ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಆ ಪತ್ರದಲ್ಲಿ ಏನಿತ್ತು ಗೊತ್ತಾ? ಮುಂದೆ ಓದಿ…
ಗೌರವಾನ್ವಿತ ಉಪೇಂದ್ರರವರಿಗೆ,
ನಾನೊಬ್ಬ ಆಟೋ ಚಾಲಕ. ಬಸವನಗುಡಿಯಲ್ಲಿಯೇ ನಾನು ಆಟೋ ಚಾಲಕನಾಗಿರುವವನು. ನಿಮ್ಮ ಮನೆ ನನ್ನ ಆಟೋ ನಿಲ್ದಾಣಕ್ಕೆ ತೀರಾ ದೂರವಿಲ್ಲ. ನಾನೊಬ್ಬ ಕನ್ನಡದ ಅಭಿಮಾನಿ! ಶಂಕರ್ ನಾಗ್ ಹಾಗೂ ನಿಮ್ಮ ಚಿತ್ರವನ್ನು ಆಟೋದ ಹಿಂದೆ ಮುಂದೆ ಹಾಕಿಕೊಂಡಿದ್ದೇನೆ! ಕಾರಣ ನಿಮ್ಮ ಮೇಲಿನ ಅಭಿಮಾನದಿಂದಷ್ಟೇ.
ಒಟ್ಟಾರೆಯಾಗಿ ಹೇಳಬೇಕೆಂದರೆ ನಾನೊಬ್ಬ ನಿಮ್ಮ ಅಪ್ಪಟ ಅಭಿಮಾನಿ! ನಿಮ್ಮ ಸಿನಿಮಾಗಳನ್ನು ಅದೆಷ್ಟೋ ಸಲ ನೋಡಿದ್ದೇನೆ, ಒಂದೇ ಸಲಕ್ಕೆ ಅರ್ಥವಾಗದಿದ್ದರೂ ಎರಡು ಮೂರನೇ ಸಲ ನೋಡಿ ಅರ್ಥ ಮಾಡಿಕೊಂಡಿದ್ದೇನೆ! ಪೂರ್ತಿಯಾಗಿ ಅರ್ಥಾಗದೇ ಹೋದರೂ ಅದೇನೋ ಖುಷಿಯೊಂದು ನನ್ನಲ್ಲಿರುತ್ತದೆ.
ನೀವು ರಾಜಕೀಯವನ್ನು ‘ಪ್ರಜಾಕೀಯ’ ಮಾಡಲು ಹೊರಟಿದ್ದು ಬಹಳ ಸಂತೋಷವಾಗಿತ್ತು! ಒಬ್ಬ ನಾಯಕ ನಟನಾದ ನೀವು ಹೆಮ್ಮೆಯ ಪ್ರಧಾನಿ ಮೋದಿಯನ್ನು ಬೆಂಬಲಿಸಿದ್ದು ನೋಡಿ ನಮ್ಮ ಕರ್ನಾಟಕಕ್ಕೂ ಒಂದೊಳ್ಳೆಯ ನಾಯಕ ಸಿಗಬಹುದೆಂದು ಅಂದುಕೊಂಡಿದ್ದೆ! ನಿಮ್ಮ ಸುದ್ದಿಗೋಷ್ಠಿ ನೋಡಿದ ಮೇಲೆ ಕೇಳಲೇಬೇಕು ಎಂದೆನಿಸಿದ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ.
2. ನೀವೇ ಹೇಳಿದಂತೆ, ಒಬ್ಬ ಪ್ರಜಾಕಾರಣಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕಾರ್ಮಿಕನ ಹಾಗೆ ಕೆಲಸ ಮಾಡಬೇಕು ಎಂದಿರಿ. ಹಾಗಿದ್ದರೆ, ನರೇಂದ್ರ ಮೋದಿಯವರು ಬೆಳಗ್ಗಿನ ಜಾವ 4ರಿಂದ ರಾತ್ರಿ 12ರವರೆಗೂ ಬರೋಬ್ಬರಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಮ್ಮ ದೃಷ್ಟಿಯಲ್ಲಿ ಅವರು ಈ ಯಾವ ‘ಪ್ರಜಾಕಾರಣ’ದ ವರ್ಗಕ್ಕೆ ಸೇರುತ್ತಾರೆ?
