ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಆ ಪತ್ರದಲ್ಲಿ ಏನಿತ್ತು ಗೊತ್ತಾ? ಮುಂದೆ ಓದಿ…
ಗೌರವಾನ್ವಿತ ಉಪೇಂದ್ರರವರಿಗೆ,
ನಾನೊಬ್ಬ ಆಟೋ ಚಾಲಕ. ಬಸವನಗುಡಿಯಲ್ಲಿಯೇ ನಾನು ಆಟೋ ಚಾಲಕನಾಗಿರುವವನು. ನಿಮ್ಮ ಮನೆ ನನ್ನ ಆಟೋ ನಿಲ್ದಾಣಕ್ಕೆ ತೀರಾ ದೂರವಿಲ್ಲ. ನಾನೊಬ್ಬ ಕನ್ನಡದ ಅಭಿಮಾನಿ! ಶಂಕರ್ ನಾಗ್ ಹಾಗೂ ನಿಮ್ಮ ಚಿತ್ರವನ್ನು ಆಟೋದ ಹಿಂದೆ ಮುಂದೆ ಹಾಕಿಕೊಂಡಿದ್ದೇನೆ! ಕಾರಣ ನಿಮ್ಮ ಮೇಲಿನ ಅಭಿಮಾನದಿಂದಷ್ಟೇ.
ಒಟ್ಟಾರೆಯಾಗಿ ಹೇಳಬೇಕೆಂದರೆ ನಾನೊಬ್ಬ ನಿಮ್ಮ ಅಪ್ಪಟ ಅಭಿಮಾನಿ! ನಿಮ್ಮ ಸಿನಿಮಾಗಳನ್ನು ಅದೆಷ್ಟೋ ಸಲ ನೋಡಿದ್ದೇನೆ, ಒಂದೇ ಸಲಕ್ಕೆ ಅರ್ಥವಾಗದಿದ್ದರೂ ಎರಡು ಮೂರನೇ ಸಲ ನೋಡಿ ಅರ್ಥ ಮಾಡಿಕೊಂಡಿದ್ದೇನೆ! ಪೂರ್ತಿಯಾಗಿ ಅರ್ಥಾಗದೇ ಹೋದರೂ ಅದೇನೋ ಖುಷಿಯೊಂದು ನನ್ನಲ್ಲಿರುತ್ತದೆ.
ನೀವು ರಾಜಕೀಯವನ್ನು ‘ಪ್ರಜಾಕೀಯ’ ಮಾಡಲು ಹೊರಟಿದ್ದು ಬಹಳ ಸಂತೋಷವಾಗಿತ್ತು! ಒಬ್ಬ ನಾಯಕ ನಟನಾದ ನೀವು ಹೆಮ್ಮೆಯ ಪ್ರಧಾನಿ ಮೋದಿಯನ್ನು ಬೆಂಬಲಿಸಿದ್ದು ನೋಡಿ ನಮ್ಮ ಕರ್ನಾಟಕಕ್ಕೂ ಒಂದೊಳ್ಳೆಯ ನಾಯಕ ಸಿಗಬಹುದೆಂದು ಅಂದುಕೊಂಡಿದ್ದೆ! ನಿಮ್ಮ ಸುದ್ದಿಗೋಷ್ಠಿ ನೋಡಿದ ಮೇಲೆ ಕೇಳಲೇಬೇಕು ಎಂದೆನಿಸಿದ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ.
2. ನೀವೇ ಹೇಳಿದಂತೆ, ಒಬ್ಬ ಪ್ರಜಾಕಾರಣಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕಾರ್ಮಿಕನ ಹಾಗೆ ಕೆಲಸ ಮಾಡಬೇಕು ಎಂದಿರಿ. ಹಾಗಿದ್ದರೆ, ನರೇಂದ್ರ ಮೋದಿಯವರು ಬೆಳಗ್ಗಿನ ಜಾವ 4ರಿಂದ ರಾತ್ರಿ 12ರವರೆಗೂ ಬರೋಬ್ಬರಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಮ್ಮ ದೃಷ್ಟಿಯಲ್ಲಿ ಅವರು ಈ ಯಾವ ‘ಪ್ರಜಾಕಾರಣ’ದ ವರ್ಗಕ್ಕೆ ಸೇರುತ್ತಾರೆ?
