News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Animals

ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

238

ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು ಪ್ರಸಿದ್ಧ. ಆನೆ ಜಗತ್ತಿನಲ್ಲಿ ನೆಲದ ಮೇಲೆ ವಾಸಿಸುವ ಪ್ರಾಣಿಗಳಲ್ಲಿ ಅತಿ ದೊಡ್ಡದು. ಅಲ್ಲದೆ ನೆಲದ ಮೇಲಿನ ಪ್ರಾಣಿಗಳಲ್ಲಿ ಆನೆಯ ಗರ್ಭಾವಸ್ಥೆಯ ಕಾಲ (೨೨ ತಿಂಗಳುಗಳು) ಎಲ್ಲಕ್ಕಿಂತ ದೀರ್ಘ. ಹುಟ್ಟಿದಾಗ ಆನೆಯ ಮರಿಯು ೧೨೦ ಕಿ.ಗ್ರಾಂ.ವರೆಗೆ ತೂಗುವುದಿದೆ. ಸುಮಾರು ೭೦ ವರ್ಷಗಳ ಕಾಲ ಆನೆಯು ಜೀವಿಸಬಲ್ಲುದು

ಆಫ್ರಿಕನ್ ಆನೆ

ಅನಾದಿಕಾಲದಿಂದಲೂ ಮಾನವನಿಗೆ ಆನೆಯು ಒಂದು ಪ್ರತಿಷ್ಠೆಯ ಸಂಕೇತವಾಗಿದೆ. ಅಂದಿನ ಭಾರತದ ಅರಸರ ಪಟ್ಟದಾನೆಯು ಸಮಾಜದಲ್ಲಿ ಅತಿ ಗೌರವಾನ್ವಿತ ಸ್ಥಾನವನ್ನು ಹೊಂದಿತ್ತು. ಸೈನ್ಯದ ಶಕ್ತಿಯು ಗಜಬಲವನ್ನು ಹೆಚ್ಚಾಗಿ ಅವಲಂಬಿಸಿತ್ತು. ಉಳಿದಂತೆ ಆನೆಯನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಬಳಸುವ ವಾಡಿಕೆ ಇಂದಿಗೂ ಇದೆ. ದಕ್ಷಿಣ ಭಾರತದ ಬಹಳಷ್ಟು ದೇವಸ್ಥಾನಗಳು  ತಮ್ಮದೇ ಆನೆಯನ್ನು ಸಾಕಿಕೊಂಡಿವೆ. ಕೇರಳದ ತ್ರಿಸ್ಸೂರಿನ  ಪೂರಮ್ ಉತ್ಸವ ಆನೆಗಳೇ ಕೇಂದ್ರವಾಗುಳ್ಳ ಒಂದು ಅತ್ಯಾಕರ್ಷಕವಾದ ಉತ್ಸವ

ಗಜ ಗರ್ಭ ನಾಲ್ಕರಿಂದ ಐದು ವರ್ಷಗಳಿಗೆ ಒಮ್ಮೆ ಆನೆ ಮರಿ ಹಾಕುತ್ತದೆ. ಗಜ ಗರ್ಭ ಎಂದು ಕೇಳಿರ್ತೀರಿ. ಆನೆಯ ಗರ್ಭಾವಸ್ಥೆ ಅವಧಿ 22 ತಿಂಗಳು. ಅವುಗಳ ಬೆಳವಣಿಗೆ ಪೂರ್ಣ ಪ್ರಮಾಣದಲ್ಲಿ ಅಗಲು 17 ವರ್ಷವಾಗುತ್ತದೆ. ಅಂದಹಾಗೆ ಗಂಡಾನೆಗಳಿಗೆ ಮಾತ್ರ ದಂತವಿರುತ್ತದೆ

ಹೆಣ್ಣಾನೆಯೇ ಚೀಫ್ ಹೆಣ್ಣಾನೆಗಳು ಗುಂಪಿನಲ್ಲಿದ್ದರೆ, ಗಂಡಾನೆಗಳು ಒಂಟಿಯಾಗಿರುತ್ತವೆ. ಹಿರಿಯ ಹೆಣ್ಣಾನೆಯೊಂದು ಗುಂಪಿನ ಮುಖಂಡತ್ವ ವಹಿಸಿರುತ್ತದೆ. ಆ ಗುಂಪಿನ ಹಿರಿಯ ಆನೆಗಳು ಹಿಂದೆ ತೋರಿಸಿದ ದಾರಿಯಲ್ಲೇ ಅವು ಮೇವು-ನೀರಿಗಾಗಿ ಹುಡುಕುತ್ತಾ ಸಾಗುತ್ತವೆ. ಅಂತಹ ದಾರಿಯನ್ನೇ ಆನೆ ಪಥ ಅಥವಾ ಎಲಿಫೆಂಟ್ ಕಾರಿಡಾರ್ ಅನ್ನೋದು.

