ಸುದ್ದಿ

ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

204

ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ ಆದಿವಾಸಿಗಳ ಅರಣ್ಯದ ಮೇಲಿನ ಹಕ್ಕುಗಳ ಅರ್ಜಿಗಳ ಪರಿಶೀಲನಾ ಕಾರ್ಯಕೂಡ ಬಿರುಸಿನಿಂದ ನಡೆಯುತ್ತಿದೆ. 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಆದಿವಾಸಿಗಳಿಗೆ ದಯಪಾಲಿಸಿದ್ದ ಇದೇ ಸರ್ವೋಚ್ಛನ್ಯಾಯಾಲಯವು ಇದೀಗ ಎಲ್ಲರನ್ನು ಸಾಮೂಹಿಕವಾಗಿ ಅರಣ್ಯಗಳಿಂದ ತೆರವುಗೊಳಿಸಬೇಕು ಎಂಬ ತೀರ್ಪು ನೀಡುವುದರ ಮೂಲಕ ತನ್ನ ಧ್ವಂದ್ವ ನೀತಿಯನ್ನು ಅನಾವರಣಗೊಳಿಸಿದೆ.

ಮೂರು ಕೋಟಿಗೂ ಅಧಿಕ ಮಂದಿ ಬುಡಕಟ್ಟು ಸಮುದಾಯದ ಜನತೆ ಭಾರತದ ಅರಣ್ಯಗಳಲ್ಲಿ ಅನೇಕ ಶತಮಾನಗಳದಿಂದಲೂ ಬದುಕು ಕಟ್ಟಿಕೊಂಡಿದ್ದಾರೆ. ಅವರ ಜೊತೆಗೆ ಅರಣ್ಯದಂಚಿನಲ್ಲಿ ಬದುಕುತ್ತಿರುವ ಹಿಂದುಳಿದ ಹಲವಾರು ಸಮುದಾಯಗಳು, ಬೇಸಾಯ ಮತ್ತು ಅರಣ್ಯದ ಕಿರುಉತ್ಪನ್ನಗಳನ್ನು ನಂಬಿ ಬದುಕುತ್ತಿವೆ. ಈ ತೀರ್ಪಿನ ವಿರುದ್ಧ ಈಗಾಗಲೇ ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳು ಮೇಲ್ಮನವಿ ಸಲ್ಲಿಸಿವೆ. ಜೊತೆಗೆ ದೇಶ್ಯಾದ್ಯಂತ ನಾಗರೀಕರಿಂದ ಪ್ರತಿಭಟನೆ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಇದನ್ನು ಮನಗಂಡ ನ್ಯಾಯಾಲಯ ತಾತ್ಕಾಲಿಕವಾಗಿ ತನ್ನ ತೀರ್ಪನ್ನು ತಡೆ ಹೊಡಿದಿದೆ. ಈ ನಡುವೆ ಕೇಂದ್ರ ಸರ್ಕಾರದ ಅರಣ್ಯ ಸಚಿವಾಲಯವು ಅತ್ಯಂತ ಗುಪ್ತವಾಗಿ ನೂತನ ಅರಣ್ಯಕಾಯ್ದೆಯೊಂದನ್ನು ರಚಿಸಿದ್ದು, ಅದನ್ನು ಜಾರಿಗೆ ತರಲು ಹುನ್ನಾರ ನಡೆಸಿದೆ. ಅಕಸ್ಮಾತ್ ಈ ಕಾಯ್ದೆಯು ಜಾರಿಗೆ ಬಂದಿದ್ದೇ ಆದರೆ, ಇದನ್ನು ನಾವು ಭಾರತದ ಆದಿವಾಸಿಗಳ ಪಾಲಿಗೆ ಮರಣ ಶಾಸನ ಎಂದು ಬಣ್ಣಿಸಬಹುದು.

