ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಆ ಪತ್ರದಲ್ಲಿ ಏನಿತ್ತು ಗೊತ್ತಾ? ಮುಂದೆ ಓದಿ…
ಗೌರವಾನ್ವಿತ ಉಪೇಂದ್ರರವರಿಗೆ,
ನಾನೊಬ್ಬ ಆಟೋ ಚಾಲಕ. ಬಸವನಗುಡಿಯಲ್ಲಿಯೇ ನಾನು ಆಟೋ ಚಾಲಕನಾಗಿರುವವನು. ನಿಮ್ಮ ಮನೆ ನನ್ನ ಆಟೋ ನಿಲ್ದಾಣಕ್ಕೆ ತೀರಾ ದೂರವಿಲ್ಲ. ನಾನೊಬ್ಬ ಕನ್ನಡದ ಅಭಿಮಾನಿ! ಶಂಕರ್ ನಾಗ್ ಹಾಗೂ ನಿಮ್ಮ ಚಿತ್ರವನ್ನು ಆಟೋದ ಹಿಂದೆ ಮುಂದೆ ಹಾಕಿಕೊಂಡಿದ್ದೇನೆ! ಕಾರಣ ನಿಮ್ಮ ಮೇಲಿನ ಅಭಿಮಾನದಿಂದಷ್ಟೇ.
ಒಟ್ಟಾರೆಯಾಗಿ ಹೇಳಬೇಕೆಂದರೆ ನಾನೊಬ್ಬ ನಿಮ್ಮ ಅಪ್ಪಟ ಅಭಿಮಾನಿ! ನಿಮ್ಮ ಸಿನಿಮಾಗಳನ್ನು ಅದೆಷ್ಟೋ ಸಲ ನೋಡಿದ್ದೇನೆ, ಒಂದೇ ಸಲಕ್ಕೆ ಅರ್ಥವಾಗದಿದ್ದರೂ ಎರಡು ಮೂರನೇ ಸಲ ನೋಡಿ ಅರ್ಥ ಮಾಡಿಕೊಂಡಿದ್ದೇನೆ! ಪೂರ್ತಿಯಾಗಿ ಅರ್ಥಾಗದೇ ಹೋದರೂ ಅದೇನೋ ಖುಷಿಯೊಂದು ನನ್ನಲ್ಲಿರುತ್ತದೆ.
ನೀವು ರಾಜಕೀಯವನ್ನು ‘ಪ್ರಜಾಕೀಯ’ ಮಾಡಲು ಹೊರಟಿದ್ದು ಬಹಳ ಸಂತೋಷವಾಗಿತ್ತು! ಒಬ್ಬ ನಾಯಕ ನಟನಾದ ನೀವು ಹೆಮ್ಮೆಯ ಪ್ರಧಾನಿ ಮೋದಿಯನ್ನು ಬೆಂಬಲಿಸಿದ್ದು ನೋಡಿ ನಮ್ಮ ಕರ್ನಾಟಕಕ್ಕೂ ಒಂದೊಳ್ಳೆಯ ನಾಯಕ ಸಿಗಬಹುದೆಂದು ಅಂದುಕೊಂಡಿದ್ದೆ! ನಿಮ್ಮ ಸುದ್ದಿಗೋಷ್ಠಿ ನೋಡಿದ ಮೇಲೆ ಕೇಳಲೇಬೇಕು ಎಂದೆನಿಸಿದ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ.
2. ನೀವೇ ಹೇಳಿದಂತೆ, ಒಬ್ಬ ಪ್ರಜಾಕಾರಣಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕಾರ್ಮಿಕನ ಹಾಗೆ ಕೆಲಸ ಮಾಡಬೇಕು ಎಂದಿರಿ. ಹಾಗಿದ್ದರೆ, ನರೇಂದ್ರ ಮೋದಿಯವರು ಬೆಳಗ್ಗಿನ ಜಾವ 4ರಿಂದ ರಾತ್ರಿ 12ರವರೆಗೂ ಬರೋಬ್ಬರಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಮ್ಮ ದೃಷ್ಟಿಯಲ್ಲಿ ಅವರು ಈ ಯಾವ ‘ಪ್ರಜಾಕಾರಣ’ದ ವರ್ಗಕ್ಕೆ ಸೇರುತ್ತಾರೆ?