ಏಷ್ಯಾದ  ಆನೆ


ಸೊಂಡಿಲ ವಿಶೇಷ ಆನೆಯ ವಿಶೇಷವೇ ಅದರ ಸೊಂಡಿಲು. ಹೆಚ್ಚಿನ ಚಟುವಟಿಕೆಗಳು ಸೊಂಡಿಲ ಮೂಲಕವೇ ಮಾಡುತ್ತವೆ. ಚಿಕ್ಕದೊಂದು ಗರಿಯನ್ನು ನಾಜೂಕಾಗಿ ಕೀಳುವುದಿರಲಿ, ದೊಡ್ಡದೊಂದು ಮರವನ್ನು ನೆಲಕ್ಕೆ ಉರುಳಿಸುವುದಿರಲಿ ಅದನ್ನು ಸೊಂಡಿಲ ಮೂಲಕವೇ ಮಾಡುತ್ತವೆ.
ನೆನಪು, ವಾಸನಾ ಗ್ರಹಣ ಶಕ್ತಿ ಅದ್ಭುತ ಇನ್ನು ಆನೆಗಳ ವಾಸನಾ ಗ್ರಹಣ ಶಕ್ತಿ ಅದ್ಭುತ. ಹನ್ನೆರಡು ಮೈಲು ದೂರವಿರುವ ನೀರಿನ ಪ್ರದೇಶವಾದರೂ ವಾಸನೆ ಮೂಲಕವೇ ಗ್ರಹಿಸುತ್ತವೆ. ಅದೇ ರೀತಿ ಅವುಗಳ ಸ್ಮರಣ ಶಕ್ತಿಯೂ ಅಮೋಘ. ಆ ಕಾರಣಕ್ಕೆ ಇಂಗ್ಲಿಷ್ ನಲ್ಲಿ ಎಲೆಫೆಂಟ್ ಮೆಮೊರಿ ಎಂಬ ಮಾತೇ ರೂಢಿಯಲ್ಲಿದೆ.

ಶಬ್ದ ಹೊರಡಿಸುವುದರಲ್ಲೂ ಸೂಕ್ಷ್ಮ ಗಾಳಿಯ ಮೂಲಕ ಶಬ್ದ ಹೊರಡಿಸುವುದರಲ್ಲೂ ಅಂಥ ಶಬ್ದವನ್ನು ಗ್ರಹಿಸುವುದರಲ್ಲೂ ಆನೆ ಬಹಳ ವಿಶಿಷ್ಟ ಪ್ರಾಣಿ. ಎಷ್ಟೋ ದೂರದಲ್ಲಿನ ಶಬ್ದವನ್ನೂ ಚೆನ್ನಾಗಿ ಗ್ರಹಿಸಿ, ಉತ್ತರ ಕೂಡ ನೀಡುತ್ತದೆ.

ದಿನಕ್ಕೆ 100- 150 ಕೆ.ಜಿ. ಆಹಾರ ಪಳಗಿದ ಆನೆ ಎಷ್ಟು ಸೌಮ್ಯವೋ ಕಾಡಾನೆ ಅಷ್ಟೇ ಅಪಾಯಕಾರಿ. ದೊಡ್ಡ ಆನೆಯೊಂದು ದಿನಕ್ಕೆ 100- 150 ಕೆ.ಜಿ. ಆಹಾರ ಸೇವಿಸುತ್ತದೆ. ದಿನದಲ್ಲಿ ಒಮ್ಮೆಯಾದರೂ ನೀರು ಕುಡಿಯುತ್ತದೆ. ಹಾಗಾಗಿ ನೀರಿರುವ ಜಾಗವನ್ನು ಆಯ್ಕೆ ಮಾಡಿಕೊಳ್ಳುತ್ತವೆ


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…

  • ಉಪಯುಕ್ತ ಮಾಹಿತಿ

    ನಿಮ್ಮ ಮೂಗಿನ ಮೇಲಿನ ಬ್ಲಾಕ್ ಹೆಡ್ಸ್ ಅನ್ನು ಸುಲಭವಾಗಿ ಹೋಗಲಾಡಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..

  • ಉಪಯುಕ್ತ ಮಾಹಿತಿ

    ನಮ್ಮ ಅಡುಗೆ ಮನೆಯ ವೇಸ್ಟ್ – ನಮ್ಮ ಮಣ್ಣಿಗೆ ಬೆಸ್ಟ್

    1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…