ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಆ ಪತ್ರದಲ್ಲಿ ಏನಿತ್ತು ಗೊತ್ತಾ? ಮುಂದೆ ಓದಿ…
ಗೌರವಾನ್ವಿತ ಉಪೇಂದ್ರರವರಿಗೆ,
ನಾನೊಬ್ಬ ಆಟೋ ಚಾಲಕ. ಬಸವನಗುಡಿಯಲ್ಲಿಯೇ ನಾನು ಆಟೋ ಚಾಲಕನಾಗಿರುವವನು. ನಿಮ್ಮ ಮನೆ ನನ್ನ ಆಟೋ ನಿಲ್ದಾಣಕ್ಕೆ ತೀರಾ ದೂರವಿಲ್ಲ. ನಾನೊಬ್ಬ ಕನ್ನಡದ ಅಭಿಮಾನಿ! ಶಂಕರ್ ನಾಗ್ ಹಾಗೂ ನಿಮ್ಮ ಚಿತ್ರವನ್ನು ಆಟೋದ ಹಿಂದೆ ಮುಂದೆ ಹಾಕಿಕೊಂಡಿದ್ದೇನೆ! ಕಾರಣ ನಿಮ್ಮ ಮೇಲಿನ ಅಭಿಮಾನದಿಂದಷ್ಟೇ.
ಒಟ್ಟಾರೆಯಾಗಿ ಹೇಳಬೇಕೆಂದರೆ ನಾನೊಬ್ಬ ನಿಮ್ಮ ಅಪ್ಪಟ ಅಭಿಮಾನಿ! ನಿಮ್ಮ ಸಿನಿಮಾಗಳನ್ನು ಅದೆಷ್ಟೋ ಸಲ ನೋಡಿದ್ದೇನೆ, ಒಂದೇ ಸಲಕ್ಕೆ ಅರ್ಥವಾಗದಿದ್ದರೂ ಎರಡು ಮೂರನೇ ಸಲ ನೋಡಿ ಅರ್ಥ ಮಾಡಿಕೊಂಡಿದ್ದೇನೆ! ಪೂರ್ತಿಯಾಗಿ ಅರ್ಥಾಗದೇ ಹೋದರೂ ಅದೇನೋ ಖುಷಿಯೊಂದು ನನ್ನಲ್ಲಿರುತ್ತದೆ.
ನೀವು ರಾಜಕೀಯವನ್ನು ‘ಪ್ರಜಾಕೀಯ’ ಮಾಡಲು ಹೊರಟಿದ್ದು ಬಹಳ ಸಂತೋಷವಾಗಿತ್ತು! ಒಬ್ಬ ನಾಯಕ ನಟನಾದ ನೀವು ಹೆಮ್ಮೆಯ ಪ್ರಧಾನಿ ಮೋದಿಯನ್ನು ಬೆಂಬಲಿಸಿದ್ದು ನೋಡಿ ನಮ್ಮ ಕರ್ನಾಟಕಕ್ಕೂ ಒಂದೊಳ್ಳೆಯ ನಾಯಕ ಸಿಗಬಹುದೆಂದು ಅಂದುಕೊಂಡಿದ್ದೆ! ನಿಮ್ಮ ಸುದ್ದಿಗೋಷ್ಠಿ ನೋಡಿದ ಮೇಲೆ ಕೇಳಲೇಬೇಕು ಎಂದೆನಿಸಿದ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ.
2. ನೀವೇ ಹೇಳಿದಂತೆ, ಒಬ್ಬ ಪ್ರಜಾಕಾರಣಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕಾರ್ಮಿಕನ ಹಾಗೆ ಕೆಲಸ ಮಾಡಬೇಕು ಎಂದಿರಿ. ಹಾಗಿದ್ದರೆ, ನರೇಂದ್ರ ಮೋದಿಯವರು ಬೆಳಗ್ಗಿನ ಜಾವ 4ರಿಂದ ರಾತ್ರಿ 12ರವರೆಗೂ ಬರೋಬ್ಬರಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಮ್ಮ ದೃಷ್ಟಿಯಲ್ಲಿ ಅವರು ಈ ಯಾವ ‘ಪ್ರಜಾಕಾರಣ’ದ ವರ್ಗಕ್ಕೆ ಸೇರುತ್ತಾರೆ?