ಆದಿವಾಸಿಗಳೆಂದರೆ, ಆರಣ್ಯ ನಾಶಕರು ಎಂದು ನಂಬಿರುವ ಇಂದಿನ ಆಡಳಿತ ವ್ಯವಸ್ಥೆಯ ತಲೆಯೊಳಗೆ ಮಲ ತುಂಬಿಕೊಂಡಿದೆ ಎಂದರೆ, ತಪ್ಪಾಗಲಾರದು. ಈ ದೇಶದಲ್ಲಿ ಇನ್ನೂ ಅರಣ್ಯ ಮತ್ತು ಅಲ್ಲಿನ ಜೀವಸಂಕುಲ ಜೀವಂತವಾಗಿದ್ದರೆ ಅಥವಾ ಸುರಕ್ಷಿತವಾಗಿದ್ದರೆ ಅದು ಅರಣ್ಯವಾಸಿಗಳಾದ ಆದಿವಾಸಿಗಳಿಂದ ಮತ್ತು ಅವರು ನಂಬಿಕೊಂಡು ಬಂದಿರುವ ನಮ್ಮ ನೆಲಮೂಲ ಸಂಸ್ಕೃತಿ ಮತ್ತು ಪರಂಪರೆಯಿಂದ ಎಂಬುದನ್ನು ನಾವ್ಯಾರೂ ಮರೆಯುವಂತಿಲ್ಲ. ಇದರ ಜೊತೆಗೆ ನಮ್ಮ ಜನಪದರು ಗ್ರಾಮೀಣ ಭಾಗದಲ್ಲಿ ನಾಗಬಮ. ದೇವರ ಕಾಡು ಹೆಸರಿನಲ್ಲಿ ಅರಣ್ಯವನ್ನು ಪೋಷಿಸಿಕೊಂಡು ಬಂದಿದ್ದಾರೆ. ಅರಣ್ಯಾಧಿಕಾರಿಗಳು ಎಂಬ ಈ ಬಿಳಿಯಾನೆಗಳಿಂದ ಭಾರತದಲ್ಲಿ ಅರಣ್ಯಗಳು ಮತ್ತು ಅಲ್ಲಿನ ಪ್ರಾಣಿ ಮತ್ತು ಪಕ್ಷಿ ಸಂಕುಲ ಅಭಿವೃದ್ಧಿಯಾಗಿದ್ದರೆ ಅದು ಅವರ ಕಡತಗಳಲ್ಲಿ ಮಾತ್ರ.