3. ನೀವೇ ಹೇಳಿದಂತೆ, ಚುನಾವಣೆಯ ಪ್ರಚಾರಕ್ಕೆ ಫ್ಲೆಕ್ಸು, ಬ್ಯಾನರ್ಗಳನ್ನು ಹಾಕಿದರೆ ಸ್ವಚ್ಛ ಭಾರತದ ಕನಸು ಕನಸಾಗುಳಿದುಬಿಡುತ್ತೆ ಎಂದಿರಿ. ಆದರೆ ನಿಮ್ಮ ಯಾವುದೇ ಸಿನಿಮಾಗಳ ಬಿಡುಗಡೆ ನೋಡಿದರೂ ಪಟಾಕಿ, ಬ್ಯಾನರ್, ಪ್ಲೆಕ್ಸುಗಳಿಲ್ಲದೇ ನಡೆಯುವುದೇ ಇಲ್ಲ! ಆಗೆಲ್ಲಿತ್ತು, ಈ ಸ್ವಚ್ಛ ಭಾರತದ ಪರಿಕಲ್ಪನೆ?
ಹೂವಿನ ಹಾರ ಹಾಕುವುದು ತಪ್ಪು ಎನ್ನುವುದು ನಿಮ್ಮ ಸಿದ್ಧಾಂತವಾದರೆ, ನಿಮ್ಮ ಸಿನಿಮಾ ಬಿಡುಗಡೆಗಳಲ್ಲೇ ನಿಮ್ಮ ಅದೆಷ್ಟೋ ಉದ್ದದ ಪ್ರತಿಕೃತಿಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿದ್ದನ್ನು ಸ್ವತಃ ನೋಡಿದ್ದೇನೆ. ಸ್ವತಃ ನಿಮಗೂ ಅಭಿಮಾನಿಗಳು ಹಾರ ಹಾಕಿದ್ದಾರೆ! ಆಗ್ಯಾಕೆ, ನೀವು ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಲಿಲ್ಲ? ಅದೇ ದುಡ್ಡನ್ನು ಇನ್ನೊಬ್ಬರಿಗೆ ದಾನ ಮಾಡಿ ಎಂದು ಘೋಷಿಸಲಿಲ್ಲ?
4. ಒಬ್ಬ ‘ಖಾಕಿ’ ಹಾಕಿಬಿಟ್ಟರೆ ಆತ ಕಾರ್ಮಿಕ ಹೇಗಾಗುತ್ತಾನೆ ಸ್ವಾಮಿ? ನೀವು ಖಾಕಿಗೆ ಬೆಲೆ ಕೊಡುವವರಾಗಿದ್ದಾರೆ ನಿಮ್ಮ ರೆಸಾರ್ಟಿನಲ್ಲಿ ನೀವು ಪ್ರೆಸ್ ಮೀಟ್ ಮಾಡುತ್ತಿರಲಿಲ್ಲ ಅಲ್ಲವೇ? ಕಾರ್ಮಿಕರಿರುವ ಸಾರ್ವಜನಿಕ ಸ್ಥಳಗಳಲ್ಲಿಯೇ ನಡೆಸುತ್ತಿದ್ದೀರಿ ಅಲ್ಲವೇ?