3. ನೀವೇ ಹೇಳಿದಂತೆ, ಚುನಾವಣೆಯ ಪ್ರಚಾರಕ್ಕೆ ಫ್ಲೆಕ್ಸು, ಬ್ಯಾನರ್ಗಳನ್ನು ಹಾಕಿದರೆ ಸ್ವಚ್ಛ ಭಾರತದ ಕನಸು ಕನಸಾಗುಳಿದುಬಿಡುತ್ತೆ ಎಂದಿರಿ. ಆದರೆ ನಿಮ್ಮ ಯಾವುದೇ ಸಿನಿಮಾಗಳ ಬಿಡುಗಡೆ ನೋಡಿದರೂ ಪಟಾಕಿ, ಬ್ಯಾನರ್, ಪ್ಲೆಕ್ಸುಗಳಿಲ್ಲದೇ ನಡೆಯುವುದೇ ಇಲ್ಲ! ಆಗೆಲ್ಲಿತ್ತು, ಈ ಸ್ವಚ್ಛ ಭಾರತದ ಪರಿಕಲ್ಪನೆ?
ಹೂವಿನ ಹಾರ ಹಾಕುವುದು ತಪ್ಪು ಎನ್ನುವುದು ನಿಮ್ಮ ಸಿದ್ಧಾಂತವಾದರೆ, ನಿಮ್ಮ ಸಿನಿಮಾ ಬಿಡುಗಡೆಗಳಲ್ಲೇ ನಿಮ್ಮ ಅದೆಷ್ಟೋ ಉದ್ದದ ಪ್ರತಿಕೃತಿಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿದ್ದನ್ನು ಸ್ವತಃ ನೋಡಿದ್ದೇನೆ. ಸ್ವತಃ ನಿಮಗೂ ಅಭಿಮಾನಿಗಳು ಹಾರ ಹಾಕಿದ್ದಾರೆ! ಆಗ್ಯಾಕೆ, ನೀವು ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಲಿಲ್ಲ? ಅದೇ ದುಡ್ಡನ್ನು ಇನ್ನೊಬ್ಬರಿಗೆ ದಾನ ಮಾಡಿ ಎಂದು ಘೋಷಿಸಲಿಲ್ಲ?
4. ಒಬ್ಬ ‘ಖಾಕಿ’ ಹಾಕಿಬಿಟ್ಟರೆ ಆತ ಕಾರ್ಮಿಕ ಹೇಗಾಗುತ್ತಾನೆ ಸ್ವಾಮಿ? ನೀವು ಖಾಕಿಗೆ ಬೆಲೆ ಕೊಡುವವರಾಗಿದ್ದಾರೆ ನಿಮ್ಮ ರೆಸಾರ್ಟಿನಲ್ಲಿ ನೀವು ಪ್ರೆಸ್ ಮೀಟ್ ಮಾಡುತ್ತಿರಲಿಲ್ಲ ಅಲ್ಲವೇ? ಕಾರ್ಮಿಕರಿರುವ ಸಾರ್ವಜನಿಕ ಸ್ಥಳಗಳಲ್ಲಿಯೇ ನಡೆಸುತ್ತಿದ್ದೀರಿ ಅಲ್ಲವೇ?