3. ನೀವೇ ಹೇಳಿದಂತೆ, ಚುನಾವಣೆಯ ಪ್ರಚಾರಕ್ಕೆ ಫ್ಲೆಕ್ಸು, ಬ್ಯಾನರ್ಗಳನ್ನು ಹಾಕಿದರೆ ಸ್ವಚ್ಛ ಭಾರತದ ಕನಸು ಕನಸಾಗುಳಿದುಬಿಡುತ್ತೆ ಎಂದಿರಿ. ಆದರೆ ನಿಮ್ಮ ಯಾವುದೇ ಸಿನಿಮಾಗಳ ಬಿಡುಗಡೆ ನೋಡಿದರೂ ಪಟಾಕಿ, ಬ್ಯಾನರ್, ಪ್ಲೆಕ್ಸುಗಳಿಲ್ಲದೇ ನಡೆಯುವುದೇ ಇಲ್ಲ! ಆಗೆಲ್ಲಿತ್ತು, ಈ ಸ್ವಚ್ಛ ಭಾರತದ ಪರಿಕಲ್ಪನೆ?
ಹೂವಿನ ಹಾರ ಹಾಕುವುದು ತಪ್ಪು ಎನ್ನುವುದು ನಿಮ್ಮ ಸಿದ್ಧಾಂತವಾದರೆ, ನಿಮ್ಮ ಸಿನಿಮಾ ಬಿಡುಗಡೆಗಳಲ್ಲೇ ನಿಮ್ಮ ಅದೆಷ್ಟೋ ಉದ್ದದ ಪ್ರತಿಕೃತಿಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿದ್ದನ್ನು ಸ್ವತಃ ನೋಡಿದ್ದೇನೆ. ಸ್ವತಃ ನಿಮಗೂ ಅಭಿಮಾನಿಗಳು ಹಾರ ಹಾಕಿದ್ದಾರೆ! ಆಗ್ಯಾಕೆ, ನೀವು ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಲಿಲ್ಲ? ಅದೇ ದುಡ್ಡನ್ನು ಇನ್ನೊಬ್ಬರಿಗೆ ದಾನ ಮಾಡಿ ಎಂದು ಘೋಷಿಸಲಿಲ್ಲ?
4. ಒಬ್ಬ ‘ಖಾಕಿ’ ಹಾಕಿಬಿಟ್ಟರೆ ಆತ ಕಾರ್ಮಿಕ ಹೇಗಾಗುತ್ತಾನೆ ಸ್ವಾಮಿ? ನೀವು ಖಾಕಿಗೆ ಬೆಲೆ ಕೊಡುವವರಾಗಿದ್ದಾರೆ ನಿಮ್ಮ ರೆಸಾರ್ಟಿನಲ್ಲಿ ನೀವು ಪ್ರೆಸ್ ಮೀಟ್ ಮಾಡುತ್ತಿರಲಿಲ್ಲ ಅಲ್ಲವೇ? ಕಾರ್ಮಿಕರಿರುವ ಸಾರ್ವಜನಿಕ ಸ್ಥಳಗಳಲ್ಲಿಯೇ ನಡೆಸುತ್ತಿದ್ದೀರಿ ಅಲ್ಲವೇ?
