ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:
* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ
* ಉರಿ ನಿವಾರಕ
* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ
* ನರಮಂಡಲವನ್ನು ಸಧೃಡವಾಗಿಡುತ್ತದೆ.
ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.
ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.
ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.
ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.
ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.
ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…