ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:

* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ
* ಉರಿ ನಿವಾರಕ
* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ
* ನರಮಂಡಲವನ್ನು ಸಧೃಡವಾಗಿಡುತ್ತದೆ.

ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.
ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.

ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.
ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.

ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…