News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

10474

ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.

ಆದರೆ ಆಧಾರ್‌ ಕಾರ್ಡ್‌ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್‌ ಸಂಖ್ಯೆ, ಇ-ಮೇಲ್‌ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.

ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್‌ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…

ಆಧಾರ್‌ ಕಾರ್ಡ್‌ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್‌ ಸೈಟ್‌ ಸಂದರ್ಶಿಸಬೇಕು.

 

  • ಆಧಾರ್ ವೆಬ್ಸೈಟ್’ಗೆ ಭೇಟಿ ನೀಡಿ:-

ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್‌ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.

 

ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್‌ ಮಾಡುವ ಮೂಲಕ ಆಯ್ದುಕೊಳ್ಳಬೇಕು.

ನಿಮ್ಮ ಆಧಾರ್‌ ನಂಬರ್‌ ಎಂಟರ್‌ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್‌ ಸಂಖ್ಯೆಯ ಪೋನಿಗೆ ಒನ್‌ ಟೈಮ್‌ ಪಾಸ್‌ವರ್ಡ್‌ (ಓಟಿಪಿ) ಬರುತ್ತದೆ.

ಟೆಕ್ಸ್‌ಟ್‌ ವೆರಿಫಿಕೇಶನ್‌ ಬಾಕ್ಸ್‌ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್‌ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :

  • ಏನೆಲ್ಲಾ ಅಪ್ಡೇಟ್ ಮಾಡಬಹುದು?

ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.

ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್‌ಮಿಟ್‌’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್‌ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.

ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್‌ಎನ್‌ ನಂಬರ್‌ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್‌ಲೈನ್‌ನಲ್ಲೇ ತಿಳಿದುಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಆರೋಗ್ಯ

    ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • ಸುದ್ದಿ

    ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್! ಒಂದು ಲೀಟರ್ ಗೆ ಎಷ್ಟು ಗೊತ್ತಾ?

    ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…