುವ ಮೊದಲು ಅರಿಶಿನ ಹಾಲು ಕುಡಿದರೆ ವಿಶ್ರಾಂತಿ ಸಿಗುತ್ತದೆ. ಮನಸ್ಸು ಶಾಂತಗೊಂಡು ನಿದ್ರೆ ಬರುತ್ತದೆ.
ಕೀಲು ನೋವು ನಿವಾರಣೆ : ಅರಿಶಿನವನ್ನು ಆಯುರ್ವೇದದಲ್ಲಿ ‘ನೈಸರ್ಗಿಕ ಆಸ್ಪಿರಿನ್’ಎಂದು ಕರೆಯುತ್ತಾರೆ. ಇದು ಎಲ್ಲಾ ರೀತಿಯ ನೋವನ್ನು ನಿವಾರಿಸುತ್ತದೆ. ಅರಿಶಿನ ಹಾಲಿನಲ್ಲಿ ಕ್ಯಾಲ್ಸಿಯಂ ಇರುವುದರಿಂದ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಆರೋಗ್ಯವಾಗಿರಿಸುತ್ತದೆ. ಈ ಹಾಲನ್ನು ಪ್ರತಿದಿನ ಸೇವಿಸುವುದರಿಂದ ಭವಿಷ್ಯದಲ್ಲಿ ಆಸ್ಟಿಯೊಪೊರೋಸಿಸ್ ಮತ್ತು ಸಂಧಿವಾತ ಬರುವುದನ್ನು ತಪ್ಪಿಸಬಹುದು.
ಚರ್ಮಕ್ಕೆ ಹೊಳಪು ನೀಡುತ್ತದೆ : ಅರಿಶಿನದ ಹಾಲು ಮೊಡವೆ, ಎಸ್ಜಿಮಾ, ಇತರ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಚರ್ಮದಲ್ಲಿ ಮೂಡಿರುವ ಸುಕ್ಕುಗಳನ್ನು ತೆಗೆದು, ನೈಸರ್ಗಿಕವಾಗಿ ಹೊಳೆಯಲು ಸಹಾಯ ಮಾಡುತ್ತದೆ.
ಅರಿಶಿನ ಹಾಲಿನ ಅಡ್ಡಪರಿಣಾಮಗಳು :
* ನಿಮಗೆ ಮೂತ್ರಪಿಂಡದ ಸಮಸ್ಯೆಗಳಿದ್ದರೆ ದಯವಿಟ್ಟು ಅರಿಶಿನದ ಹಾಲು ಕುಡಿಯಬೇಡಿ.
*ಹೆಚ್ಚು ಅರಿಶಿನ ಸೇವನೆಯಿಂದ ದೇಹ ಕಬ್ಬಿಣದಂಶವನ್ನು ಹೀರಿಕೊಳ್ಳಲು ಅಡ್ಡಿಯಾಗಬಹುದು. ಕಬ್ಬಿಣದಂಶವಿರುವ ಆಹಾರವನ್ನು ಸೇವಿಸದ ಜನರಲ್ಲಿ ಕಬ್ಬಿಣದ ಕೊರತೆಗೆ ಕಾರಣವಾಗಬಹುದು.
*ನೀವು ಈಗಾಗಲೇ ಮಧುಮೇಹ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಹಾಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತುಂಬಾ ಕಡಿಮೆ ಮಾಡಬಹುದು. ನೀವು ಮಧುಮೇಹ ರೋಗಿಯಾಗಿದ್ದರೆ ಅರಿಶಿನ ಹಾಲನ್ನು ಸೇವಿಸುವ ಮೊದಲು ದಯವಿಟ್ಟು ನಿಮ್ಮ ವೈದ್ಯರನ್ನು ಪರೀಕ್ಷಿಸಿ.
ಅರಿಶಿನ ಹಾಲು ತಯಾರಿಸುವುದು ಹೇಗೆ?
ಬೇಕಾಗುವ ಪದಾರ್ಥಗಳು : 1 ಟೀ ಚಮಚ ಅರಿಶಿನ, ಹಾಲು ½ ಕಪ್, 1ಟೀ ಚಮಚ ದಾಲ್ಚಿನ್ನಿ ಪುಡಿ, 1ಟೀ ಚಮಚ ಶುಂಠಿ ಪುಡಿಕಾಳುಮೆಣಸಿನಪುಡಿ ಚಿಟಿಕೆಯಷ್ಟು, 1ಟೀಸ್ಪೂನ್ ಜೇನುತುಪ್ಪ. ಮಾಡುವ ವಿಧಾನ :ಒಂದು ಪಾತ್ರೆಯಲ್ಲಿ ಮೇಲೆ ಹೇಳಿದ ಎಲ್ಲಾ ಪದಾರ್ಥಗಳನ್ನು ಬೆರೆಸಿ ಕುದಿಸಿರಿ ನಂತರ ಕಡಿಮೆ ಮಾಡಿ ಉರಿಯಲ್ಲಿ 10 ನಿಮಿಷಗಳ ಕಾಲ ಕುದಿಸಿ. ಸೋಸಿ, ಇದಕ್ಕೆ ಚಿಟಿಕೆಯಷ್ಟು ದಾಲ್ಚಿನ್ನಿ ಸೇರಿಸಿ ಕುಡಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…