ಸುದ್ದಿ

Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

74

ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ.

ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ ಈ ಬಾಲಕನ ತಂದೆ, ಈತನನ್ನು ಬೂಟ್‌ ಕ್ಯಾಂಪ್‌ಗೆ ಸೇರಿಸಿದ್ದರು. ಅಲ್ಲಿಆತ ಗೇಮ್‌ ಕೋಡಿಂಗ್‌ ಕಲಿತಿದ್ದ. ನಾಲ್ಕನೇ ವರ್ಷದಲ್ಲೇ ಬೇಸಿಕ್‌, ಟ್ಯಾಬ್‌ನಲ್ಲಿಸಾಕಷ್ಟು ಗೇಮ್‌ಗಳನ್ನು ಆಡುತ್ತಿದ್ದ.

7ನೇ ವರ್ಷವಿದ್ದಾಗ ಬೇಸಿಕ್‌ ಇಡೀ ದಿನ ಗೇಮಿಂಗ್‌ನಲ್ಲೇ ನಿರತನಾಗಿದ್ದ. ಇದನ್ನು ನೋಡಿದ ಆತನ ತಂದೆ, ”ನೀನು ಯಾಕೆ ನಿನ್ನದೇ ಆದ ಸ್ವಂತ ಗೇಮ್‌ ಮಾಡಬಾರದು. ಅದನ್ನು ಇತರರು ಆಡುವಂತಾಗಲಿ,” ಎಂದು ಬಿಟ್ಟರು. ಬಳಿಕ 9ನೇ ವರ್ಷವಿದ್ದಾಗ ಬೇಸಿಕ್‌, ಗೇಮ್‌ ಅಭಿವೃದ್ಧಿಪಡಿಸುವುದನ್ನು ತಿಳಿದುಕೊಂಡ ಬಾಲಕ, ನಾಲ್ಕು ತಿಂಗಳಲ್ಲೇ 30 ಗೇಮ್‌ಗಳನ್ನು ಸೃಷ್ಟಿಸಿದ್ದಾನೆ. ಬಿಜೆಆರ್‌ ಗೇಮ್ಸ್‌ ಟ್ಯಾಗ್‌ನಡಿ ಈ ಗೇಮ್‌ಗಳನ್ನು ನೀವು ಗೂಗಲ್‌ ಪ್ಲೇ ಸ್ಟೋರ್‌ನಲ್ಲಿನೋಡಬಹುದು.

ಸ್ಮಾರ್ಟ್‌ಫೋನ್ ಆ್ಯಪ್‌ ಮತ್ತು ಗೇಮಿಂಗ್ ಬಹಳ ಬೇಡಿಕೆಯ ಕ್ಷೇತ್ರವಾಗಿದ್ದು, ಉದ್ಯೋಗ ಮತ್ತು ಹವ್ಯಾಸಕ್ಕೂ ದಾರಿಯಾಗಿದೆ. ಜತೆಗೆ ಹೊಸ ಅಯ್ಕೆಗಳ ಅನ್ವೇಷಣೆಗೂ ದಾರಿಮಾಡಿಕೊಡುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

    ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

  • ಆರೋಗ್ಯ, ಸೌಂದರ್ಯ

    ಕರಿಬೇವಿನ ಈ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಉಪಯುಕ್ತ ಮಾಹಿತಿ

    ಕಲ್ಲಂಗಡಿ ಹಣ್ಣಿನ ಬೀಜಗಳನ್ನು ಬಿಸಾಡುವ ಮುಂಚೆ ಈ ಲೇಖನ ಓದಿ

    ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್‌ ಎ, ಬಿ1, ಬಿ6, ವಿಟಮಿನ್‌ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…

  • ದೇಶ-ವಿದೇಶ

    ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