5. ನೀವೇ ಕೆಲವು ವರ್ಷಗಳ ಹಿಂದೆ ಹೇಳಿದಂತೆ, ನೀವು ರಾಜಕೀಯಕ್ಕೆ ಇಳಿಯುವ ಮುನ್ನ ಮೊದಲು ಕುಟುಂಬವನ್ನು ಆರ್ಥಿಕವಾಗಿ ರಕ್ಷಿಸಿರಬೇಕು, ನ್ಯಾಯ ಒದಗಿಸಿರಬೇಕು ಎಂದಿದ್ದಿರಿ. ಹಲವು ವರ್ಷಗಳ ಹಿಂದೆಯೇ ನೀವು ಮೂರು ಕೋಟಿಯ ಮನೆ ಕಟ್ಟಿಸಿ, ಬೇಕಾದಷ್ಟು ಆಸ್ತಿ ಮಾಡಿ ನಿಮ್ಮ ಕುಟುಂಬವನ್ನು ತುಂಬಾ ಚೆನ್ನಾಗಿಯೇ ನೋಡಿಕೊಂಡಿರಿ ಮತ್ತು ನ್ಯಾಯ ಒದಗಿಸಿದಿರಿ. ಹಾಗಾದರೆ, ಬರುವ ಪ್ರತಿಯೊಬ್ಬ ಕಾರ್ಯಕರ್ತನೂ (ಅಥವಾ ಪ್ರಜಾಕೀಯದ ಪ್ರಾಯಕರ್ತನೋ?) ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸಿ ಪ್ರಾಯ ಮುಗಿದ ನಂತರವೇ ನಿಮ್ಮ ಪಕ್ಷ ಸೇರಿದ್ದಲ್ಲಿ ನಿಮಗೆ ಅಭ್ಯಂತರವಿದೆಯೇ?
6. ಇಷ್ಟು ದಿನವೂ ಸುಮ್ಮನಿದ್ದ ನೀವು ಅಮಿತ್ ಷಾ ಬರುವ ದಿನವೇ ನಿಮ್ಮ ಪ್ರಜಾಕೀಯದ ಪಾದಾರ್ಪಣೆಯನ್ನು ಘೋಷಿಸಿದಿರಿ. ಪರಿಣಾಮ ಅತ್ಯಂತ ಅಗತ್ಯವಾಗಿದ್ದ ಅವರ ಪ್ರವಾಸ ಕಾರ್ಯಕ್ರಮವೊಂದು ಅಂದುಕೊಂಡಷ್ಟು ಯಶಸ್ವಿಯಾಗಲೇ ಇಲ್ಲ. ಈ ಲಾಜಿಕ್ಕುಗಳ ಹಿಂದೆ ನೀವೇ ಇದ್ದದ್ದೋ ಅಥವಾ ಕಾಣದ ಕೈಗಳ ‘ಕೈ’ ಅಡಗಿದೆಯೋ?
7. ಅಚ್ಚರಿಯೆನ್ನಿಸಿದ್ದು ನಿಮ್ಮ ಹಣವಿಲ್ಲದ ಪ್ರಜಾಕೀಯ! ಒಂದು ರುಪಾಯಿ ಹಾಕೊಲ್ಲ, ತೆಗೆಯೊಲ್ಲ ಅಂದಿರಿ. ಆದರೆ, ಚುನಾವಣೆಗೆ ಅದರದೇ ಆದ ಖರ್ಚುಗಳಿದ್ದೇ ಇರುತ್ತದೆ. ಪ್ರಚಾರಕ್ಕೆ, ಪತ್ರಕ್ಕೆ ಇತ್ಯಾದಿ. ಪ್ರಚಾರಕ್ಕೆ ಹಣವೇ ನಾ ನೀಡೋದಿಲ್ಲ ಎಂದಿರಿ. ಮುಂದೆ ಇದಕ್ಕೆ ನೀಡುವ ಹಣ ನಿಮ್ಮ ಕುಟುಂಬದ ಸದೃಢತೆಯದೋ ಅಥವಾ ಯಾರಾದರಿಂದಲೂ ತೆಗೆದುಕೊಳ್ಳುವಿರೋ?