5. ನೀವೇ ಕೆಲವು ವರ್ಷಗಳ ಹಿಂದೆ ಹೇಳಿದಂತೆ, ನೀವು ರಾಜಕೀಯಕ್ಕೆ ಇಳಿಯುವ ಮುನ್ನ ಮೊದಲು ಕುಟುಂಬವನ್ನು ಆರ್ಥಿಕವಾಗಿ ರಕ್ಷಿಸಿರಬೇಕು, ನ್ಯಾಯ ಒದಗಿಸಿರಬೇಕು ಎಂದಿದ್ದಿರಿ. ಹಲವು ವರ್ಷಗಳ ಹಿಂದೆಯೇ ನೀವು ಮೂರು ಕೋಟಿಯ ಮನೆ ಕಟ್ಟಿಸಿ, ಬೇಕಾದಷ್ಟು ಆಸ್ತಿ ಮಾಡಿ ನಿಮ್ಮ ಕುಟುಂಬವನ್ನು ತುಂಬಾ ಚೆನ್ನಾಗಿಯೇ ನೋಡಿಕೊಂಡಿರಿ ಮತ್ತು ನ್ಯಾಯ ಒದಗಿಸಿದಿರಿ. ಹಾಗಾದರೆ, ಬರುವ ಪ್ರತಿಯೊಬ್ಬ ಕಾರ್ಯಕರ್ತನೂ (ಅಥವಾ ಪ್ರಜಾಕೀಯದ ಪ್ರಾಯಕರ್ತನೋ?) ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸಿ ಪ್ರಾಯ ಮುಗಿದ ನಂತರವೇ ನಿಮ್ಮ ಪಕ್ಷ ಸೇರಿದ್ದಲ್ಲಿ ನಿಮಗೆ ಅಭ್ಯಂತರವಿದೆಯೇ?
6. ಇಷ್ಟು ದಿನವೂ ಸುಮ್ಮನಿದ್ದ ನೀವು ಅಮಿತ್ ಷಾ ಬರುವ ದಿನವೇ ನಿಮ್ಮ ಪ್ರಜಾಕೀಯದ ಪಾದಾರ್ಪಣೆಯನ್ನು ಘೋಷಿಸಿದಿರಿ. ಪರಿಣಾಮ ಅತ್ಯಂತ ಅಗತ್ಯವಾಗಿದ್ದ ಅವರ ಪ್ರವಾಸ ಕಾರ್ಯಕ್ರಮವೊಂದು ಅಂದುಕೊಂಡಷ್ಟು ಯಶಸ್ವಿಯಾಗಲೇ ಇಲ್ಲ. ಈ ಲಾಜಿಕ್ಕುಗಳ ಹಿಂದೆ ನೀವೇ ಇದ್ದದ್ದೋ ಅಥವಾ ಕಾಣದ ಕೈಗಳ ‘ಕೈ’ ಅಡಗಿದೆಯೋ?
7. ಅಚ್ಚರಿಯೆನ್ನಿಸಿದ್ದು ನಿಮ್ಮ ಹಣವಿಲ್ಲದ ಪ್ರಜಾಕೀಯ! ಒಂದು ರುಪಾಯಿ ಹಾಕೊಲ್ಲ, ತೆಗೆಯೊಲ್ಲ ಅಂದಿರಿ. ಆದರೆ, ಚುನಾವಣೆಗೆ ಅದರದೇ ಆದ ಖರ್ಚುಗಳಿದ್ದೇ ಇರುತ್ತದೆ. ಪ್ರಚಾರಕ್ಕೆ, ಪತ್ರಕ್ಕೆ ಇತ್ಯಾದಿ. ಪ್ರಚಾರಕ್ಕೆ ಹಣವೇ ನಾ ನೀಡೋದಿಲ್ಲ ಎಂದಿರಿ. ಮುಂದೆ ಇದಕ್ಕೆ ನೀಡುವ ಹಣ ನಿಮ್ಮ ಕುಟುಂಬದ ಸದೃಢತೆಯದೋ ಅಥವಾ ಯಾರಾದರಿಂದಲೂ ತೆಗೆದುಕೊಳ್ಳುವಿರೋ?