3. ನೀವೇ ಹೇಳಿದಂತೆ, ಚುನಾವಣೆಯ ಪ್ರಚಾರಕ್ಕೆ ಫ್ಲೆಕ್ಸು, ಬ್ಯಾನರ್ಗಳನ್ನು ಹಾಕಿದರೆ ಸ್ವಚ್ಛ ಭಾರತದ ಕನಸು ಕನಸಾಗುಳಿದುಬಿಡುತ್ತೆ ಎಂದಿರಿ. ಆದರೆ ನಿಮ್ಮ ಯಾವುದೇ ಸಿನಿಮಾಗಳ ಬಿಡುಗಡೆ ನೋಡಿದರೂ ಪಟಾಕಿ, ಬ್ಯಾನರ್, ಪ್ಲೆಕ್ಸುಗಳಿಲ್ಲದೇ ನಡೆಯುವುದೇ ಇಲ್ಲ! ಆಗೆಲ್ಲಿತ್ತು, ಈ ಸ್ವಚ್ಛ ಭಾರತದ ಪರಿಕಲ್ಪನೆ?
ಹೂವಿನ ಹಾರ ಹಾಕುವುದು ತಪ್ಪು ಎನ್ನುವುದು ನಿಮ್ಮ ಸಿದ್ಧಾಂತವಾದರೆ, ನಿಮ್ಮ ಸಿನಿಮಾ ಬಿಡುಗಡೆಗಳಲ್ಲೇ ನಿಮ್ಮ ಅದೆಷ್ಟೋ ಉದ್ದದ ಪ್ರತಿಕೃತಿಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿದ್ದನ್ನು ಸ್ವತಃ ನೋಡಿದ್ದೇನೆ. ಸ್ವತಃ ನಿಮಗೂ ಅಭಿಮಾನಿಗಳು ಹಾರ ಹಾಕಿದ್ದಾರೆ! ಆಗ್ಯಾಕೆ, ನೀವು ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಲಿಲ್ಲ? ಅದೇ ದುಡ್ಡನ್ನು ಇನ್ನೊಬ್ಬರಿಗೆ ದಾನ ಮಾಡಿ ಎಂದು ಘೋಷಿಸಲಿಲ್ಲ?
4. ಒಬ್ಬ ‘ಖಾಕಿ’ ಹಾಕಿಬಿಟ್ಟರೆ ಆತ ಕಾರ್ಮಿಕ ಹೇಗಾಗುತ್ತಾನೆ ಸ್ವಾಮಿ? ನೀವು ಖಾಕಿಗೆ ಬೆಲೆ ಕೊಡುವವರಾಗಿದ್ದಾರೆ ನಿಮ್ಮ ರೆಸಾರ್ಟಿನಲ್ಲಿ ನೀವು ಪ್ರೆಸ್ ಮೀಟ್ ಮಾಡುತ್ತಿರಲಿಲ್ಲ ಅಲ್ಲವೇ? ಕಾರ್ಮಿಕರಿರುವ ಸಾರ್ವಜನಿಕ ಸ್ಥಳಗಳಲ್ಲಿಯೇ ನಡೆಸುತ್ತಿದ್ದೀರಿ ಅಲ್ಲವೇ?
