Animals

ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

246

ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಆಫ್ರಿಕನ್ ಆನೆ

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು  ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ  ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ

ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಏಷ್ಯಾದ  ಆನೆ


ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.

ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.

ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ವಿಚಿತ್ರ ಆದರೂ ಸತ್ಯ

    80 ಲಕ್ಷ ವರ್ಷ ಹಿಂದಿನ ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ ..!ತಿಳಿಯಲು ಈ ಲೇಖನ ಓದಿ …

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…