8. ಈ ಹಿಂದೆಯೂ ಕೂಡ ತೆಲುಗಿನ ನಟ ಚಿರಂಜೀವಿ ‘ಪ್ರಜಾರಾಜ್ಯಂ’ ಎಂಬ ಪಕ್ಷ ಸ್ಥಾಪಿಸಿ ನಿಮ್ಮಂತೆಯೇ ತತ್ತ್ವ ಸಿದ್ಧಾಂತಗಳನ್ನು ಮಂಡಿಸಿ, ಎಷ್ಟೋ ಜನರ ತಲೆಕೆಡಿಸಿ, ನಂತರ ತನಗೆ ಸ್ಥಾನ ಸಿಕ್ಕ ನಂತರ ಪರ ಪಕ್ಷಕ್ಕೆ ಹಾರಿ, ಕಾರ್ಯಕರ್ತರನ್ನೆಲ್ಲ ನಡು ನೀರಿನಲ್ಲಿ ಕೈ ಬಿಟ್ಟರು. ನೀವು ಚಿರಂಜೀವಿ, ಕೇಜ್ರಿವಾಲ್ ತರಹ ಮುಂದೆ ಹೀಗೆ ವರ್ತಿಸುವುದಿಲ್ಲವೆಂಬ ಯಾವ ಗ್ಯಾರಂಟಿ?
9. ಪ್ರಜಾಕೀಯ ಕೇವಲ ಪದಗಳ ಆಟವಲ್ಲವಷ್ಟೇ? ರಾಜಕೀಯವನ್ನು ಪ್ರಜಾಕೀಯ ಅಂದ ತಕ್ಷಣ ಚುನಾವಣಾ ವ್ಯವಸ್ಥೆ ಬದಲಾಗದು. ಲೋಕಸಭಾ ಚುನಾವಣೆಯಿಂದ ಗ್ರಾಮಪಂಚಾಯತ್ ವರೆಗೆ ವ್ಯವಸ್ಥೆ ಹಾಗೆಯೇ ಮುಂದುವರಿಯುತ್ತದೆ. ಇದನ್ನು ನೀವು ಹೇಗೆ ಬದಲಾಯಿಸುವಿರಿ?
ನಾನೊಬ್ಬ ಸಾಮಾನ್ಯ ಕಾರ್ಮಿಕ! ನನಗೆ ಈ ಪ್ರಜಾಕೀಯವೆನ್ನುವುದೆಲ್ಲ ತೀರಾ ತಿಳಿಯದ ವಿಷಯಗಳಾದರೂ ಒಂದಷ್ಟು ಸಾಮಾನ್ಯ ಜ್ಞಾನವಂತೂ ಇರುವುದರಿಂದ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಇದಕ್ಕೆ ನಿಮ್ಮಿಂದ ಉತ್ತರವನ್ನೂ ನಿರೀಕ್ಷಿಸುತ್ತಿದ್ದೇನೆ.
ನಿಮ್ಮ ಉತ್ತರಗಳು ಸಮರ್ಪಕವಾಗಿದ್ದರೆ ನಾನು ನನ್ನೆಲ್ಲ ಕೆಲಸ ಕಾರ್ಯಗಳನ್ನೂ ಬಿಟ್ಟು ನಿಮ್ಮ ‘ಸ್ವಚ್ಛ’ ಪ್ರಜಾಕೀಯದ ಪ್ರಚಾರಕ್ಕೆ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತೇನೆ. ನಿಮ್ಮ ಉತ್ತರಗಳು ನಿಮ್ಮ ಸಿನಿಮಾ ನೋಡಿ ಸಿಕ್ಕಿದ ಖುಷಿಯ ಅರ್ಧವಾದರೂ ಇರಲಿ ಎಂಬ ನಂಬಿಕೆ ಅಷ್ಟೇ. ನಿಮಗೆ ಮೇಲ್ ಕೂಡ ಮಾಡಿದ್ದೇನೆ. ಉತ್ತರ ಮೇಲ್ನಲ್ಲಿ ಕೊಟ್ಟರೂ ಸರಿಯೇ.
ಕೃಪೆ: ಶಂಕರ ಕಾಳೇಗೌಡ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…