ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.
ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-
ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-
ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.
‘ರಾಜ್ ವಿಷ್ಣು’ ಚಿತ್ರದ ತಾರಾಗಣ :-
ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.
ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….