5. ನೀವೇ ಕೆಲವು ವರ್ಷಗಳ ಹಿಂದೆ ಹೇಳಿದಂತೆ, ನೀವು ರಾಜಕೀಯಕ್ಕೆ ಇಳಿಯುವ ಮುನ್ನ ಮೊದಲು ಕುಟುಂಬವನ್ನು ಆರ್ಥಿಕವಾಗಿ ರಕ್ಷಿಸಿರಬೇಕು, ನ್ಯಾಯ ಒದಗಿಸಿರಬೇಕು ಎಂದಿದ್ದಿರಿ. ಹಲವು ವರ್ಷಗಳ ಹಿಂದೆಯೇ ನೀವು ಮೂರು ಕೋಟಿಯ ಮನೆ ಕಟ್ಟಿಸಿ, ಬೇಕಾದಷ್ಟು ಆಸ್ತಿ ಮಾಡಿ ನಿಮ್ಮ ಕುಟುಂಬವನ್ನು ತುಂಬಾ ಚೆನ್ನಾಗಿಯೇ ನೋಡಿಕೊಂಡಿರಿ ಮತ್ತು ನ್ಯಾಯ ಒದಗಿಸಿದಿರಿ. ಹಾಗಾದರೆ, ಬರುವ ಪ್ರತಿಯೊಬ್ಬ ಕಾರ್ಯಕರ್ತನೂ (ಅಥವಾ ಪ್ರಜಾಕೀಯದ ಪ್ರಾಯಕರ್ತನೋ?) ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸಿ ಪ್ರಾಯ ಮುಗಿದ ನಂತರವೇ ನಿಮ್ಮ ಪಕ್ಷ ಸೇರಿದ್ದಲ್ಲಿ ನಿಮಗೆ ಅಭ್ಯಂತರವಿದೆಯೇ?
6. ಇಷ್ಟು ದಿನವೂ ಸುಮ್ಮನಿದ್ದ ನೀವು ಅಮಿತ್ ಷಾ ಬರುವ ದಿನವೇ ನಿಮ್ಮ ಪ್ರಜಾಕೀಯದ ಪಾದಾರ್ಪಣೆಯನ್ನು ಘೋಷಿಸಿದಿರಿ. ಪರಿಣಾಮ ಅತ್ಯಂತ ಅಗತ್ಯವಾಗಿದ್ದ ಅವರ ಪ್ರವಾಸ ಕಾರ್ಯಕ್ರಮವೊಂದು ಅಂದುಕೊಂಡಷ್ಟು ಯಶಸ್ವಿಯಾಗಲೇ ಇಲ್ಲ. ಈ ಲಾಜಿಕ್ಕುಗಳ ಹಿಂದೆ ನೀವೇ ಇದ್ದದ್ದೋ ಅಥವಾ ಕಾಣದ ಕೈಗಳ ‘ಕೈ’ ಅಡಗಿದೆಯೋ?
7. ಅಚ್ಚರಿಯೆನ್ನಿಸಿದ್ದು ನಿಮ್ಮ ಹಣವಿಲ್ಲದ ಪ್ರಜಾಕೀಯ! ಒಂದು ರುಪಾಯಿ ಹಾಕೊಲ್ಲ, ತೆಗೆಯೊಲ್ಲ ಅಂದಿರಿ. ಆದರೆ, ಚುನಾವಣೆಗೆ ಅದರದೇ ಆದ ಖರ್ಚುಗಳಿದ್ದೇ ಇರುತ್ತದೆ. ಪ್ರಚಾರಕ್ಕೆ, ಪತ್ರಕ್ಕೆ ಇತ್ಯಾದಿ. ಪ್ರಚಾರಕ್ಕೆ ಹಣವೇ ನಾ ನೀಡೋದಿಲ್ಲ ಎಂದಿರಿ. ಮುಂದೆ ಇದಕ್ಕೆ ನೀಡುವ ಹಣ ನಿಮ್ಮ ಕುಟುಂಬದ ಸದೃಢತೆಯದೋ ಅಥವಾ ಯಾರಾದರಿಂದಲೂ ತೆಗೆದುಕೊಳ್ಳುವಿರೋ?