5. ನೀವೇ ಕೆಲವು ವರ್ಷಗಳ ಹಿಂದೆ ಹೇಳಿದಂತೆ, ನೀವು ರಾಜಕೀಯಕ್ಕೆ ಇಳಿಯುವ ಮುನ್ನ ಮೊದಲು ಕುಟುಂಬವನ್ನು ಆರ್ಥಿಕವಾಗಿ ರಕ್ಷಿಸಿರಬೇಕು, ನ್ಯಾಯ ಒದಗಿಸಿರಬೇಕು ಎಂದಿದ್ದಿರಿ. ಹಲವು ವರ್ಷಗಳ ಹಿಂದೆಯೇ ನೀವು ಮೂರು ಕೋಟಿಯ ಮನೆ ಕಟ್ಟಿಸಿ, ಬೇಕಾದಷ್ಟು ಆಸ್ತಿ ಮಾಡಿ ನಿಮ್ಮ ಕುಟುಂಬವನ್ನು ತುಂಬಾ ಚೆನ್ನಾಗಿಯೇ ನೋಡಿಕೊಂಡಿರಿ ಮತ್ತು ನ್ಯಾಯ ಒದಗಿಸಿದಿರಿ. ಹಾಗಾದರೆ, ಬರುವ ಪ್ರತಿಯೊಬ್ಬ ಕಾರ್ಯಕರ್ತನೂ (ಅಥವಾ ಪ್ರಜಾಕೀಯದ ಪ್ರಾಯಕರ್ತನೋ?) ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸಿ ಪ್ರಾಯ ಮುಗಿದ ನಂತರವೇ ನಿಮ್ಮ ಪಕ್ಷ ಸೇರಿದ್ದಲ್ಲಿ ನಿಮಗೆ ಅಭ್ಯಂತರವಿದೆಯೇ?
6. ಇಷ್ಟು ದಿನವೂ ಸುಮ್ಮನಿದ್ದ ನೀವು ಅಮಿತ್ ಷಾ ಬರುವ ದಿನವೇ ನಿಮ್ಮ ಪ್ರಜಾಕೀಯದ ಪಾದಾರ್ಪಣೆಯನ್ನು ಘೋಷಿಸಿದಿರಿ. ಪರಿಣಾಮ ಅತ್ಯಂತ ಅಗತ್ಯವಾಗಿದ್ದ ಅವರ ಪ್ರವಾಸ ಕಾರ್ಯಕ್ರಮವೊಂದು ಅಂದುಕೊಂಡಷ್ಟು ಯಶಸ್ವಿಯಾಗಲೇ ಇಲ್ಲ. ಈ ಲಾಜಿಕ್ಕುಗಳ ಹಿಂದೆ ನೀವೇ ಇದ್ದದ್ದೋ ಅಥವಾ ಕಾಣದ ಕೈಗಳ ‘ಕೈ’ ಅಡಗಿದೆಯೋ?
7. ಅಚ್ಚರಿಯೆನ್ನಿಸಿದ್ದು ನಿಮ್ಮ ಹಣವಿಲ್ಲದ ಪ್ರಜಾಕೀಯ! ಒಂದು ರುಪಾಯಿ ಹಾಕೊಲ್ಲ, ತೆಗೆಯೊಲ್ಲ ಅಂದಿರಿ. ಆದರೆ, ಚುನಾವಣೆಗೆ ಅದರದೇ ಆದ ಖರ್ಚುಗಳಿದ್ದೇ ಇರುತ್ತದೆ. ಪ್ರಚಾರಕ್ಕೆ, ಪತ್ರಕ್ಕೆ ಇತ್ಯಾದಿ. ಪ್ರಚಾರಕ್ಕೆ ಹಣವೇ ನಾ ನೀಡೋದಿಲ್ಲ ಎಂದಿರಿ. ಮುಂದೆ ಇದಕ್ಕೆ ನೀಡುವ ಹಣ ನಿಮ್ಮ ಕುಟುಂಬದ ಸದೃಢತೆಯದೋ ಅಥವಾ ಯಾರಾದರಿಂದಲೂ ತೆಗೆದುಕೊಳ್ಳುವಿರೋ?
