News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Animals

ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

247

ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಆಫ್ರಿಕನ್ ಆನೆ

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು  ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ  ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ

ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಏಷ್ಯಾದ  ಆನೆ


ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.

ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.

ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

    ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ಸರ್ಕಾರದ ಯೋಜನೆಗಳು

    ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

    ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.

  • inspirational

    Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ

    2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್‌ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…

  • ಜ್ಯೋತಿಷ್ಯ

    150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

    ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.