8. ಈ ಹಿಂದೆಯೂ ಕೂಡ ತೆಲುಗಿನ ನಟ ಚಿರಂಜೀವಿ ‘ಪ್ರಜಾರಾಜ್ಯಂ’ ಎಂಬ ಪಕ್ಷ ಸ್ಥಾಪಿಸಿ ನಿಮ್ಮಂತೆಯೇ ತತ್ತ್ವ ಸಿದ್ಧಾಂತಗಳನ್ನು ಮಂಡಿಸಿ, ಎಷ್ಟೋ ಜನರ ತಲೆಕೆಡಿಸಿ, ನಂತರ ತನಗೆ ಸ್ಥಾನ ಸಿಕ್ಕ ನಂತರ ಪರ ಪಕ್ಷಕ್ಕೆ ಹಾರಿ, ಕಾರ್ಯಕರ್ತರನ್ನೆಲ್ಲ ನಡು ನೀರಿನಲ್ಲಿ ಕೈ ಬಿಟ್ಟರು. ನೀವು ಚಿರಂಜೀವಿ, ಕೇಜ್ರಿವಾಲ್ ತರಹ ಮುಂದೆ ಹೀಗೆ ವರ್ತಿಸುವುದಿಲ್ಲವೆಂಬ ಯಾವ ಗ್ಯಾರಂಟಿ?
9. ಪ್ರಜಾಕೀಯ ಕೇವಲ ಪದಗಳ ಆಟವಲ್ಲವಷ್ಟೇ? ರಾಜಕೀಯವನ್ನು ಪ್ರಜಾಕೀಯ ಅಂದ ತಕ್ಷಣ ಚುನಾವಣಾ ವ್ಯವಸ್ಥೆ ಬದಲಾಗದು. ಲೋಕಸಭಾ ಚುನಾವಣೆಯಿಂದ ಗ್ರಾಮಪಂಚಾಯತ್ ವರೆಗೆ ವ್ಯವಸ್ಥೆ ಹಾಗೆಯೇ ಮುಂದುವರಿಯುತ್ತದೆ. ಇದನ್ನು ನೀವು ಹೇಗೆ ಬದಲಾಯಿಸುವಿರಿ?
ನಾನೊಬ್ಬ ಸಾಮಾನ್ಯ ಕಾರ್ಮಿಕ! ನನಗೆ ಈ ಪ್ರಜಾಕೀಯವೆನ್ನುವುದೆಲ್ಲ ತೀರಾ ತಿಳಿಯದ ವಿಷಯಗಳಾದರೂ ಒಂದಷ್ಟು ಸಾಮಾನ್ಯ ಜ್ಞಾನವಂತೂ ಇರುವುದರಿಂದ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಇದಕ್ಕೆ ನಿಮ್ಮಿಂದ ಉತ್ತರವನ್ನೂ ನಿರೀಕ್ಷಿಸುತ್ತಿದ್ದೇನೆ.
ನಿಮ್ಮ ಉತ್ತರಗಳು ಸಮರ್ಪಕವಾಗಿದ್ದರೆ ನಾನು ನನ್ನೆಲ್ಲ ಕೆಲಸ ಕಾರ್ಯಗಳನ್ನೂ ಬಿಟ್ಟು ನಿಮ್ಮ ‘ಸ್ವಚ್ಛ’ ಪ್ರಜಾಕೀಯದ ಪ್ರಚಾರಕ್ಕೆ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತೇನೆ. ನಿಮ್ಮ ಉತ್ತರಗಳು ನಿಮ್ಮ ಸಿನಿಮಾ ನೋಡಿ ಸಿಕ್ಕಿದ ಖುಷಿಯ ಅರ್ಧವಾದರೂ ಇರಲಿ ಎಂಬ ನಂಬಿಕೆ ಅಷ್ಟೇ. ನಿಮಗೆ ಮೇಲ್ ಕೂಡ ಮಾಡಿದ್ದೇನೆ. ಉತ್ತರ ಮೇಲ್ನಲ್ಲಿ ಕೊಟ್ಟರೂ ಸರಿಯೇ.
ಕೃಪೆ: ಶಂಕರ ಕಾಳೇಗೌಡ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
![]()
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್ರವರು…
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…