8. ಈ ಹಿಂದೆಯೂ ಕೂಡ ತೆಲುಗಿನ ನಟ ಚಿರಂಜೀವಿ ‘ಪ್ರಜಾರಾಜ್ಯಂ’ ಎಂಬ ಪಕ್ಷ ಸ್ಥಾಪಿಸಿ ನಿಮ್ಮಂತೆಯೇ ತತ್ತ್ವ ಸಿದ್ಧಾಂತಗಳನ್ನು ಮಂಡಿಸಿ, ಎಷ್ಟೋ ಜನರ ತಲೆಕೆಡಿಸಿ, ನಂತರ ತನಗೆ ಸ್ಥಾನ ಸಿಕ್ಕ ನಂತರ ಪರ ಪಕ್ಷಕ್ಕೆ ಹಾರಿ, ಕಾರ್ಯಕರ್ತರನ್ನೆಲ್ಲ ನಡು ನೀರಿನಲ್ಲಿ ಕೈ ಬಿಟ್ಟರು. ನೀವು ಚಿರಂಜೀವಿ, ಕೇಜ್ರಿವಾಲ್ ತರಹ ಮುಂದೆ ಹೀಗೆ ವರ್ತಿಸುವುದಿಲ್ಲವೆಂಬ ಯಾವ ಗ್ಯಾರಂಟಿ?
9. ಪ್ರಜಾಕೀಯ ಕೇವಲ ಪದಗಳ ಆಟವಲ್ಲವಷ್ಟೇ? ರಾಜಕೀಯವನ್ನು ಪ್ರಜಾಕೀಯ ಅಂದ ತಕ್ಷಣ ಚುನಾವಣಾ ವ್ಯವಸ್ಥೆ ಬದಲಾಗದು. ಲೋಕಸಭಾ ಚುನಾವಣೆಯಿಂದ ಗ್ರಾಮಪಂಚಾಯತ್ ವರೆಗೆ ವ್ಯವಸ್ಥೆ ಹಾಗೆಯೇ ಮುಂದುವರಿಯುತ್ತದೆ. ಇದನ್ನು ನೀವು ಹೇಗೆ ಬದಲಾಯಿಸುವಿರಿ?
ನಾನೊಬ್ಬ ಸಾಮಾನ್ಯ ಕಾರ್ಮಿಕ! ನನಗೆ ಈ ಪ್ರಜಾಕೀಯವೆನ್ನುವುದೆಲ್ಲ ತೀರಾ ತಿಳಿಯದ ವಿಷಯಗಳಾದರೂ ಒಂದಷ್ಟು ಸಾಮಾನ್ಯ ಜ್ಞಾನವಂತೂ ಇರುವುದರಿಂದ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಇದಕ್ಕೆ ನಿಮ್ಮಿಂದ ಉತ್ತರವನ್ನೂ ನಿರೀಕ್ಷಿಸುತ್ತಿದ್ದೇನೆ.
ನಿಮ್ಮ ಉತ್ತರಗಳು ಸಮರ್ಪಕವಾಗಿದ್ದರೆ ನಾನು ನನ್ನೆಲ್ಲ ಕೆಲಸ ಕಾರ್ಯಗಳನ್ನೂ ಬಿಟ್ಟು ನಿಮ್ಮ ‘ಸ್ವಚ್ಛ’ ಪ್ರಜಾಕೀಯದ ಪ್ರಚಾರಕ್ಕೆ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತೇನೆ. ನಿಮ್ಮ ಉತ್ತರಗಳು ನಿಮ್ಮ ಸಿನಿಮಾ ನೋಡಿ ಸಿಕ್ಕಿದ ಖುಷಿಯ ಅರ್ಧವಾದರೂ ಇರಲಿ ಎಂಬ ನಂಬಿಕೆ ಅಷ್ಟೇ. ನಿಮಗೆ ಮೇಲ್ ಕೂಡ ಮಾಡಿದ್ದೇನೆ. ಉತ್ತರ ಮೇಲ್ನಲ್ಲಿ ಕೊಟ್ಟರೂ ಸರಿಯೇ.
ಕೃಪೆ: ಶಂಕರ ಕಾಳೇಗೌಡ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…