ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:

* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ
* ಉರಿ ನಿವಾರಕ
* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ
* ನರಮಂಡಲವನ್ನು ಸಧೃಡವಾಗಿಡುತ್ತದೆ.

ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.
ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.

ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.
ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.

ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…