ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.
ಆದರೆ ಆಧಾರ್ ಕಾರ್ಡ್ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.
ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…
ಆಧಾರ್ ಕಾರ್ಡ್ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್ ಸೈಟ್ ಸಂದರ್ಶಿಸಬೇಕು.
ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.
ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್ ಮಾಡುವ ಮೂಲಕ ಆಯ್ದುಕೊಳ್ಳಬೇಕು.
ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯ ಪೋನಿಗೆ ಒನ್ ಟೈಮ್ ಪಾಸ್ವರ್ಡ್ (ಓಟಿಪಿ) ಬರುತ್ತದೆ.
ಟೆಕ್ಸ್ಟ್ ವೆರಿಫಿಕೇಶನ್ ಬಾಕ್ಸ್ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :
ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.
ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್ಮಿಟ್’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.
ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್ಎನ್ ನಂಬರ್ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್ಲೈನ್ನಲ್ಲೇ ತಿಳಿದುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್ಪಿಜಿ ಸಿಲಿಂಡರ್ಗಳ…
ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…