ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:

* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ
* ಉರಿ ನಿವಾರಕ
* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ
* ನರಮಂಡಲವನ್ನು ಸಧೃಡವಾಗಿಡುತ್ತದೆ.

ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.
ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.

ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.
ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.

ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…