News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

47

2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ.

ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು.

ಮಹಿಳೆಯ ವಿರುದ್ಧದ ಮನೆಯೊಳಗಿನದ್ದೇ ಹಿಂಸೆಯನ್ನು ಲೆಕ್ಕಕ್ಕೆ ತೆಗೆದುಕೊಂಡಿರುವ ವಿಶ್ವಸಂಸ್ಥೆಯ ಈ ಅಧ್ಯಯನ, ಮಹಿಳೆಯನ್ನುಸುತ್ತುವರಿಸಿರುವ ಹಂತಕ ಪಹರೆಯ ಕುರಿತ ಒಂದು ಸ್ಥೂಲ ಚಿತ್ರ ಮಾತ್ರ.ಈ ಅಂಕಿಅಂಶ ಮನೆಯವರಿಂದಲೇ,ಪರಿಚಿತರಿಂದಲೇ ಕೊಲೆಯಾಗಿ ಹೋಗುತ್ತಿರುವ ಮಹಿಳೆಯ ಎದುರಿನ ಪ್ರತಿಕ್ಷಣದ ಆತಂಕಕಾರಿ ಸ್ಥಿತಿಯ ಸೂಚಕವಷ್ಟೆ. ಯಾರನ್ನೋ ಮದುವೆಯಾಗಿ, ಯಾರದೋ ಹಿಂದೆ ಓಡಿಹೋಗಿ ತಮ್ಮ ಮರ್ಯಾದೆ ಕಳೆದಳೆಂದು ಮನೆಮಗಳನ್ನೇ ಕೊಲ್ಲುವ ‘ಮರ್ಯಾದಸ್ಥ’ರಿಗೆ ಬಲಿಯಾದವರೂ ಈ ಲೆಕ್ಕದಲ್ಲಿದ್ದಾರೆ.

ಜಗತ್ತಿನಾದ್ಯಂತ ಪ್ರತಿ ತಾಸಿಗೆ 6 ಮಹಿಳೆಯರು ತಮಗೆ ಗೊತ್ತಿರುವ ವ್ಯಕ್ತಿಯಿಂದಲೇ ಕೊಲೆಯಾಗುತ್ತಿದ್ದಾರೆ.ವಿಶ್ವಸಂಸ್ಥೆಯ ಅಧ್ಯಯನವು ಎತ್ತಿಹೇಳುತ್ತಿರುವ ಮತ್ತೊಂದು ಅಂಶ, ಮನೆಯೊಳಗಿನವರು ಅಥವಾ ಪರಿಚಿತರ ಕೈಯಲ್ಲಿ ಮಹಿಳೆಯರು ಸಾಯುತ್ತಿರುವುದು ಜಗತ್ತಿನ ಬೇರೆ ಭಾಗಗಳಿಗೆ ಹೋಲಿಸಿದರೆ ಏಷ್ಯಾದಲ್ಲೇ ಹೆಚ್ಚು ಎಂಬುದು. ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ. ಎಂಥ ರಕ್ಕಸರ ಮಧ್ಯೆ ಬದುಕು ಕಟ್ಟಿಕೊಳ್ಳಲು ಹೋರಾಡುತ್ತಲೇ ಇದ್ದಾಳಲ್ಲ ಹೆಣ್ಣು!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಪ್ಪುಹುಟ್ಟುಹಬ್ಬಕ್ಕೆ ಆಪ್ತರಿಂದ ಭರ್ಜರಿ ಗಿಫ್ಟ್…..!

    ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಸುದ್ದಿ

    ಈ ವರ್ಷವೂ ಗೂಗಲ್ ಸರ್ಚ್​ನಲ್ಲಿ ನಂ 1 ಸ್ಥಾನ ಉಳಿಸಿಕೊಂಡ ಸೆಲಿಬ್ರೆಟಿ…ಯಾರು ಗೊತ್ತೇ ?

    ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್​ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…

  • ಸುದ್ದಿ

    ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ ಸುಮಲತಾರವರು, ಸಿದ್ದರಾಮಯ್ಯನವರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ರು.!?

    ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್‍ ನ ಬ್ಲಾಕ್‍ ಮೇಲ್‍ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಸುದ್ದಿ

    ಪ್ರೇಯಸಿಯಾ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…