Animals

ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

246

ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಆಫ್ರಿಕನ್ ಆನೆ

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು  ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ  ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ

ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಏಷ್ಯಾದ  ಆನೆ


ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.

ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.

ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

    ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…

  • ಗ್ಯಾಜೆಟ್

    ಜಗತ್ತಿನಾದ್ಯಂತ ವೈರಲ್ ಆಗಿರುವ ಈ ಆಪ್ನಿಂದ, ನೀವು ಯಾರಿಗೆ ಯಾವುದೇ ತರದ ಮೆಸೇಜ್ ಮಾಡಿದ್ರೂ ಸಹ, ಯಾರು ಮಾಡಿದ್ದು ಅಂತ ತಿಳಿಯೋದಿಲ್ಲ!ಹೇಗೆ ಗೊತ್ತಾ?ಈ ಲೇಖನಿ ಓದಿ…

    ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ವಿಜ್ಞಾನ

    ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

    ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…

  • ಸುದ್ದಿ

    ‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

    ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…