8. ಈ ಹಿಂದೆಯೂ ಕೂಡ ತೆಲುಗಿನ ನಟ ಚಿರಂಜೀವಿ ‘ಪ್ರಜಾರಾಜ್ಯಂ’ ಎಂಬ ಪಕ್ಷ ಸ್ಥಾಪಿಸಿ ನಿಮ್ಮಂತೆಯೇ ತತ್ತ್ವ ಸಿದ್ಧಾಂತಗಳನ್ನು ಮಂಡಿಸಿ, ಎಷ್ಟೋ ಜನರ ತಲೆಕೆಡಿಸಿ, ನಂತರ ತನಗೆ ಸ್ಥಾನ ಸಿಕ್ಕ ನಂತರ ಪರ ಪಕ್ಷಕ್ಕೆ ಹಾರಿ, ಕಾರ್ಯಕರ್ತರನ್ನೆಲ್ಲ ನಡು ನೀರಿನಲ್ಲಿ ಕೈ ಬಿಟ್ಟರು. ನೀವು ಚಿರಂಜೀವಿ, ಕೇಜ್ರಿವಾಲ್ ತರಹ ಮುಂದೆ ಹೀಗೆ ವರ್ತಿಸುವುದಿಲ್ಲವೆಂಬ ಯಾವ ಗ್ಯಾರಂಟಿ?
9. ಪ್ರಜಾಕೀಯ ಕೇವಲ ಪದಗಳ ಆಟವಲ್ಲವಷ್ಟೇ? ರಾಜಕೀಯವನ್ನು ಪ್ರಜಾಕೀಯ ಅಂದ ತಕ್ಷಣ ಚುನಾವಣಾ ವ್ಯವಸ್ಥೆ ಬದಲಾಗದು. ಲೋಕಸಭಾ ಚುನಾವಣೆಯಿಂದ ಗ್ರಾಮಪಂಚಾಯತ್ ವರೆಗೆ ವ್ಯವಸ್ಥೆ ಹಾಗೆಯೇ ಮುಂದುವರಿಯುತ್ತದೆ. ಇದನ್ನು ನೀವು ಹೇಗೆ ಬದಲಾಯಿಸುವಿರಿ?
ನಾನೊಬ್ಬ ಸಾಮಾನ್ಯ ಕಾರ್ಮಿಕ! ನನಗೆ ಈ ಪ್ರಜಾಕೀಯವೆನ್ನುವುದೆಲ್ಲ ತೀರಾ ತಿಳಿಯದ ವಿಷಯಗಳಾದರೂ ಒಂದಷ್ಟು ಸಾಮಾನ್ಯ ಜ್ಞಾನವಂತೂ ಇರುವುದರಿಂದ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಇದಕ್ಕೆ ನಿಮ್ಮಿಂದ ಉತ್ತರವನ್ನೂ ನಿರೀಕ್ಷಿಸುತ್ತಿದ್ದೇನೆ.
ನಿಮ್ಮ ಉತ್ತರಗಳು ಸಮರ್ಪಕವಾಗಿದ್ದರೆ ನಾನು ನನ್ನೆಲ್ಲ ಕೆಲಸ ಕಾರ್ಯಗಳನ್ನೂ ಬಿಟ್ಟು ನಿಮ್ಮ ‘ಸ್ವಚ್ಛ’ ಪ್ರಜಾಕೀಯದ ಪ್ರಚಾರಕ್ಕೆ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತೇನೆ. ನಿಮ್ಮ ಉತ್ತರಗಳು ನಿಮ್ಮ ಸಿನಿಮಾ ನೋಡಿ ಸಿಕ್ಕಿದ ಖುಷಿಯ ಅರ್ಧವಾದರೂ ಇರಲಿ ಎಂಬ ನಂಬಿಕೆ ಅಷ್ಟೇ. ನಿಮಗೆ ಮೇಲ್ ಕೂಡ ಮಾಡಿದ್ದೇನೆ. ಉತ್ತರ ಮೇಲ್ನಲ್ಲಿ ಕೊಟ್ಟರೂ ಸರಿಯೇ.
ಕೃಪೆ: ಶಂಕರ ಕಾಳೇಗೌಡ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…