ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.
ಆದರೆ ಆಧಾರ್ ಕಾರ್ಡ್ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.
ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…
ಆಧಾರ್ ಕಾರ್ಡ್ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್ ಸೈಟ್ ಸಂದರ್ಶಿಸಬೇಕು.
ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.
ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್ ಮಾಡುವ ಮೂಲಕ ಆಯ್ದುಕೊಳ್ಳಬೇಕು.
ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯ ಪೋನಿಗೆ ಒನ್ ಟೈಮ್ ಪಾಸ್ವರ್ಡ್ (ಓಟಿಪಿ) ಬರುತ್ತದೆ.
ಟೆಕ್ಸ್ಟ್ ವೆರಿಫಿಕೇಶನ್ ಬಾಕ್ಸ್ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :
ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.
ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್ಮಿಟ್’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.
ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್ಎನ್ ನಂಬರ್ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್ಲೈನ್ನಲ್ಲೇ ತಿಳಿದುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…