ಪಕ್ಷಭೇದವಿಲ್ಲದೆ ಎಲ್ಲಾ ಕೇಂದ್ರ ಸರ್ಕಾರಗಳು ಆದಿವಾಸಿಗಳ ಬದುಕಿನ ಜೊತೆ ನಿರಂತರವಾಗಿ ಚೆಲ್ಲಾಟವಾಡುತ್ತಲೇ ಬಂದಿವೆ. ಅವರಿಗೊಂದು ಶಾಶ್ವತ ನೆಲೆ ಕಲ್ಪಿಸಿಕೊಡಲು ವಿಫಲವಾಗಿವೆ. ಈಗವರೆಗಿನ ಕಾನೂನುಗಳು, ತಿದ್ದುಪಡಿಗಳು ಮತ್ತು ಶಿಫಾರಸ್ಸುಗಳು ಅವರನ್ನೂ ಸದಾ ಅತಂತ್ರದ ಸ್ಥಿತಿಯಲ್ಲಿ ನಿಲ್ಲಿಸಿವೆ. 1976 ರಲ್ಲಿ ರಾಷ್ಟ್ರೀಯ ಕೃಷಿ ಆಯೋಗವು ಆದಿವಾಸಿಗಳನ್ನು ಅರಣ್ಯದಿಂದ ಹೊರದಬ್ಬಬೇಕೆಂದು ಶಿಫಾರಸ್ಸು ಮಾಡಿತ್ತು. ಇದರ ಅನ್ವಯ 1980ರಲ್ಲಿ ಭಾರತದ ಅರಣ್ಯ ರಕ್ಷಣಾ ಕಾಯ್ದೆಯು ಜಾರಿಗೆ ಬಂದಿತು. ಆದರೆ, 1988 ರಲ್ಲಿ ಜಾರಿಯಾದ ಮತ್ತೊಂದು ಭಾರದ ಅರಣ್ಯ ನಿಯಮವೊಂದು ಜಾರಿಗೆ ಬಂದು ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸದೆ ಕರುಣೆ ತೋರಿತು. ಜೊತೆಗೆ 1996 ರಲ್ಲಿ ಅಸ್ತಿತ್ವಕ್ಕೆ ತರಲಾದ ಬುಡಕಟ್ಟು ಜನಾಂಗಗಳ ರಕ್ಷಾಣಾ ಕಾಯ್ದೆಯು ಆದಿವಾಸಿಗಳ ಪಾಲಿಗೆ ರಕ್ಷಣಾ ಗೋಡೆಯಾಗಿ ಪರಿಣಮಿಸಿತು. ಇವೆಲ್ಲಾ ಗೊಂದಲಗಳ ನಡುವೆಯೂ ಅರಣ್ಯವಾಸಿಗಳ ಬಲುದಿನಗಳ ಬೇಡಿಕೆಯಾದ ‘ಜಲ್, ಜಂಗಲ್, ಜಮೀನ್’ ( ಜಲ, ಅರಣ್ಯ ಮತ್ತು ಜಮೀನು) ಪೂರ್ಣವಾಗಿ ಯಶಸ್ವಿಯಾಗಲಿಲ್ಲ. ನಕ್ಸಲ್ ಹಿಂಸಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತ್ತು ಆದಿವಾಸಿಗಳು ಮಾವೋವಾದಿ ನಕ್ಸಲರ ಹಿಡಿತಕ್ಕೆ ಸಿಲುಕದಿರಲಿ ಎಂಬ ಆಲೋಚನೆಯಿಂದ 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಅವರಿಗೆ ದಯಪಾಲಿಸಿದ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪಿನಿಂದಾಗ ಅವರುಗಳು ಒಂದಿಷ್ಟು ಕಾಲ ನೆಮ್ಮದಿಯಿಂದ ಇದ್ದರು. ಜೊತೆಗೆ ತಮ್ಮ ಹಕ್ಕು ಸ್ಥಾಪಿಸಲು ಹೋರಾಡುತ್ತಿದ್ದಾರೆ. ಇಂದಿಗೂ ಕೂಡ ದೇಶಾದ್ಯಂತ ರಾಜ್ಯಗಳ ಅರಣ್ಯ ಇಲಾಖೆಗಳಲ್ಲಿ ಅರಣ್ಯವಾಸಿಗಳು ಅಧಿಕೃತ ವಾಸ ಕುರಿತಂತೆ ಮತ್ತು ಅವರು ಹೊಂದಿರುವ ಭೂಮಿ ಕುರಿತಂತೆ ನಾಲ್ಕು ಲಕ್ಷದ 21 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಕೊಳೆಯುತ್ತಿವೆ. ಈವರೆಗೆ 79 ಸಾವಿರ ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಕರ್ನಾಟಕದಲ್ಲಿ 53 ಸಾವಿರದ 785 ಅರ್ಜಿಗಳು ಬಾಕಿ ಉಳಿದಿವೆ. ಛತ್ತೀಸ್ ಗಡ ರಾಜ್ಯದ ಒಟ್ಟು ವಿಸ್ತಿರ್ಣದ ಶೇಕಡ 44ರಷ್ಟು ಅರಣ್ಯ ಭೂಮಿಯಿದ್ದು ಅರಣ್ಯವಾಸಿಗಳಿಗೆ ಅದು ಶಾಶ್ವತ ನೆಲೆಯಾಗಿದೆ. ಜೊತೆಗೆ ಮಧ್ಯಪ್ರದೇಶ ಮತ್ತು ಒಡಿಸ್ಸಾ ರಾಜ್ಯದಲ್ಲಿಯೂ ಕೂಡ ಅತ್ಯಧಿಕ ಮಂದಿ ಅರಣ್ಯವಾಸಿಗಳಿದ್ದಾರೆ. ಸರ್ವೋಚ್ಛ ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮವಾದ ವಿಷಯಗಳನ್ನು ಎಲ್ಲಾ ಆಯಾಮಗಳಿಂದಲೂ ಹಾಗೂ ಆದಿವಾಸಿಗಳ ಇತಿಹಾಸವನ್ನು, ಅವರ ವರ್ತಮಾನದ ಬದುಕನ್ನು ಮತ್ತು ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ತನ್ನ ತೀರ್ಪನ್ನು ನೀಡಬೇಕಿದೆ.

ಈ ಹೊಸ ಕಾಯ್ದೆಯನ್ನು ರೂಪಿಸುವಾಗಪ್ರಜ್ಞಾಪೂರ್ವಕವಾಗಿ ಕೇಂದ್ರ ಬುಡಕಟ್ಟು ಸಚಿವಾಲಯದ ಅಧಿಕಾರಿಗಳನ್ನು ಮತ್ತು ಪರಿಸರವಾದಿಗಳು ಮತ್ತು ಮಾನವ ಹಕ್ಕು ಆಯೋಗದ ಸದಸ್ಯರನ್ನು ದೂರ ಇಟ್ಟು ಕೇವಲ ಅರಣ್ಯಾಧಿಕಾರಿಗಳು  ಮಾತ್ರ ಇದರಲ್ಲಿ ಭಾಗಿಯಾಗಿದ್ದಾರೆ. ಇದು ಆಡಳಿತ ಶಾಹಿಯ ಹುನ್ನಾರದಂತೆ ಕಾಣುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…

  • ಸುದ್ದಿ

    31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

    ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….

  • ವ್ಯಕ್ತಿ ವಿಶೇಷಣ

    ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

    ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…