ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ ಪೇಶಿಯಲ್ ಗೆ ತಣ್ಣಿರು ಬಳಸಬೇಕಿದ್ದ ಪಾರ್ಲರ್ ಸಿಬ್ಬಂದಿ ಏಕಾಏಕಿ ಬೀಸಿ ನೀರು ಸುರಿದಿದ್ದಾರೆ. ಇದರಿಂದ ವೈದ್ಯೆ ಯಶೋಧಾ ಸಂಪೂರ್ಣ ಸುಟ್ಟು ಹೋಗಿದೆ.

ವೆರೋನಿಕಾ ಎಂಬಾಕೆಯ ಒಡೆತನದಲ್ಲಿ ಈ ಸಲೂನ್ ನಡೆಯುತ್ತಿದ್ದು, ಘಟನೆ ಬಳಿಕ ಸಿಬ್ಬಂದಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ವೈದ್ಯೆಯ ಮುಖ ಸಂಪೂರ್ಣ ಸುಟ್ಟು ಹೋದ ಪರಿಣಾಮ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾಧ್ಯವಾಗದೇ, ವೈದ್ಯೆಯನ್ನ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಈ ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಒಟ್ಟಿನಲ್ಲಿ ಸೌಂದರ್ಯ ಹೆಚ್ಚಿಸುವ ಪ್ರಯತ್ನದಲ್ಲಿ ವೈದ್ಯೆಯ ಮುಖ ಶಾಶ್ವತವಾಗಿ ಹಾಳಾಗಿದ್ದಲ್ಲದೇ ಜೀವ ಕೂಡ ಪಣಕ್ಕಿಡುವಂತಾಗಿದ್ದು ಮಾತ್ರ ದುರಂತವೇ ಸರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…