ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ರಾಮು ಫಿಲಂಸ್’ ನಿರ್ಮಿಸುತ್ತಿರುವ ಕಾಮಿಡಿ ಪ್ರಧಾನ ಚಿತ್ರ “ರಾಜ್ ವಿಷ್ಣು”.
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ ಕೇವಲ ಒಂದೇ ವಾರದಲ್ಲೇ ವೀಕ್ಷಕರ ಸಂಖ್ಯೆ 6 ಲಕ್ಷಕ್ಕೆ ಸಮೀಪಿಸುತ್ತಿದೆ.
ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತಿರುವ ಟ್ರೇಲರ್ :-
ಈ ಟ್ರೇಲರ್ ಬಿಡುಗಡೆಯಾದ ಕೇವಲ 24 ಗಂಟೆಗಳಲ್ಲೇ 2.7 ಲಕ್ಷ ವೀಕ್ಷಣೆಗೊಂಡು ಯೂಟ್ಯೂಬಲ್ಲಿ ದಾಖಲೆ ನಿರ್ಮಿಸಿದೆ. ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿರೋದರಿಂದ ಸಹಜವಾಗೇ ಚಿತ್ರತಂಡದ ಪ್ರತಿಯೊಬ್ಬರೂ ಸಂತಸಗೊಂಡಿದ್ದಾರೆ. ಮುಂದೆ ಟ್ರೇಲರ್ ನೋಡಿ:-
ತಮಿಳಿನ ‘ರಜನಿ ಮುರುಘನ್’ ಚಿತ್ರದ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ‘ರಾಜ್ ವಿಷ್ಣು’ ಸಿನಿಮಾವನ್ನು ತಯಾರು ಮಾಡಲಾಗಿದೆ. ಈ ಹಿಂದೆ `ಅಧ್ಯಕ್ಷ’ ಚಿತ್ರಕ್ಕೆ ಕಥೆ ಬರೆದಿದ್ದ ಪೊನ್ ರಾಜ್ ಅವರು ‘ರಜನಿ ಮುರುಘನ್’ ಚಿತ್ರಕ್ಕೆ ಕಥೆ, ಚಿತ್ರಕತೆ ಬರೆದು ನಿರ್ದೇಶಿಸಿದ್ದರು. ಆದರೆ ಕನ್ನಡದ
ನೇಟಿವಿಟಿಗೆ ತಕ್ಕಂತೆ ಹಲವಾರು ಬದಲಾವಣೆಗಳನ್ನು ಮಾಡಿಕೊಳ್ಳಲಗುತ್ತಿದ್ದು, ಈ ಹಿಂದೆ ಆಕಾಶ್ ಮತ್ತು ಅರಸು ಚಿತ್ರಗಳಿಗೆ ಕಥೆ ಒದಗಿಸಿದ್ದ ಖ್ಯಾತ ಬರಹಗಾರ ಜನಾರ್ಧನ ಮಹರ್ಷಿ ‘ರಾಜ್ ವಿಷ್ಣು’ ಚಿತ್ರಕ್ಕೆ ಚಿತ್ರಕತೆ ಬರೆದಿದ್ದಾರೆ.
‘ರಾಜ್ ವಿಷ್ಣು’ ಚಿತ್ರದ ತಾರಾಗಣ :-
ಶರಣ್ ಮತ್ತು ಚಿಕ್ಕಣ್ಣ ಪ್ರಮುಖವಾಗಿರುವ ಈ ಚಿತ್ರದಲ್ಲಿ ಶ್ರೀನಿವಾಸ ಮೂರ್ತಿ, ಸಾಧು ಕೋಕಿಲ, ರವಿಶಂಕರ್, ವೀಣಾ ಸುಂದರ್, ರಮೇಶ್ ಪಂಡಿತ್, ಮಿಮಿಕ್ರಿ ಗೋಪಿ ಮತ್ತು ಸ್ವಾತಿ ಸೇರಿದಂತೆ ಇನ್ನು ಅನೇಕರ ತಾರಾಗಣವಿದೆ.
ಯೂಟ್ಯೂಬಲ್ಲಿ ದಾಖಲೆ ನಿರ್ಮಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ತೆರೆಗೆ ಬರುವ ಸೂಚನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…